September 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಂತ ತೆರೇಸಾ ಸಂಯುಕ್ತ ಪ.ಪೂ. ಕಾಲೇಜಿನಲ್ಲಿ ಪೋಷಕರಿಗಾಗಿ ಹದಿಹರೆಯದವರ ಸಬಲೀಕರಣ ಮಾಹಿತಿ ಕಾರ್ಯಾಗಾರ

ಬೆಳ್ತಂಗಡಿ : ಸಂತ ತೆರೇಸಾ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕರಿಗಾಗಿ ಹದಿಹರೆಯದವರ ಸಬಲೀಕರಣ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು.

ಹದಿಹರೆಯದ ಮಕ್ಕಳ ದೈಹಿಕ, ಮಾನಸಿಕ ಹಾಗೂ ಭಾವನಾತ್ಮಕ ಬೆಳವಣಿಗೆ ಮತ್ತು ಅವರನ್ನು ಅರ್ಥಮಾಡಿಕೊಳ್ಳುವಲ್ಲಿ ಪೋಷಕರ ಪಾತ್ರದ ಕುರಿತು ಕಾರ್ಯಾಗಾರದಲ್ಲಿ ಮಾಹಿತಿ ನೀಡಲಾಯಿತು.
ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ಭಗಿನಿ ಲಿಲಿ ಪುಷ್ಪ ರವರು ವಿಶೇಷ ಮಾಹಿತಿಯನ್ನು ನೀಡಿದರು ಹಾಗೂ ಪ್ರಾಂಶುಪಾಲರಾದ ಭಗಿನಿ ಮೋಲಿ ಡಿಕುನ್ನ ಅವರು ಭಾಗವಹಿಸಿ, ಪೋಷಕರಿಗೆ ಅಗತ್ಯವಾದ ಮಾರ್ಗದರ್ಶನ ಮತ್ತು ಮಾಹಿತಿಯನ್ನು ನೀಡಿದರು.

ಕಾರ್ಯಾಗಾರದ ಸುಗಮಕಾರರಾಗಿ ಶ್ರೀಮತಿ ಸಿಲ್ವಿಯಾ ಪಿಂಟೋ ಉಪಸ್ಥಿತರಿದ್ದರು . ಕಾರ್ಯ ನಿರ್ವಹಣೆಯನ್ನು ಶ್ರೀಮತಿ ಝೀಟಾ ವಹಿಸಿಕೊಂಡರು. ಭಗಿನಿ ಪವಿತ್ರ ಸ್ವಾಗತಿಸಿದರು. ನಿರೂಪಮ ವಂದನಾರ್ಪಣೆ ಸಲ್ಲಿಸಿದರು.

Related posts

ಭಾರೀ ಮಳೆ: ಲಾಯಿಲ ಹಮ್ಮಬ್ಬ ರವರ ಹೊಟೇಲ್ ನ ಮೇಲ್ಛಾವಣಿ ಕುಸಿತ

Suddi Udaya

ಕಡಿರುದ್ಯಾವರ ಗ್ರಾಮ ಪಂಚಾಯತ್ ಗ್ರಾಮಸಭೆ

Suddi Udaya

ರಾಜ್ಯೋತ್ಸವ ಪ್ರಶಸ್ತಿಗೆ ಸಹಕರಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಗೆ ಬಳಂಜ ಬಿಲ್ಲವ ಸಂಘದಿಂದ ಗೌರವಾರ್ಪಣೆ

Suddi Udaya

ಉಜಿರೆ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂಸೇವಕ ಭಾಸ್ಕರ ಆಚಾರ್ಯ ವಿಧಿವಶ

Suddi Udaya

ಹೊಸಂಗಡಿ ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ರಾಜ್ಯ ಮಟ್ಟದ ಮುಕ್ತ ಕರಾಟೆ ಪಂದ್ಯಾಟ: ಉಜಿರೆಯ ಮೋಹನ್ ರವರಿಗೆ ಕುಮಿತೆಯಲ್ಲಿ ಚಿನ್ನದ ಪದಕ

Suddi Udaya
error: Content is protected !!