24.2 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘದ ಮಹಾಸಭೆ: ರೂ.55.40 ಲಕ್ಷ ನಿವ್ವಳ ಲಾಭ, ಶೇ. 12ಡಿವಿಡೆಂಟ್ ಘೋಷಣೆ

ಉಜಿರೆ: ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘ ಇದರ 2025-26 ನೇ ವರ್ಷದ ವಾರ್ಷಿಕ ಮಹಾಸಭೆಯು ಜು 25 ರಂದು ಸಂಘದ ಸಭಾಂಗಣದಲ್ಲಿ ಜರಗಿತು.

ಮಹಾಸಭೆಯ ಸಭಾ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಕೇರಿಮಾರ್ ರವರು ವಹಿಸಿ ಮಾತನಾಡಿ ಸಂಘ ವರ್ಷದಿಂದ ವರ್ಷಕ್ಕೆ ಉತ್ತಮ ಪ್ರಗತಿಯನ್ನು ಸಾಧಿಸುತ್ತಿದ್ದು ಅಧಿಕ ಲಾಭವನ್ನು ಗಳಿಸುತ್ತಾ ಮುನ್ನಡೆಯುತ್ತಿದೆ. ಲಾಭಾಂಶವನ್ನು ಹಂಚಿಕೆ ಮಾಡಿ ಶೇ.11 ಡಿವಿಡೆಂಡನ್ನು ಘೋಷಣೆ ಮಾಡಿ ಸಂಘದ ಪ್ರಗತಿಯಲ್ಲಿ ಶ್ರಮಿಸಿದ ಎಲ್ಲರಿಗೂ ಧನ್ಯವಾದ ಕೋರಿದರು.

ವೇದಿಕೆಯಲ್ಲಿ ಉಜಿರೆ ಶ್ರೀ ಜನಾರ್ಧನ ದೇವಸ್ಥಾನದ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ, ಸಂಘದ ಉಪಾಧ್ಯಕ್ಷರಾದ ಶ್ರೀಧರ ಪೂಜಾರಿ, ನಿರ್ದೇಶಕರಾದ ಅರುಣ ಕುಮಾರ್, ಗುರುರಾಜ್ ಅಂತರ, ರಜತ ಗೌಡ, ಅರವಿಂದ ಕಾರಂತ, ಅನಿಲ್ ಪ್ರಕಾಶ್ ಡಿಸೋಜಾ, ಶ್ರೀಮತಿ ಪುಷ್ಪಾವತಿ ಆ‌ರ್ ಶೆಟ್ಟಿ, ಶ್ರೀಮತಿ ವಾರಿಜ ಎಸ್ ಗೌಡ, ಅಣ್ಣು ನಾಯ್ಕ, ಸಾದು, ಶ್ರೀ ಸುದರ್ಶನ್ ವಲಯ ಮೇಲ್ವಿಚಾರಕರು ಮತ್ತು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸರಸ್ವತಿ ಸಿ ರೈ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ನಿಧನ ಹೊಂದಿದ ಸದಸ್ಯರಿಗೆ ಶ್ರದ್ದಾಂಜಲಿ ಅರ್ಪಿಸಲಾಯಿತು. ಗೌರವ ಡಾಕ್ಟರೇಟ್ ಪಡೆದ ಸಹಕಾರಿ ಯೂನಿಯನ್ ನಿರ್ದೇಶಕಿ ಡಾ. ಸಾವಿತ್ರಿ ರೈ ರವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಸಂಘದ ಉಪಾಧ್ಯಕ್ಷ ಸದಾಶಿವ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಾಹಧಿಕಾರಿ ಸರಸ್ವತಿ ಸಿ ರೈ ವರದಿ ಮಂಡಿಸಿದರು. ಮೋಹನ್ ಗೌಡ ಕಾರ್ಯಕ್ರಮ ನಿರ್ವಹಿಸಿ, ರಜತ್ ಗೌಡ ವಂದಿಸಿದರು.

Related posts

ಮಚ್ಚಿನ: ಅಪಾಯದಂಚಿನಲ್ಲಿರುವ ವಿದ್ಯುತ್ ಕಂಬ

Suddi Udaya

ಜೀರ್ಣೋದ್ದಾರಗೊಳ್ಳುತ್ತಿರುವ ಹಳ್ಳಿಂಗೇರಿ ಶ್ರೀ ಅಯ್ಯಪ್ಪ ಮಂದಿರಕ್ಕೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಕಲ್ಮಂಜ: 18ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮ

Suddi Udaya

ಅಡಿಕೆ ಆಮದು ನಿಷೇಧ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯ: ಮಾ.7 ರಂದು ದ.ಕ ಜಿಲ್ಲಾಧಿಕಾರಿ ಕಛೇರಿ ಎದುರು ಬೃಹತ್ ಪ್ರತಿಭಟನೆ

Suddi Udaya

ಮುಂಡಾಜೆ ಸಿ ಎ ಬ್ಯಾಂಕ್ ನಿಂದ ಎನ್ ಎಸ್ ಗೋಖಲೆ ಸ್ಮರಣಾರ್ಥ ವಿದ್ಯಾನಿಧಿ ವಿತರಣೆ

Suddi Udaya

ಕೊಕ್ರಾಡಿ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ, ಗಿಡ ನಾಟಿ ಕಾರ್ಯಕ್ರಮ

Suddi Udaya
error: Content is protected !!