July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: “ಗೃಹಜ್ಯೋತಿ ಹೆಚ್ಚುವರಿ ಮಾಹಿತಿ ಸಂಗ್ರಹಣೆಯ” ಪ್ರಗತಿ ಸಭೆ

ಬೆಳ್ತಂಗಡಿ: ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯ ಮಹತ್ವಕಾಂಕ್ಷಿ ಯೋಜನೆಯಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ “ಗೃಹಜ್ಯೋತಿ ಹೆಚ್ಚುವರಿ ಮಾಹಿತಿ ಸಂಗ್ರಹಣೆ” ಪ್ರಗತಿ ಸಭೆಯನ್ನು ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆಯು ಸಮಿತಿಯ ಅಧ್ಯಕ್ಷ ಪದ್ಮನಾಭ ಸಾಲ್ಯಾನ್‌ ರವರ ಅಧ್ಯಕ್ಷತೆಯಲ್ಲಿ, ಸದಸ್ಯ ಕಾರ್ಯದರ್ಶಿ, ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್‌ ಎನ್. ಹಾಗೂ ಮೆಸ್ಕಾಂ ಬೆಳ್ತಂಗಡಿ ಹಾಗೂ ಉಜಿರೆ ಉಪವಿಭಾಗದ ಎಲ್ಲಾ ಅಧಿಕಾರಿಗಳ ಉಪಸ್ಥಿತಿಯಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತಿಯ ಗ್ಯಾರಂಟಿ ಅನುಷ್ಟಾನ ಸಮಿತಿ ಕಛೇರಿಯಲ್ಲಿ ನಡೆಯಿತು.

ಗೃಹಜ್ಯೋತಿ ಯೋಜನೆಯಡಿ ಉಜಿರೆ ಮತ್ತು ಬೆಳ್ತಂಗಡಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಗತಿ ನೀಡುತ್ತಾ ಉಜಿರೆ ಉಪವಿಭಾಗದ ಒಟ್ಟು 25581 ಫಲಾನುಭವಿಗಳಲ್ಲಿ 17169 ಫಲಾನುಭವಿಗಳ ಮಾಹಿತಿ ಸಂಗ್ರಹಿಸಲಾಗಿ ಶೇಕಡಾ 67.12% ಪ್ರಗತಿ ಸಾಧಿಸಲಾಗಿದೆ. ಬೆಳ್ತಂಗಡಿ ಉಪವಿಭಾಗದ ಒಟ್ಟು 47477 ಫಲಾನುಭವಿಗಳಲ್ಲಿ 22881 ಫಲಾನುಭವಿಗಳ ಮಾಹಿತಿ ಸಂಗ್ರಹಿಸಿ ಶೇಕಡಾ 48.19% ಪ್ರಗತಿ ಸಾಧಿಸಲಾಗಿದೆ. ಬೆಳ್ತಂಗಡಿ ತಾಲೂಕಿನ ಎಲ್ಲಾ ಉಪವಿಭಾಗದ ಪವರ್‌ಮ್ಯಾನ್ ಗಳು ಮನೆಮನೆಗೆ ತೆರಳಿ ಮಾಹಿತಿ ಸಂಗ್ರಹಿಸುತ್ತಿರುವ ಕಾರ್ಯವು ಪ್ರಗತಿಯಲ್ಲಿದ್ದು, ಆಗಸ್ಟ್‌ 2026ರೊಳಗೆ ಸರಕಾರವು ನೀಡಿದ ಗಡುವಿನ ಮೊದಲು ತಾಲೂಕಿನಲ್ಲಿ ಶೇಕಡಾ 100% ಪ್ರಗತಿಯನ್ನು ಸಾಧಿಸಲು ಕ್ರಮ ವಹಿಸಲು ಸಲಹೆ ನೀಡಿದರು.

