25.1 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರವರ ರಾಜೀನಾಮೆ ದೇಶದ ಎಚ್ಚೆತ್ತ ವಿದ್ಯಾರ್ಥಿ-ಯುವಜನರ ಗೆಲುವಾಗಿದೆ: ಅಝರ್ ನಾವೂರು

ಬೆಳ್ತಂಗಡಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ದೇಶದ ಎಚ್ಚೆತ್ತ ವಿದ್ಯಾರ್ಥಿ-ಯುವಜನರ ಗೆಲುವಾಗಿದೆ. ಅವರೆಲ್ಲರನ್ನೂ ನಾನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ.

ಇದು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ವಿಜಯವಾಗಿದೆ. ಬಿಸಿಲು-ಮಳೆ-ಹಸಿವು-ಆರೋಗ್ಯವನ್ನು ಲೆಕ್ಕಿಸದೆ ದೆಹಲಿಯಲ್ಲಿ ಬೀಡುಬಿಟ್ಟು ಪೊಲೀಸರ ದೌರ್ಜನ್ಯದಿಂದಲೂ ಪ್ರಚೋದನೆಗೆ ಒಳಗಾಗದೆ ಶಾಂತಿಯುತ ಹೋರಾಟವನ್ನು ನಡೆಸಿದ ಲಕ್ಷಾಂತರ ವಿದ್ಯಾರ್ಥಿ-ಯುವಜನರು ದೇಶದಲ್ಲಿ ಹೊಸ ಭರವಸೆಯನ್ನು ಮೂಡಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಕಾಲದ ಕರೆಗೆ ಓಗೊಟ್ಟು ಒಂದು ಜವಾಬ್ದಾರಿಯುತ ವಿರೋಧ ಪಕ್ಷದ ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸಿದೆ. ಸಕಾಲದಲ್ಲಿ ದೃಢಚಿತ್ತದ ನಾಯಕತ್ವ ನೀಡಿ ಹೋರಾಟವನ್ನು ಮುನ್ನಡೆಸಿದ ರಾಹುಲ್ ಗಾಂಧಿ ಅವರನ್ನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆ ಎಂದು ಯುವ ಕಾಂಗ್ರೆಸ್ ಬೆಳ್ತಂಗಡಿ ಘಟಕ ಅಧ್ಯಕ್ಷ ಅಝರ್ ನಾವೂರು ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಅಡಿಕೆ ಕಾಳುಮೆಣಸು, ಸಮಗ್ರ ಕೃಷಿ ಮಾಹಿತಿ ಶಿಬಿರ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ನೆಲ್ಯಾಡಿ: ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಪುತ್ತೂರು ಧರ್ಮಾಧ್ಯಕ್ಷ ಗೀವರ್ಗೀಸ್ ಮಾರ್ ಮಕಾರಿಯೋಸ್ ಅವರಿಂದ ಪೂಜಾರ್ಪಣೆ

Suddi Udaya

ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷರಿಗೆ ಕೊಯ್ಯೂರಿನ ಶ್ರೀ ಕೃಷ್ಣ ಭಜನಾ ಮಂಡಳಿಯಲ್ಲಿ ಅಭಿನಂದನೆ

Suddi Udaya

ರಜತ ಸಂಭ್ರಮದಲ್ಲಿರುವ ಉಜಿರೆಯ ಬೆನಕ ಆಸ್ಪತ್ರೆಯ ವತಿಯಿಂದ ಮಹಾಮಂಡಲೇಶ್ವರರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಗೆ ಗೌರವಾರ್ಪಣೆ

Suddi Udaya

ಜ.6: ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಲ್ಲವಿ ಜಿ. ಬೆಳ್ತಂಗಡಿಗೆ

Suddi Udaya
error: Content is protected !!