ವೇಣೂರು: ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಜು.21 ರಂದು ಹೆಚ್.ಪಿ.ವಿ ವ್ಯಾಕ್ಸಿನ್ ಬಗ್ಗೆ ಮಾಹಿತಿಯನ್ನು ನೀಡಲಾಯಿತು.
ಬೆಳ್ತಂಗಡಿಯ ಆರೋಗ್ಯ ಶಿಕ್ಷಣಾಧಿಕಾರಿ ಅಮ್ಮಿ ಎ , ಆರೋಗ್ಯ ನಿರೀಕ್ಷಣಾಧಿಕಾರಿ ನವೀನ್, ವೇಣೂರು ಪ್ರಾಥಮಿಕ ಆರೋಗ್ಯ ಕೇಂದ್ರ ಸಿಬ್ಬಂದಿ ಶಕುಂತಲಾ ಇವರು, 14 ವರ್ಷ ಮೇಲ್ಪಟ್ಟ ಪ್ರೌಢಶಾಲಾ ವಿದ್ಯಾರ್ಥಿನಿಯರಿಗೆ ವ್ಯಾಕ್ಸಿನ್ ಬಗ್ಗೆ ಮಾಹಿತಿಯನ್ನು ನೀಡಿದರು.
ಈ ಸಂದರ್ಭದಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಮಮತಾ ಶಾಂತಿ ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.















