July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಪಾಯಕಾರಿ ಮರದ ಕಾಲುಸಂಕ ಪ್ರದೇಶಕ್ಕೆ ಬೆಳ್ತಂಗಡಿ ನ್ಯಾಯಾಧೀಶರ ಭೇಟಿ

ಲಾಯಿಲ ಗ್ರಾಮದ ಬರೆಮೇಲು ನಡುಗುಡ್ಡೆ ಎಂಬಲ್ಲಿರುವ ಅಪಾಯಕಾರಿ ಕಾಲುಸಂಕವನ್ನು ಬೆಳ್ತಂಗಡಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶರು , ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ಮನು ಬಿ.ಕೆ , ಪ್ರಧಾನ ಸಿವಿಲ್ ನ್ಯಾಯಾಧೀಶರು , ತಾಲೂಕು ಕಾನೂನು ಸೇವೆಗಳ ಸಮಿತಿ ಸದಸ್ಯ ಕಾರ್ಯದರ್ಶಿ ರಾಮಲಿಂಗಪ್ಪ ರವರು ಅದಿತ್ಯವಾರ ಸಂಜೆ ಭೇಟಿ ನೀಡಿ ವೀಕ್ಷಿಸಿದರು.

ಕಳೆದ ಬುಧವಾರ ಲಾಯಿಲ ಪರಿಶಿಷ್ಟ ಜಾತಿ/ ಪಂಗಡಗಳ ವಿಶೇಷ ಗ್ರಾಮಸಭೆಯಲ್ಲಿ ವ್ಯಾಪಕ ಚರ್ಚೆ , ಮಾಧ್ಯಮಗಳ ವರದಿಯ ನಂತರ ಶುಕ್ರವಾರ ಅಧಿಕಾರಿಗಳ ದಂಡು ಈ ಪ್ರದೇಶಕ್ಕೆ ಭೇಟಿ ನೀಡಿದ್ದರು. ಇದೀಗ ಬೆಳ್ತಂಗಡಿ ನ್ಯಾಯಾದೀಶರುಗಳಾದ ಮನು ಬಿ.ಕೆ , ರಾಮಲಿಂಗಪ್ಪ ರವರು ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಅಲ್ಲಿನ ಪರಿಸ್ಥಿತಿಯನ್ನು ಖುದ್ದಾಗಿ ವೀಕ್ಷಿಸಿ , ಸಾರ್ವಜನಿಕರೊಂದಿಗೆ ಮಾತನಾಡಿದರು. ಈ ಕಾಲುಸಂಕವನ್ನು ಅವಲಂಬಿಸಿರುವ ಕುಟುಂಬಗಳ ಮಾಹಿತಿಯೊಂದಿಗೆ ಹಿರಿಯ ನಾಗರಿಕರು , ವಿದ್ಯಾರ್ಥಿಗಳು , ವಿಶೇಷ ಚೇತನರು , ವಿಧವೆಯರ ಬಗ್ಗೆ ಪ್ರತ್ಯೇಕ ಮಾಹಿತಿಯನ್ನು ಸಂಗ್ರಹಿಸಿ , ಸೋಮವಾರ ಮಧ್ಯಾಹ್ನದೊಳಗೆ ವರದಿ ನೀಡುವಂತೆ ಲಾಯಿಲ ಗ್ರಾಮ ಪಂಚಾಯತ್ ನ ಪಿಡಿಓ ಹಾಗೂ ಲಾಯಿಲ ಗ್ರಾಮಾಡಳಿತಾಧಿಕಾರಿ ಯವರಿಗೆ ಸೂಚಿಸಿದರು.

ನ್ಯಾಯಾದೀಶರುಗಳು ಅಭಿವೃದ್ಧಿ ವಂಚಿತ ಬರಮೇಲು ನಡುಗುಡ್ಡೆ ಭೇಟಿ ಮೂಲಕ ಈ ಭಾಗದ ಬಹುಕಾಲದ ಸೇತುವೆಯ ಬೇಡಿಕೆಯೊಂದು ಈಡೇರುವ ಆಶಾ ಭಾವನೆ ಸಾರ್ವಜನಿಕರಲ್ಲಿ ಮೂಡಿದೆ.

