July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಶಿಲ: ಬೈಕ್ ಮೇಲೆ ಬಿದ್ದ ಮರ: ಬೈಕ್ ಸವಾರ ಪ್ರಾಣಾಪಾಯಾದಿಂದ ಪಾರು

ಶಿಶಿಲ : ಅರಸಿನಮಕ್ಕಿ-ಶಿಶಿಲ ರಸ್ತೆಯ ಬರ್ಗುಳ ಸಮೀಪ ಇಂದು(ಜು.24) ಮಧ್ಯಾಹ್ನ ವೇಳೆಗೆ ಚಲಿಸುತ್ತಿದ್ದ ಬೈಕ್ ಮೇಲೆ ಏಕಾಏಕಿ ಮರ ಬಿದ್ದ ಘಟನೆ ನಡೆದಿದೆ.

ಶಿಶಿಲ ದೇನೋಡಿ ನಿವಾಸಿ ರತೀಶ್ ಪೂಜಾರಿ ಅವರು ಬೈಕ್‌ನಲ್ಲಿ ಸಂಚರಿಸುತ್ತಿದ್ದ ವೇಳೆ ರಸ್ತೆ ಬದಿಯ ಮರ ಬೈಕ್ ಮೇಲೆ ಬಿದ್ದ ಪರಿಣಾಮ ಬೈಕ್‌ಗೆ ಹಾನಿಯಾಗಿದ್ದು, ರತೀಶ್ ಪೂಜಾರಿ ಅವರು ಅದೃಷ್ಟವಶಾತ್ ಯಾವುದೇ ಗಂಭೀರ ಗಾಯಗಳಾಗದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆಯಿಂದ ಕೆಲಕಾಲ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಶೌರ್ಯ ವಿಪತ್ತು ನಿರ್ವಹಣಾ ಘಟಕ ಅರಸಿನಮಕ್ಕಿ -ಶಿಶಿಲ ಘಟಕದ ಸದಸ್ಯರಾದ ಅವಿನಾಶ್ ಭಿಡೆ ,ರಮೇಶ್ ಬಿ, ರಾಧಾಕೃಷ್ಣ , ಕುಶಾಲಪ್ಪ ಗೌಡ, ಸ್ಥಳೀಯರಾದ ಮೋಹನ್ ಗೌಡ, ಮಾಧವ ನಾಯ್ಕ, ಲಕ್ಷ್ಮಣ ಆಚಾರ್, ಕೃಷ್ಣ ನಾಯ್ಕ ಮುಂತಾದವರು ಮರವನ್ನು ತೆರವುಗೊಳಿಸಿ ಸಂಚಾರವನ್ನು ಸುಗಮಗೊಳಿಸಲಾಯಿತು.


ಸ್ಥಳಕ್ಕೆ ಪಂಚಾಯತ್ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದರು. ಮೆಸ್ಕಾಂ ಸಿಬ್ಬಂದಿ ಸಂತೋಷ್ ಭೇಟಿ ನೀಡಿ ಕಂಬಗಳ ಹಾನಿ ಬಗ್ಗೆ ಪರಿಶೀಲನೆ ನಡೆಸಿದರು.

Related posts

ಬೆಳ್ತಂಗಡಿ ಬಸ್ ನಿಲ್ದಾಣಕ್ಕೆ ಬಂಗೇರರ ಹೆಸರು,ಮುಖ್ಯಮಂತ್ರಿಗಳಿಂದ ಪೂರ್ಣ ಸಹಕಾರದ ಭರವಸೆ: ಕೃತಜ್ಞತೆ ಅರ್ಪಿಸಿದ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ. ಸುವರ್ಣ

Suddi Udaya

ಇತಿಹಾಸ ಪ್ರಸಿದ್ದ ಬಳಂಜ ದೇವಸ್ಥಾನದ ಭಕ್ತವೃಂದದಿಂದ ಶಾಸಕ ಹರೀಶ್ ಪೂಂಜರವರ ಭೇಟಿ

Suddi Udaya

ಬಂದಾರು: ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿ ರಿಕ್ಷಾ ಚಾಲಕ ಸಹಿತ ಇಬ್ಬರ ಬಂಧನ

Suddi Udaya

ಭಾಗವತ ಮಹೇಶ ಕನ್ಯಾಡಿ ಅವರಿಗೆ ಗೌರವಾರ್ಪಣೆ

Suddi Udaya

ಬಂದಾರು: ಪಾಣೆಕಲ್ಲು ಶಿರಾಡಿ ಗ್ರಾಮ ದೈವ ಸಪರಿವಾರ ದೈವಸ್ಥಾನ ಕಾಲಾವಧಿ ನೇಮೋತ್ಸವದ ಸಮಾಲೋಚನಾ ಸಭೆ

Suddi Udaya

ಮೇ 3: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ

Suddi Udaya
error: Content is protected !!