July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಶಿಲ: ಬೈಕ್ ಮೇಲೆ ಬಿದ್ದ ಮರ: ಬೈಕ್ ಸವಾರ ಪ್ರಾಣಾಪಾಯಾದಿಂದ ಪಾರು

ಶಿಶಿಲ : ಅರಸಿನಮಕ್ಕಿ-ಶಿಶಿಲ ರಸ್ತೆಯ ಬರ್ಗುಳ ಸಮೀಪ ಇಂದು(ಜು.24) ಮಧ್ಯಾಹ್ನ ವೇಳೆಗೆ ಚಲಿಸುತ್ತಿದ್ದ ಬೈಕ್ ಮೇಲೆ ಏಕಾಏಕಿ ಮರ ಬಿದ್ದ ಘಟನೆ ನಡೆದಿದೆ.

ಶಿಶಿಲ ದೇನೋಡಿ ನಿವಾಸಿ ರತೀಶ್ ಪೂಜಾರಿ ಅವರು ಬೈಕ್‌ನಲ್ಲಿ ಸಂಚರಿಸುತ್ತಿದ್ದ ವೇಳೆ ರಸ್ತೆ ಬದಿಯ ಮರ ಬೈಕ್ ಮೇಲೆ ಬಿದ್ದ ಪರಿಣಾಮ ಬೈಕ್‌ಗೆ ಹಾನಿಯಾಗಿದ್ದು, ರತೀಶ್ ಪೂಜಾರಿ ಅವರು ಅದೃಷ್ಟವಶಾತ್ ಯಾವುದೇ ಗಂಭೀರ ಗಾಯಗಳಾಗದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆಯಿಂದ ಕೆಲಕಾಲ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಶೌರ್ಯ ವಿಪತ್ತು ನಿರ್ವಹಣಾ ಘಟಕ ಅರಸಿನಮಕ್ಕಿ -ಶಿಶಿಲ ಘಟಕದ ಸದಸ್ಯರಾದ ಅವಿನಾಶ್ ಭಿಡೆ ,ರಮೇಶ್ ಬಿ, ರಾಧಾಕೃಷ್ಣ , ಕುಶಾಲಪ್ಪ ಗೌಡ, ಸ್ಥಳೀಯರಾದ ಮೋಹನ್ ಗೌಡ, ಮಾಧವ ನಾಯ್ಕ, ಲಕ್ಷ್ಮಣ ಆಚಾರ್, ಕೃಷ್ಣ ನಾಯ್ಕ ಮುಂತಾದವರು ಮರವನ್ನು ತೆರವುಗೊಳಿಸಿ ಸಂಚಾರವನ್ನು ಸುಗಮಗೊಳಿಸಲಾಯಿತು.


ಸ್ಥಳಕ್ಕೆ ಪಂಚಾಯತ್ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದರು. ಮೆಸ್ಕಾಂ ಸಿಬ್ಬಂದಿ ಸಂತೋಷ್ ಭೇಟಿ ನೀಡಿ ಕಂಬಗಳ ಹಾನಿ ಬಗ್ಗೆ ಪರಿಶೀಲನೆ ನಡೆಸಿದರು.

Related posts

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಹಿರಿಯ ಪಶುಪರೀಕ್ಷಕ ರಮೇಶ್ ಅಳದಂಗಡಿ ನೇಮಕ

Suddi Udaya

ಕಾಪು ಹೊಸ ಮಾರಿಗುಡಿ ನವದುರ್ಗ ಲೇಖನ ಯಜ್ಞಕ್ಕೆ ಚಾಲನೆ: ಬೆಳ್ತಂಗಡಿ ಸಮಿತಿಯ ಪ್ರಮುಖರು ಭಾಗಿ

Suddi Udaya

26 ನೇ ವರ್ಷದ ಭಜನಾ ತರಭೇತಿ ಕಮ್ಮಟದ ಸಮಾರೋಪ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿ ಭಾವದ ಭಜನೆಯ ಝೇಂಕಾರ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ನಿಡಿಗಲ್ ಶ್ರೀ ಸತ್ಯನಾರಾಯಣ ಭಜನಾ ಮಂದಿರದ ಹರಿ ಓಂ ಬಾಲ ಸಂಸ್ಕಾರ ಕೇಂದ್ರದ ಮಕ್ಕಳಿಗೆ ಬ್ಯಾಗ್, ಕೊಡೆ ಹಾಗೂ ಪುಸ್ತಕ ವಿತರಣೆ

Suddi Udaya
error: Content is protected !!