ಈ ಸಂದರ್ಭದಲ್ಲಿ ನ್ಯಾಯಾದೀಶರ ಜೊತೆಗೆ ಬೆಳ್ತಂಗಡಿ ಪೋಲಿಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಆನಂದ , ಬೆಳ್ತಂಗಡಿ ಉಪ ತಹಶೀಲ್ದಾರ್ ಮಲ್ಲಪ್ಪ ನಡುಗಡ್ಡಿ , ವೇಣೂರು ಹೋಬಳಿ ಕಂದಾಯ ನಿರೀಕ್ಷಕ ಕುಮಾರಸ್ವಾಮಿ , ತಾಲೂಕು ಕಾನೂನು ಸೇವೆಗಳ ಸಮಿತಿಯ ಸಿಬ್ಬಂದಿ ಯಲ್ಲಪ್ಪ ಹಂಗರಗಿ , ಲಾಯಿಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಭಿವೃದ್ಧಿ ಅಧಿಕಾರಿ ತಾರಾನಾಥ ನಾಯ್ಕ್ , ಲಾಯಿಲ ಗ್ರಾಮಾಡಳಿತಾಧಿಕಾರಿ ರನಿತಾ , ಮಾಜಿ ಗ್ರಾಮ ಪಂಚಾಯತ್ ಸದಸ್ಯ ಪ್ರಸಾದ್ ಶೆಟ್ಟಿ ಏಣಿಂಜೆ ,ದಲಿತ ಮುಖಂಡ ಶೇಖರ್ ಲಾಯಿಲ, ಗ್ರಾಮ ಸಹಾಯಕ ಸತೀಶ್ ಹೆಗ್ಡೆ ಉಪಸ್ಥಿತರಿದ್ದರು.

Related posts

ವೇಣೂರಿನಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ವತಿಯಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್ ರಕ್ತದಾನ ಶಿಬಿರ

Suddi Udaya

ಎಸ್ ಡಿ ಎಮ್ ‌ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕ ವರ್ಧಂತ್ಯುತ್ಸವದ ಪ್ರಯುಕ್ತ ‘ಪೂಜ್ಯ ಪಥ’ ಪೂಜ್ಯರು ‌ನಡೆದು ಬಂದ ಹಾದಿಯ ಕುರಿತಾದ ವಿಶೇಷ ಪುಸ್ತಕ ಮತ್ತು ಸಾಕ್ಷ್ಯಚಿತ್ರ ಪ್ರದರ್ಶನ

Suddi Udaya

ಬಳಂಜ: ಬೊಳ್ಳಾಜೆ- ಡೆಂಜೋಲಿ ರಸ್ತೆ ಮದ್ಯೆ ವಿದ್ಯುತ್ ತಂತಿ ಮೇಲೆ ಬಿದ್ದ ಮರವನ್ನು ತೆರವುಗೊಳಿಸಿದ ಸಾರ್ವಜನಿಕರು: ಅಪಾಯಕಾರಿ ಮರಗಳನ್ನು ತೆರವುಗೊಳಿಸಲು ಬಳಂಜ ಗ್ರಾ‌.ಪಂ ಹಾಗೂ ಅರಣ್ಯ ಇಲಾಖೆಗೆ ಮನವಿ

Suddi Udaya

ಮಡಂತ್ಯಾರು ಸಹಕಾರಿ ಸಂಘದ ಚುನಾವಣೆ: ಹೈಕೋರ್ಟು ತೀರ್ಪು ಪ್ರಕಟ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ನಿರ್ದೇಶಕ ಸ್ಥಾನ 7 ರಿಂದ 9 ಕ್ಕೆ ಏರಿಕೆ

Suddi Udaya

ತುರ್ತು ಕರೆಗೆ ಸ್ಪಂದಿಸಿದ ಉಜಿರೆ-ಬೆಳಾಲು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು

Suddi Udaya
error: Content is protected !!