July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪರಿಶಿಷ್ಟ ಜಾತಿ-ಪಂಗಡಗಳ ವಿಶೇಷ ಗ್ರಾಮಸಭೆ ಬೆನ್ನಲ್ಲೇ ಸ್ಥಳಕ್ಕೆ ಬಂದ ಅಧಿಕಾರಿಗಳು – ನಡುಗುಡ್ಡೆ ಕಾಲುಸಂಕ ಪ್ರದೇಶ ಹಾಗೂ ರಸ್ತೆ ವಂಚಿತ ಬಜಕ್ರೆಸಾಲು ಪ್ರದೇಶದಲ್ಲಿ ಸಮಸ್ಯೆಗಳ ಪರಿಶೀಲನೆ


ಬೆಳ್ತಂಗಡಿ: ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಬುಧವಾರ ನಡೆದ ಪರಿಶಿಷ್ಟ ಜಾತಿ/ ಪಂಗಡಗಳ ವಿಶೇಷ ಗ್ರಾಮಸಭೆಯಲ್ಲಿ ಲಾಯಿಲ ಗ್ರಾಮದ ಬರೆಮೇಲು ನಡುಗುಡ್ಡೆ ಪ್ರದೇಶದ ಕಾಲುಸಂಕದ ವಿಚಾರ ವ್ಯಾಪಕ ಚರ್ಚೆ ಕಾರಣವಾಗಿತ್ತು. ಬಜಕ್ರೆಸಾಲು ಪ್ರದೇಶದ 8-10 ಪರಿಶಿಷ್ಟ ಜಾತಿ ಕುಟುಂಬಗಳು ರಸ್ತೆ ವಂಚಿತಗೊಂಡಿರುವ ಬಗ್ಗೆಯೂ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ಜು.24ರಂದು ಈ ಪ್ರದೇಶಕ್ಕೆ ಅಧಿಕಾರಿಗಳು ಆ ಪ್ರದೇಶಕ್ಕೆ ಭೇಟಿ ನೀಡಿದರು.

