ಬೆಳ್ತಂಗಡಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ದೇಶದ ಎಚ್ಚೆತ್ತ ವಿದ್ಯಾರ್ಥಿ-ಯುವಜನರ ಗೆಲುವಾಗಿದೆ. ಅವರೆಲ್ಲರನ್ನೂ ನಾನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ.
ಇದು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ವಿಜಯವಾಗಿದೆ. ಬಿಸಿಲು-ಮಳೆ-ಹಸಿವು-ಆರೋಗ್ಯವನ್ನು ಲೆಕ್ಕಿಸದೆ ದೆಹಲಿಯಲ್ಲಿ ಬೀಡುಬಿಟ್ಟು ಪೊಲೀಸರ ದೌರ್ಜನ್ಯದಿಂದಲೂ ಪ್ರಚೋದನೆಗೆ ಒಳಗಾಗದೆ ಶಾಂತಿಯುತ ಹೋರಾಟವನ್ನು ನಡೆಸಿದ ಲಕ್ಷಾಂತರ ವಿದ್ಯಾರ್ಥಿ-ಯುವಜನರು ದೇಶದಲ್ಲಿ ಹೊಸ ಭರವಸೆಯನ್ನು ಮೂಡಿಸಿದ್ದಾರೆ.
ಕಾಂಗ್ರೆಸ್ ಪಕ್ಷ ಕಾಲದ ಕರೆಗೆ ಓಗೊಟ್ಟು ಒಂದು ಜವಾಬ್ದಾರಿಯುತ ವಿರೋಧ ಪಕ್ಷದ ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸಿದೆ. ಸಕಾಲದಲ್ಲಿ ದೃಢಚಿತ್ತದ ನಾಯಕತ್ವ ನೀಡಿ ಹೋರಾಟವನ್ನು ಮುನ್ನಡೆಸಿದ ರಾಹುಲ್ ಗಾಂಧಿ ಅವರನ್ನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆ ಎಂದು ಯುವ ಕಾಂಗ್ರೆಸ್ ಬೆಳ್ತಂಗಡಿ ಘಟಕ ಅಧ್ಯಕ್ಷ ಅಝರ್ ನಾವೂರು ತಿಳಿಸಿದ್ದಾರೆ.












