July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಯುವವಾಹಿನಿ ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳಿಗೆ “ಹೆಜ್ಜೆಗೊಂದು ಸ್ಫೂರ್ತಿ” ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ : ಯುವವಾಹಿನಿ ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳಿಗೆ ತಮ್ಮ ಜವಾಬ್ದಾರಿಗಳ ಕುರಿತು ತಿಳಿವಳಿಕೆ ಮೂಡಿಸಲು ಮತ್ತು ಘಟಕವನ್ನು ಸಂಘಟನಾತ್ಮಕವಾಗಿ ಮುನ್ನಡೆಸುವ ನಿಟ್ಟಿನಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶದಿಂದ “ಹೆಜ್ಜೆಗೊಂದು ಸ್ಫೂರ್ತಿ” ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮವು ಜರುಗಿತು.

ಘಟಕದ ಸ್ಥಾಪಕ ಅಧ್ಯಕ್ಷ ರಾಕೇಶ್ ಮೂಡಿಕೊಡಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಕಾರ್ಯಕ್ರಮದ ಉದ್ದೇಶ ಹಾಗೂ ಮಹತ್ವದ ಕುರಿತು ಉದ್ಘಾಟನಾ ಭಾಷಣ ಮಾಡಿದರು. ವ್ಯಕ್ತಿತ್ವ ವಿಕಸನ ನಿರ್ದೇಶಕ ಜ್ಞಾನೇಶ್ ಶಿರ್ಲಾಲ್ ಅವರು ವೇದಿಕೆಗೆ ಹಾಗೂ ಸಭೆಗೆ ಆಗಮಿಸಿದ ಎಲ್ಲಾ ಗಣ್ಯರು ಹಾಗೂ ಅತಿಥಿಗಳನ್ನು ಸ್ವಾಗತಿಸಿದರು.
ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ರಾಜೇಶ್ ಎಸ್ ಬಲ್ಯ ಅವರು ನೂತನ ಪದಾಧಿಕಾರಿಗಳಿಗೆ ಅವರ ಜವಾಬ್ದಾರಿಗಳು, ಕರ್ತವ್ಯಗಳು ಮತ್ತು ಸಂಘಟನೆಯಲ್ಲಿ ನಾಯಕತ್ವವನ್ನು ಬೆಳೆಸಿಕೊಳ್ಳುವ ಬಗ್ಗೆ ಮೌಲ್ಯಯುತವಾದ ತರಬೇತಿಯನ್ನು ನೀಡಿದರು.

ಘಟಕದ ಅಧ್ಯಕ್ಷೆ ಲೀಲಾವತಿ ಪಣಕಜೆ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ನೂತನ ಪದಾಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಅರಿತು ಯುವವಾಹಿನಿ ಸಂಘಟನೆಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಲು ಶುಭ ಹಾರೈಸಿದರು.
ಕಾರ್ಯಕ್ರಮದ ಜೊತೆ ಕಾರ್ಯದರ್ಶಿ ಆಕಾಶ್ ಹಾಗೂ ಸಂಘಟನ ಕಾರ್ಯದರ್ಶಿ ಜಿತಿಕ್ಷ ಮುಂಡಾಜೆ ಕಾರ್ಯಕ್ರಮ ನಿರೂಪಿಸಿದರು. ಶೈಲೇಶ್ ಧನ್ಯವಾದವಿತ್ತರು.

Related posts

ಕರಾಟೆ ಪಂದ್ಯಾಟ: ಹೋಲಿ ರಿಡೀಮರ್ ಶಾಲೆಯ ವಿದ್ಯಾರ್ಥಿ ಶಮಂತ್ ತೃತೀಯ

Suddi Udaya

ಪ್ರತಿಭಾ ಕಾರಂಜಿ: ಬಜಿರೆ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಜೆ ಇ ಇ ಮೈನ್ಸ್ ಫಲಿತಾಂಶ ಪ್ರಕಟ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಲಾಯಿಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಓಡದಕರಿಯದಲ್ಲಿ ನವರಾತ್ರಿ ಉತ್ಸವ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವತಿಯಿಂದ ಸಾಮಾಜಿಕ ನ್ಯಾಯ ದಿನಾಚರಣೆ

Suddi Udaya

ಶಿಬಾಜೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಧರ್ಮ ಸಂರಕ್ಷಣಾ ಯಾತ್ರೆ

Suddi Udaya
error: Content is protected !!