ಬೆಳ್ತಂಗಡಿ ತಾಲೂಕಿನ ಎಲ್ಲಾ ಮೆಸ್ಕಾಂ ಸಿಬ್ಬಂದಿಗಳಿಗೆ ಅಭಿನಂದನೆಯನ್ನು ಸಲ್ಲಿಸುತ್ತಾ, ಬೆಳ್ತಂಗಡಿ ತಾಲೂಕು ವ್ಯಾಪ್ತಿಯಲ್ಲಿ ಹಲವಾರು ಕಡೆಗಳಲ್ಲಿ ಮೊಬೈಲ್‌ ನೆಟ್‌ವರ್ಕ್ ಇಲ್ಲದೇ ಇರುವುದರಿಂದ ಸಂಬಂಧಪಟ್ಟ ಗ್ರಾಮ ಪಂಚಾಯತ್‌ಗಳಲ್ಲಿ ಹೆಚ್ಚುವರಿ ಮಾಹಿತಿ ಸಂಗ್ರಹಿಸುವ ಕಾರ್ಯವನ್ನು ಹಮ್ಮಿಕೊಳ್ಳಲು ಮಾನ್ಯ ಅಧ್ಯಕ್ಷರು ಹಾಗೂ ಪಂಚಗ್ಯಾರಂಟಿ ಸದಸ್ಯರು ಸಭೆಯಲ್ಲಿ ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು. ಈ ಬಗ್ಗೆ ಎಲ್ಲಾ ಗ್ರಾಮ ಪಂಚಾಯತ್‌ಗಳಿಗೆ ಸೂಚಿಸುವುದೆಂದು ಕಾರ್ಯನಿರ್ವಹಣಾಧಿಕಾರಿಯರು ಸಭೆಗೆ ತಿಳಿಸಿದರು. ಮಳೆಗಾಲದ ಪೂರ್ವ ತಯಾರಿಯಲ್ಲಿ ವಿದ್ಯುತ್‌ ಕಂಬಗಳಿಗೆ ತಗುಲಿರುವ ಮರದ ಕೊಂಬೆಗಳನ್ನು ಶೀಘ್ರ ತೆರವುಗೊಳಿಸುವಂತೆ ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಲಾಯಿತು.

ಸಭೆಯಲ್ಲಿ ಬೆಳ್ತಂಗಡಿ ತಾಲೂಕಿನ ಉಜಿರೆ ಮತ್ತು ಬೆಳ್ತಂಗಡಿ ಉಪ ವಿಭಾಗದ ಎಲ್ಲಾ ಕಿರಿಯ ಇಂಜಿನಿಯರ್‌ಗಳು, ಪಂಚ ಗ್ಯಾರಂಟಿ ಯೋಜನೆಗಳ ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಜೋಕಿಂ ಡಿ ಸೋಜಾ, ತಾಲೂಕು ಅನುಷ್ಟಾನ ಸಮಿತಿಯ ಸದಸ್ಯರಾದ ಶ್ರೀಮತಿ ವಂದನಾ ಕುಮಾರಿ, ಶ್ರೀಮತಿ ಸೌಮ್ಯ ಲಾಯಿಲ, ಶ್ರೀಮತಿ ಮೆರಿಟಾ ಪಿಂಟೋ, ವೀರಪ್ಪ ಮೊಯ್ಲಿ, ವಿಜಯ ಗೌಡ ಬೆಳಾಲು, ಶರೀಫ್‌ ಶಬರಬೈಲ್‌, ಕೆ.ನೇಮಿರಾಜ್‌ ಕಿಲ್ಲೂರು, ಸತೀಶ ಹೆಗ್ಡೆ, ಯತೀಶ, ಕೇಶವ ನಾಯ್ಕ, ಅಬ್ದುಲ್‌ ಸಲಾಂ ಹಾಗೂ ನೋಡೆಲ್‌ ಅಧಿಕಾರಿಯಾದ ಹೆರಾಲ್ಡ್‌ ಸ್ವಿಕ್ವೇರಾ ಉಪಸ್ಥಿತರಿದ್ದರು.

Related posts

ತೆಕ್ಕಾರು: ಹದಗೆಟ್ಟ ಗೋದಾಮುಗುಡ್ಡೆ – ಗೋವಿಂದರಗುಳಿ- ಸರಳಿಕಟ್ಟೆ ರಸ್ತೆ: ದುರಸ್ತಿಗೊಳಿಸುವಂತೆ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಪ್ರತಿಭಟನೆ

Suddi Udaya

ಜು.4: ಚಾರ್ಮಾಡಿಯಲ್ಲಿ ಹೊಸ ಮಾರುತಿ ಸುಜುಕಿ ಅರೆನಾ ಸ್ಯಾಟಲೈಟ್ ಶಾಖೆ ಆರಂಭ

Suddi Udaya

ಬೆಳಾಲು: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ನಡ: ಕೇಲ್ತಾಜೆ ಸುರ್‍ಯ ರಸ್ತೆಗೆ ದಿ| ಸುಭಾಶ್ಚಂದ್ರ ಜೈನ್ ಸುರ್ಯಗುತ್ತು ಹೆಸರು ನಾಮಕರಣ ಮಾಡಲು ಪಿ.ಡಿ.ಒ ರವರಿಗೆ ಮನವಿ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರ ಪತ್ತೆಗಾಗಿ ಪೊಲೀಸರ ಮನವಿ

Suddi Udaya

ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ಐವತ್ತು ವಿದ್ಯಾರ್ಥಿಗಳಿಗೆ ಸಂಸ್ಕೃತಭಾಷಾ ವಿದ್ಯಾರ್ಥಿವೇತನ

Suddi Udaya
error: Content is protected !!