September 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜು. 27, 28: ಗೃಹಜ್ಯೋತಿ ಫಲಾನುಭವಿಗಳ ಹೆಚ್ಚುವರಿ ಮಾಹಿತಿ ಸಂಗ್ರಹಣೆ: ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಕುಮಾರ್ ಲಾಯಿಲ

ಬೆಳ್ತಂಗಡಿ: ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯ ಮಹತ್ವಕಾಂಕ್ಷಿ ಯೋಜನೆಯಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ “ಗೃಹಜ್ಯೋತಿ ಫಲಾನುಭವಿಗಳ ಹೆಚ್ಚುವರಿ ಮಾಹಿತಿ ಸಂಗ್ರಹಣೆ” ಕಾರ್ಯವು ಮನೆ ಮನೆಗೆ ಭೇಟಿ ನೀಡುವುದರ ಮೂಲಕ ನಡೆಯುತ್ತಿದ್ದು, ಬೆಳ್ತಂಗಡಿ ತಾಲೂಕು ವ್ಯಾಪ್ತಿಯಲ್ಲಿ ಹಲವಾರು ಕಡೆಗಳಲ್ಲಿ ಮೊಬೈಲ್ ನೆಟ್‌ವರ್ಕ್ ಇಲ್ಲದೇ, ಸಮಸ್ಯೆಯಾಗಿರುತ್ತದೆ. ಈ ಹಿನ್ನಲೆಯಲ್ಲಿ ಗ್ರಾಮ ಪಂಚಾಯತ್‌ಗಳಲ್ಲಿ ಹೆಚ್ಚುವರಿ ಮಾಹಿತಿ ಸಂಗ್ರಹಿಸುವ ಕಾರ್ಯವನ್ನು ಹಮ್ಮಿಕೊಳ್ಳಲು ಜು.23ರಂದು ಬೆಳ್ತಂಗಡಿ ತಾಲೂಕಿನ ಪಂಚ ಗ್ಯಾರಂಟಿ ಸಮಿತಿ ಅಧ್ಯಕ್ಷ ಪದ್ಮನಾಭ ಸಾಲಿಯಾನ್ ಅವರ ಅಧ್ಯಕ್ಷತೆಯಲ್ಲಿ ನಡೆದ ತಾಲೂಕು ಪಂಚಗ್ಯಾರಂಟಿ ಸಮಿತಿ ಸಭೆಯಲ್ಲಿ ನಿರ್ಣಯಿಸಲಾಗಿರುತ್ತದೆ.

ಅದರಂತೆ ಜುಲೈ 27 ಹಾಗೂ 28 ರಂದು ನಿಗದಿಪಡಿಸಿದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ “ಗೃಹಜ್ಯೋತಿ ಫಲಾನುಭವಿಗಳ ಹೆಚ್ಚುವರಿ ಮಾಹಿತಿ ಸಂಗ್ರಹಣೆ” ಕಾರ್ಯವು ಜರುಗಲಿದೆ.

ಸಂಬಂಧಪಟ್ಟ ಗ್ರಾಮ ಪಂಚಾಯತ್‌ಗಳು, ಮೆಸ್ಕಾಂ ಇಲಾಖೆಗೆ ಪೂರ್ಣ ಸಹಕಾರದೊಂದಿಗೆ ಜು. 27 ಲಾಯಿಲ, ಬಂದಾರು, ಪಡಂಗಡಿ, ಕಾಶಿಪಟ್ಣ, ಬಳಂಜ, ಪುದುವೆಟ್ಟು, ಕೊಕ್ಕಡ, ಮುಂಡಾಜೆ ಗ್ರಾಮ ಪಂಚಾಯತ್ ನಲ್ಲಿ ಮತ್ತು

ಜು.28- ಅಂಡಿಂಜೆ, ಮರೋಡಿ,ಕಣಿಯೂರು,ಕಳಿಯ, ಮಡಂತ್ಯಾರು, ನಿಡ್ಲೆ,ಅರಸಿನಮಕ್ಕಿ, ಮಲವಂತಿಗೆ, ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 5 ಗಂಟೆಯ ವರಗೆ ನಡೆಯಲಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾ ಕೆಡಿಪಿ ಸದಸ್ಯರಾದ ಸಂತೋಷ್ ಕುಮಾರ್ ಲಾಯಿಲ ತಿಳಿಸಿರುತ್ತಾರೆ.

Related posts

ಬೆಳಾಲು ಪೆರಿಯಡ್ಕ ಶಾಲಾ ಮುಖ್ಯೋಪಾಧ್ಯಾಯಿನಿ ವಿಜಯ ಅವರಿಗೆ ಬೀಳ್ಕೊಡುಗೆ ಸಮಾರಂಭ: ಶಾಲೆಯ ಪ್ರಗತಿಗೆ ಶಿಕ್ಷಕಿ ವಿಜಯರವರ ಕೊಡುಗೆ ಅಪಾರ: ಮೋಹನ್ ಕುಮಾರ್

Suddi Udaya

ಶಿಲಾ೯ಲು ಗ್ರಾಮ ಸಭೆಯಲ್ಲಿ ಹೊಡೆದಾಟ: ಇತ್ತಂಡಗಳಿಂದ ವೇಣೂರು ಪೊಲೀಸರಿಗೆ ದೂರು – ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ನಿರೀಕ್ಷಣಾ ಮಂದಿರ ಲೋಕಾರ್ಪಣೆ

Suddi Udaya

ಡಿ.30 : ರೆಖ್ಯ ವಿಶ್ವ ಹಿಂದೂ ಪರಿಷತ್, ಬಜರಂಗದಳ ಘಟಕದ ನೇತೃತ್ವದಲ್ಲಿ 3ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಇಂದು ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನಾಮಪತ್ರ ಸಲ್ಲಿಕೆ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya

ವಾಣಿ ಶಿಕ್ಷಣ ಸಂಸ್ಥೆಯ ಮುಂಭಾಗದಲ್ಲಿ ಅತಿ ಶೀಘ್ರದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು ಇಂಜಿನಿಯರ್ ಗಳಿಗೆ ಜಯನಂದ ಗೌಡ ಮನವಿ

Suddi Udaya
error: Content is protected !!