28.2 C
ಪುತ್ತೂರು, ಬೆಳ್ತಂಗಡಿ
September 9, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶ್ರಮದಾನದ ಮೂಲಕ ಐತನಡ್ಕ ಸೇತುವೆ ಪರಿಸರ ಸ್ವಚ್ಛಗೊಳಿಸಿದ ಗ್ರಾಮಸ್ಥರು-ಪೊದೆಗಳಿಂದ ಸಂಚಾರಕ್ಕೆ ಉಂಟಾಗಿದ್ದ ತೊಂದರೆ ನಿವಾರಣೆ-ಸಾರ್ವಜನಿಕರಿಂದ ಮೆಚ್ಚುಗೆ

ಬಳಂಜ: ನಾಲ್ಕೂರು ಗ್ರಾಮದ ಐತನಡ್ಕ ಪಲ್ಗುಣಿ ನದಿಯ ಸೇತುವೆಯ ಎರಡೂ ಬದಿಗಳಲ್ಲಿ ಪೊದೆಗಳು ಬೆಳೆದು ನಿಂತ ಪರಿಣಾಮ ಸಾರ್ವಜನಿಕರು ನಡೆದುಕೊಂಡು ಹೋಗಲು ಹಾಗೂ ವಾಹನ ಸವಾರರು ಸಂಚರಿಸಲು ತೊಂದರೆ ಅನುಭವಿಸುತ್ತಿದ್ದರು.

ಈ ಸಮಸ್ಯೆಯನ್ನು ಮನಗಂಡ ನಾಲ್ಕೂರು ಹಾಗೂ ಗರ್ಡಾಡಿ ಗ್ರಾಮದ ಯುವಕರು ಮತ್ತು ಗ್ರಾಮಸ್ಥರು ಶ್ರಮದಾನದ ಮೂಲಕ ಸೇತುವೆಯ ಎರಡೂ ಬದಿಯ ಪೊದೆಗಳನ್ನು ತೆರವುಗೊಳಿಸಿ ಸ್ವಚ್ಛತಾ ಕಾರ್ಯ ಕೈಗೊಂಡರು.

ಈ ಕಾರ್ಯದಲ್ಲಿ ಐತನಡ್ಕ ವಿಠ್ಠಲ, ದೈಹಿಕ ಶಿಕ್ಷಕ ರಾಜು, ಸಂದೇಶ್ ಶೆಟ್ಟಿ, ಸತೀಶ್ ಶೆಟ್ಟಿ ಪೊನ್ನೆದಕಲ, ಸಂತೋಷ್ ಶೆಟ್ಟಿ ಗುತ್ತು, ಮುಕೇಶ್, ಹರೀಶ್ ಮುದೆಲ್ತ್ಯಾರ್, ಡೆಂಜೋಳಿ ರಮೇಶ್ ಹಾಗೂ ಮರೆಕ್ಕಿನ ಅಂಝ ಸೇರಿದಂತೆ ಹಲವರು ಪಾಲ್ಗೊಂಡು ಸೇವಾ ಮನೋಭಾವ ಮೆರೆದರು.

ಗ್ರಾಮಸ್ಥರ ಈ ಸ್ವಯಂಪ್ರೇರಿತ ಶ್ರಮದಾನದಿಂದ ಸೇತುವೆ ಪರಿಸರ ಸ್ವಚ್ಛಗೊಂಡಿದ್ದು, ಇದೀಗ ಸಾರ್ವಜನಿಕರು ಹಾಗೂ ವಾಹನ ಸವಾರರು ಸುಗಮವಾಗಿ ಸಂಚರಿಸುವಂತಾಗಿದೆ. ಗ್ರಾಮಸ್ಥರ ಈ ಸಾಮಾಜಿಕ ಕಾಳಜಿ ಮತ್ತು ಸೇವಾ ಕಾರ್ಯಕ್ಕೆ ಸ್ಥಳೀಯರಿಂದ ಮೆಚ್ಚುಗೆ ವ್ಯಕ್ತವಾಗಿದೆ.

Related posts

ಬೆಳ್ತಂಗಡಿ ತಾ.ಪಂ. ಗೃಹರಕ್ಷಕ ದಳದ ಕಛೇರಿಯಲ್ಲಿ ಆಯುಧಪೂಜೆ ಹಾಗೂ ಬೀಳ್ಕೊಡುಗೆ ಸಮಾರಂಭ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯಲ್ಲಿ ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾ, ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ನೆರಿಯ ಬಾಂಜಾರುಮಲೆಯ ಅರಣ್ಯವಾಸಿ ಜನರೊಂದಿಗೆ ಶಕ್ತಿವಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ವತಿಯಿಂದ ಮತದಾರರ ಚೇತನ ಅಭಿಯಾನದ ಪ್ರಯುಕ್ತ ಬಿ.ಎಲ್. ಎ. – 2 ಗಳ ಕಾರ್ಯಾಗಾರ

Suddi Udaya

ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟ: ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲಾ ತಂಡ ಜಿಲ್ಲಾ ಮಟ್ಟಕ್ಕೆ

Suddi Udaya

ಲಯನ್ ಡಾ. ಗೋಪಾಲಕೃಷ್ಣ ಕಾಂಚೋಡು ನಿವೃತ್ತ ಸಾಧಕ ಯೋಧ ಪ್ರಶಸ್ತಿಗೆ ಆಯ್ಕೆ

Suddi Udaya
error: Content is protected !!