ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಬಲ್ಯೋಟ್ಟು ಶ್ರೀ ಗುರುಕೃಪಾ ಸೇವಾ ಆಶ್ರಮಕ್ಕೆ ಆರ್ಥಿಕ ಸಹಾಯಧನ ವಿತರಿಸಲಾಯಿತು.

ಬಲ್ಯೋಟ್ಟು ಶ್ರೀ ಗುರುಕೃಪಾ ಸೇವಾ ಆಶ್ರಮಕ್ಕೆ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ಆರ್ಥಿಕ ಸಹಾಯಧನವನ್ನು ನೀಡಲಾಯಿತು. ಸಂಘದ ಅಧ್ಯಕ್ಷ ಭಗೀರಥ ಜಿ ಅವರು ಈ ಸಹಾಯಧನವನ್ನು ಪರಮಪೂಜ್ಯ ಶಿಕ್ಷಣಯೋಗಿ ಶ್ರೀ ವಿಖ್ಯಾತನಂದ ಸ್ವಾಮೀಜಿ ಯವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಗಂಗಾಧರ ಮಿತ್ತಮಾರು, ಚಿದಾನಂದ ಪೂಜಾರಿ ಎಲ್ದಕ್ಕ, ವಿಶೇಷಾಧಿಕಾರಿ ಎಂ. ಮೋನಪ್ಪ ಪೂಜಾರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವತ್ಥ್ ಕುಮಾರ್, ಹೊಸ್ಮಾರು ಶಾಖೆಯ ಶಾಖಾ ವ್ಯವಸ್ಥಾಪಕರಾದ ಶ್ರೀಮತಿ ಸಂಧ್ಯಾ, ಸಂಘದ ಸಿಬ್ಬಂದಿ ವರ್ಗ ಹಾಗೂ ಶಾಲೆಯ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.















