July 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಕಾರ್ಗಿಲ್ ವಿಜಯೋತ್ಸವಕ್ಕೆ ಬೆಳ್ತಂಗಡಿ ಟಿವಿಎಸ್ ಲೋಬೋ ಮೋಟಾರ್ಸ್ ನಿಂದ ದೇಶಭಕ್ತಿಯ ನಮನ: ಬೈಕ್ ರ್ಯಾಲಿ ಮೂಲಕ ವೀರ ಯೋಧರ ತ್ಯಾಗ-ಬಲಿದಾನಕ್ಕೆ ಗೌರವ

ಬೆಳ್ತಂಗಡಿ:ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ಬೆಳ್ತಂಗಡಿಯ ಟಿವಿಎಸ್ ಲೋಬೋ ಮೋಟಾರ್ಸ್ ವತಿಯಿಂದ ದೇಶಭಕ್ತಿ ಸಾರುವ ಬೈಕ್ ರ್ಯಾಲಿ ಹಾಗೂ ವೀರ ಯೋಧರಿಗೆ ಗೌರವ ನಮನ ಸಲ್ಲಿಸುವ ಕಾರ್ಯಕ್ರಮವು ಜು 26ರಂದು ಅದ್ಧೂರಿಯಾಗಿ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮೇಜರ್ ಜನರಲ್ ಎಂ.ವಿ. ಭಟ್ ಮಾತನಾಡಿ, ದೇಶಭಕ್ತಿಯನ್ನು ಜನಮನಗಳಲ್ಲಿ ಜಾಗೃತಿಗೊಳಿಸುವ ಇಂತಹ ಕಾರ್ಯಕ್ರಮಗಳು ಅತ್ಯಂತ ಶ್ಲಾಘನೀಯವಾಗಿವೆ. ಕಾರ್ಗಿಲ್ ಯುದ್ಧದಲ್ಲಿ ಭಾರತದ ಸುಮಾರು 547 ಯೋಧರು ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ದು, 500ಕ್ಕೂ ಹೆಚ್ಚು ಸೈನಿಕರು ಗಾಯಗೊಂಡಿದ್ದಾರೆ. ಅವರ ತ್ಯಾಗ, ಬಲಿದಾನ ಮತ್ತು ದೇಶಸೇವೆಯನ್ನು ಗೌರವಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ ಎಂದು ಹೇಳಿದರು.

ಟಿವಿಎಸ್ ಲೋಬೋ ಮೋಟಾರ್ಸ್ನ ಮಾಲಕರಾದ ರೊನಾಲ್ಡೊ ಲೋಬೋ ಮಾತನಾಡಿ, ನಮ್ಮ ಸುರಕ್ಷಿತ ಬದುಕಿಗಾಗಿ ಗಡಿಯಲ್ಲಿ ಹಗಲಿರುಳು ಕಾವಲು ಕಾಯುತ್ತಿರುವ ಯೋಧರನ್ನು ಗೌರವಿಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಕಾರ್ಗಿಲ್ ವಿಜಯೋತ್ಸವ ಆಚರಿಸುವ ಮೂಲಕ ಯೋಧರ ತ್ಯಾಗ ಹಾಗೂ ಬಲಿದಾನವನ್ನು ಸ್ಮರಿಸಿ ಅವರಿಗೆ ಕೃತಜ್ಞತೆ ಸಲ್ಲಿಸುವ ಅವಕಾಶ ದೊರೆತಿರುವುದು ಸಂತಸದ ಸಂಗತಿ ಎಂದು ತಿಳಿಸಿ ಎಲ್ಲರನ್ನು ಸ್ವಾಗತಿಸಿದರು.

ಬಳಿಕ ಸಂಸ್ಥೆಯ ಸಿಬ್ಬಂದಿ ಹಾಗೂ ಸಾರ್ವಜನಿಕರು ಒಂದೇ ಮಾದರಿಯ ರೈನ್‌ಕೋಟ್ ಧರಿಸಿ ದೇಶಭಕ್ತಿ ಘೋಷಣೆಗಳೊಂದಿಗೆ ಬೈಕ್ ರ್ಯಾಲಿಯಲ್ಲಿ ಭಾಗವಹಿಸಿದರು. ರ್ಯಾಲಿಗೆ ಅಗ್ನಿಶಾಮಕ ಇಲಾಖೆಯ ಅಧಿಕಾರಿ ಚಾಲನೆ ನೀಡಿದರು.ಬೆಳ್ತಂಗಡಿಯಿಂದ ಆರಂಭವಾದ ರ್ಯಾಲಿಯು ಉಜಿರೆ, ಗುರುವಾಯನಕೆರೆ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿ ಪುನಃ ಬೆಳ್ತಂಗಡಿಯಲ್ಲಿ ಸಮಾಪ್ತಿಗೊಂಡಿತು. ಈ ಸಂದರ್ಭದಲ್ಲಿ ಗಣ್ಯರು, ಸಂಸ್ಥೆಯ ಸಿಬ್ಬಂದಿ, ಸಾರ್ವಜನಿಕರು ಹಾಗೂ ದೇಶಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು, ಕಾರ್ಗಿಲ್ ವೀರ ಯೋಧರಿಗೆ ಗೌರವ ನಮನ ಸಲ್ಲಿಸಿದರು.

Related posts

ಡಾ. ಸುಬ್ರಹ್ಮಣ್ಯ ಭಟ್ಟರ ಐತಿಹಾಸಿಕ ಕಾದಂಬರಿ “ಪ್ರತಿಷ್ಠೆ” ಅಳದಂಗಡಿ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರವರಿಂದ ಬಿಡುಗಡೆ

Suddi Udaya

ವಲಯ ಮಟ್ಟದ ಪ್ರೌಢ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ- ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ವಿ. ಹರೀಶ್ ನೆರಿಯ ರವರಿಗೆ ದ್ವಾರಕಾ ಮಯಿ ಮಠ ದಿಂದ “ಭಜಕ ವಿಠಲ ಪ್ರಿಯ” ಗೌರವ ಪುರಸ್ಕಾರ ಪ್ರಧಾನ ಮಾಡಿ ಆಶೀರ್ವದಿಸಿದ ಯತಿ ವರೇಣ್ಯರು

Suddi Udaya

ಜೂ.18-23: ಉಜಿರೆಯಲ್ಲಿ ಬೆಂಗಳೂರು ಜೀವನ ಕಲೆ ಪ್ರತಿಷ್ಠಾನ ಸಂಸ್ಥೆ ವತಿಯಿಂದ ‘ಆನಂದೋತ್ಸವ ಶಿಬಿರ’

Suddi Udaya

ಗಡಾಯಿಕಲ್ಲು ಚಾರಣಕ್ಕೆ ಮುಂದಿನ ಆದೇಶದವರೆಗೆ ನಿಷೇಧ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಸಂಸದ ಕ್ಯಾ| ಬ್ರಿಜೇಶ್ ಚೌಟರ ಭೇಟಿ

Suddi Udaya
error: Content is protected !!