ಗ್ರಾಮಸಭೆಯಲ್ಲಿ ಗ್ರಾಮಸ್ಥ ಶೇಖರ್ ಲಾಯಿಲ ಕಾಲುಸಂಕದಲ್ಲಿ ಶಾಲಾ ಮಕ್ಕಳು ನಡೆದಾಡುವ ಪೋಟೋ, ಹಾಗೂ ಮೂರು ವರ್ಷಗಳ ಹಿಂದೆ ಆಯಿಲ ಹೋಗುವ ರಸ್ತೆ ಬದಿಯ ಧರೆ ಕುಸಿತವಾಗಿದ್ದು ಇವುಗಳ ಪೋಟೊಗಳನ್ನು ಅಧಿಕಾರಗಳ ಮುಂದೆ ಪ್ರದರ್ಶಿಸಿದಲ್ಲದೆ, ಬಜಕ್ರೆಸಾಲು ರಸ್ತೆ ವಂಚಿತ ದಲಿತ ಕುಟುಂಬಗಳ ವಿಷಯ ಪ್ರಸ್ತಾಪಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು. ಕವಿ ಸಿದ್ದಲಿಂಗಯ್ಯ ರವರ ಯಾರಿಗೆ ಬಂತು, ಎಲ್ಲಿಗೆ ಬಂತು ನಲ್ವತ್ತೇಳರ ಸ್ವಾತಂತ್ರ್ಯ ಎಂಬ ಹಾಡನ್ನು ಹಾಡಿ ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 79 ವರ್ಷಗಳಾದರೂ ಇನ್ನೂ ದಲಿತ, ಆದಿವಾಸಿ ಸಮುದಾಯದ ಅಭಿವೃದ್ಧಿಯಾಗಿಲ್ಲ ಎಂದರೆ ದಲಿತ, ಆದಿವಾಸಿಗಳಿಗೆ ಇನ್ನೂ ಸ್ವಾತಂತ್ರ್ಯ ಲಭಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇಂದು ಬರೆಮೇಲು ನಡುಗುಡ್ಡೆ ಪ್ರದೇಶ ಹಾಗೂ ಬಜಕ್ರೆಸಾಲು ದಲಿತ ಕಾಲನಿಗೆ ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ಉಪ ವಿಭಾಗದ ಇಂಜಿನಿಯರ್ ಸಂದೀಪ್ ಶೆಟ್ಟಿ ಮಂದರ್ಸ, ಸಮಾಜ ಕಲ್ಯಾಣ ಇಲಾಖೆಯ ಧೀರಾಜ್ ಕುಮಾರ್, ಲಾಯಿಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ತಾರಾನಾಥ ನಾಯ್ಕ್, ಸಹಾಯಕ ಲೆಕ್ಕಾಧಿಕಾರಿ ಸುಪ್ರೀತಾ ಶೆಟ್ಟಿ, ಗ್ರಾಮ ಪಂಚಾಯತ್ ಮಾಜಿ ಸದಸ್ಯ ಪ್ರಸಾದ್ ಶೆಟ್ಟಿ ಏಣಿಂಜೆ, ಪಂಚಾಯತ್ ಸಿಬ್ಬಂದಿ ಪ್ರದೀಪ್ ಹೋರಾಟಗಾರ ಶೇಖರ್ ಲಾಯಿಲ ಭೇಟಿ ನೀಡಿ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು ಬಜಕ್ರೆಸಾಲು ದಲಿತ ಕಾಲನಿಗೆ ಸರ್ಕಾರಿ ಜಮೀನಿನಲ್ಲಿ ರಸ್ತೆ ನಿರ್ಮಾಣ ಮಾಡಲು ಕಂದಾಯ ಇಲಾಖೆ ಅನುಮತಿ ನೀಡಬೇಕು. ಈ ನಿಟ್ಟಿನಲ್ಲಿ ತಹಶೀಲ್ದಾರರನ್ನು ಭೇಟಿ ನೀಡಿ ಸಮಸ್ಯೆಯನ್ನು ಮನವರಿಕೆ ಮಾಡಲಾಗುವುದು ಎಂದರು. ಬರೆಮೇಲು ನಡುಗುಡ್ಡೆ ಪ್ರದೇಶಕ್ಕೆ ಕಾಲುಸಂಕ ನಿರ್ಮಾಣದ ಬಗ್ಗೆ ಅಂದಾಜುವೆಚ್ಚ, ನೀಲನಕಾಶೆಯ ಜೊತೆಗೆ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ಭರವಸೆ ನೀಡಿದರು.

Related posts

ಸೆಂಟ್ ಅಲ್ಫೋನ್ಸ ಪುಣ್ಯ ಕ್ಷೇತ್ರ ನೆಲ್ಯಾಡಿಯಲ್ಲಿ ನೂತನ ಟ್ರಸ್ಟಿಗಳ ಪದಗ್ರಹಣ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ಪ್ರಾಂಶುಪಾಲರು ಡಾ. ಪ್ರಶಾಂತ್ ಶೆಟ್ಟಿ ರವರಿಗೆ ‘ಆಯುಷ್ ಭೂಷಣ’ ಪುರಸ್ಕಾರ

Suddi Udaya

ಮಾಲಾಡಿ: ವಿಶ್ವಕರ್ಮ ಯೋಜನೆಯ ಫಲಾನುಭವಿಗಳಿಗೆ ಆರೋಗ್ಯ ಮಾಹಿತಿ

Suddi Udaya

ಅಳದಂಗಡಿ ಆಮಂತ್ರಣ ಪ್ರತಿಷ್ಠಾನ ಹಾಗೂ ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಯೋಗದೊಂದಿಗೆ ತುಳು ಸಿಂಗಾರ ಚೆನ್ನೆಮಣೆ ಸ್ಪರ್ಧೆ

Suddi Udaya

ವೇಣೂರು: ಪೆರಿಂಜೆ ನಿವಾಸಿ ಪಿ.ಉಸ್ಮಾನ್ ನಿಧನ

Suddi Udaya

ಬೆಳ್ತಂಗಡಿ: ಗ್ರಾಮೀಣ ಮಟ್ಟದ ಪುಸ್ತಕೋತ್ಸವ ಪುಸ್ತಕ ಪ್ರದರ್ಶನ ಮತ್ತು ಮಾರಾಟ

Suddi Udaya
error: Content is protected !!