July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುಂಭ ಶ್ರೀ ಆಂಗ್ಲ ಮಾಧ್ಯಮ ಶಾಲಾ-ಕಾಲೇಜಿನಲ್ಲಿ “ಹದಿಹರೆಯ ಅರಿವಿನ ಪಯಣ” ಮಾಹಿತಿ ಕಾರ್ಯಕ್ರಮ

ವೇಣೂರು: ನಿಟ್ಟಡೆ ಗ್ರಾಮದ ಕುಂಭ ಶ್ರೀ ಆಂಗ್ಲ ಮಾಧ್ಯಮ ಶಾಲಾ-ಕಾಲೇಜಿನಲ್ಲಿ ಜು.22 ರಂದು “ಹದಿಹರೆಯ ಅರಿವಿನ ಪಯಣ” ಕುರಿತು ವಿದ್ಯಾರ್ಥಿಗಳಿಗಾಗಿ ಮಾಹಿತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮಕ್ಕೆ ಎನ್‌ಜಿಒ ಯೋಜನಾ ಸಂಯೋಜಕಿಯರಾದ ಸರಿತಾ ಶಿವಕುಮಾರ್ ಹಾಗೂ ಜಯಶ್ರೀ ಪಡಿ (ಮಂಗಳೂರು) ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ, ಹದಿಹರೆಯದಲ್ಲಿ ಮಕ್ಕಳಲ್ಲಿ ಉಂಟಾಗುವ ದೈಹಿಕ, ಮಾನಸಿಕ ಹಾಗೂ ಭಾವನಾತ್ಮಕ ಬದಲಾವಣೆಗಳ ಕುರಿತು ಸಮಗ್ರ ಮಾಹಿತಿ ನೀಡಿದರು. ಮಕ್ಕಳೊಂದಿಗೆ ಸ್ನೇಹಪೂರ್ವಕವಾಗಿ ವರ್ತಿಸುವುದು, ಅವರ ಸಮಸ್ಯೆಗಳನ್ನು ಆಲಿಸಿ ಸೂಕ್ತ ಮಾರ್ಗದರ್ಶನ ನೀಡುವುದು ಅತ್ಯಂತ ಅಗತ್ಯ ಎಂಬುದನ್ನು ಹೇಳಿದರು.

ಇದಲ್ಲದೆ, ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ‘ಗುಡ್ ಟಚ್’ ಮತ್ತು ‘ಬ್ಯಾಡ್ ಟಚ್’ ಕುರಿತು ಅರಿವು ಮೂಡಿಸಿ, ತಮ್ಮ ಸುರಕ್ಷತೆಯ ಬಗ್ಗೆ ಜಾಗೃತರಾಗಿರುವಂತೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾರ್ಯಕ್ರಮವು ಮಕ್ಕಳ ಆರೋಗ್ಯಕರ ಬೆಳವಣಿಗೆ, ಸುರಕ್ಷತೆ ಹಾಗೂ ಉತ್ತಮ ವ್ಯಕ್ತಿತ್ವ ನಿರ್ಮಾಣದ ಕುರಿತು ವಿದ್ಯಾರ್ಥಿಗಳು ಮತ್ತು ಶಿಕ್ಷಕರಲ್ಲಿ ಹೆಚ್ಚಿನ ಅರಿವು ಮೂಡಿಸಿತು.

ಪ್ರಾರ್ಥನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕ ಅಶ್ವಿತ್ ಕುಲಾಲ್ ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಮಮತಾ ಶಾಂತಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶುಭ ನಿತೇಶ್, ಪೂರ್ವಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಾ ಎಲ್.ಎನ್. ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಪ್ರೌಢಶಾಲಾ ಶಿಕ್ಷಕಿ ಕು ಅಲಿಷ ಮರಿಯ ನಿರೂಪಿಸಿದರು .

Related posts

ಕಣಿಯೂರು: ಮಲ್ಲಿಗೆ ಕೃಷಿ ಮಾಹಿತಿ ಹಾಗೂ ಗಿಡ ವಿತರಣಾ ಕಾರ್ಯಕ್ರಮ

Suddi Udaya

ಆಗಷ್ಟ್ 28 : ಸೌಜನ್ಯ ಪ್ರಕರಣದ ತನಿಖೆಗೆ ಒತ್ತಾಯಿಸಿ ಚಲೋ ಬೆಳ್ತಂಗಡಿ ಮಹಾಧರಣಿ

Suddi Udaya

ನಿಡ್ಲೆಯಲ್ಲಿ ವರ್ಧಮಾನ ಗ್ಯಾಂಡ್ ಇನ್ ವಸತಿ ಗೃಹ ಶುಭಾರಂಭ

Suddi Udaya

ಬೆಳ್ತಂಗಡಿ ಬಸದಿಯಲ್ಲಿ 12ನೇ ವಾರ್ಷಿಕೋತ್ಸವ, ಲಘುಸಿದ್ಧಚಕ್ರ ಯಂತ್ರಾರಾಧನೆ

Suddi Udaya

ನಾಲ್ಕೂರು: ಪ್ರಗತಿಪರ ಕೃಷಿಕ ಬಾಲಕೃಷ್ಣ ಶೆಟ್ಟಿ ಕುರೆಲ್ಯ ನಿಧನ

Suddi Udaya

ಬೆಳ್ತಂಗಡಿ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ, ಇದರ ನೂತನ ಅಧ್ಯಕ್ಷರಾಗಿ ಮಿತ್ತಬಾಗಿಲು ಕಕ್ಕೆನೇಜಿ ಶಿವಾನಂದ ರಾವ್ ಆಯ್ಕೆ

Suddi Udaya
error: Content is protected !!