July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಗು.ನಾ.ಸ್ವಾ. ಸೇವಾ ಸಂಘ, ಮಹಿಳಾ ಬಿಲ್ಲವ ವೇದಿಕೆ, ಯುವ ಬಿಲ್ಲವ ವೇದಿಕೆ ಕುವೆಟ್ಟು- ಓಡಿಲ್ನಾಳ ಗ್ರಾಮ ಸಮಿತಿ ವತಿಯಿಂದ ಆಟಿಡೊಂಜಿ ಕೂಟ

ಕುವೆಟ್ಟು: ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆ ಯುವ ಬಿಲ್ಲವ ವೇದಿಕೆ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿ ಇದರ ವತಿಯಿಂದ ಆಟಿಡೊಂಜಿ ಕೂಟ ಕಾರ್ಯಕ್ರಮವು ಜು. 26 ರoದು ಕುವೆಟ್ಟು ವಿಮಲಾ ಜಗನ್ನಾಥ ಬoಗೇರ ಇವರ ಮನೆಯಲ್ಲಿ ಜರಗಿತು.

ಬೆಳಿಗ್ಗೆ ಕಾರ್ಯಕ್ರಮವನ್ನು ಹಿರಿಯರಾದ ಅಮ್ಮಿ ಕೋಟ್ಯಾನ್ ಕರಿಯಬೆ ಸೊಣoದೂರು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಆಟೋಟ ಸ್ಪರ್ಧೆಗಳನ್ನು ಗಿರಿಜಾ ಕೋಟ್ಯಾನ್ ಮದ್ದಡ್ಕ ಇವರು ಚೆನ್ನೆದ ಮನೆ ಆಟ ಆಡುವ ಮೂಲಕ ಚಾಲನೆ ನೀಡಿದರು. ನoತರ ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ ಸoಘದ ಉಪಾಧ್ಯಕ್ಷೆ ಶಾoತ ಜೆ ಬಂಗೇರ ಇವರ ನೇತೃತ್ವದಲ್ಲಿ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

ಸಭಾ ಕಾರ್ಯಕ್ರಮ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ನಡೆಯಿತು. ಗ್ರಾಮ ಸಮಿತಿಯ ಅಧ್ಯಕ್ಷ ನಾಗೇಶ್ ಆದೇಲು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಗೌರವಾಧ್ಯಕ್ಷ ಪೀತಾoಬರ ಹೇರಾಜೆ ಮಾತನಾಡಿ ಈ ಆಚರಣೆ ಧಾರ್ಮಿಕ ನಂಬಿಕೆ. ಆಹಾರ ಪದ್ಧತಿ ಹೀಗೆ ಒಟ್ಟು ಜನ ಜೀವನದ ಚಿತ್ರನಗಳನ್ನು ಆಟಿ ತಿಂಗಳ ಆಚರಣೆಗಳು ನೆನಪಿಸುತ್ತದೆ. ಮಾತೆಯರ ಮೂಲಕ ಆಚರಣೆಗಳು ಉಳಿದಾಗ ಮಾತ್ರ ಮುಂದಿನ ಜನಾoಗಕ್ಕೆ ಕೊಡುಗೆಯಾಗಬಹುದು ಎoದು ಹೇಳಿದರು.

ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಇದರ ಅಧ್ಯಕ್ಷ ರಕ್ಷಿತ್ ಶಿವರಾಂ, ತಾಲೂಕು ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಾಜಿ ಅಧ್ಯಕ್ಷ ಜಯರಾಂ ಬoಗೇರ ಹೇರಾಜೆ, ಚಿದಾನಂದ ಎಳ್ದಡ್ಕ, . ಕುವೆಟ್ಟು ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ಲಲಿತಾ ಕೃಷ್ಣಪ್ಪ ಪೂಜಾರಿ ಕೇದಳಿಕೆ, ಯುವ ಬಿಲ್ಲವ ವೇದಿಕೆಯ ಅಧ್ಯಕ್ಷ ಅನೂಪ್ ಬoಗೇರ , ವಿಮಲಾ ಜಗನ್ನಾಥ ಬoಗೇರ ಹೇರಾಜೆ, ವಿನೋದಿನಿ ರಾಮಪ್ಪ, ಮದ್ದಡ್ಕ ಸಾರ್ವಜನಿಕ ಗಣೇಶೋತ್ಸವ ಸೇವಾ ಸಮಿತಿಯ ಅಧ್ಯಕ್ಷ ತರುಷ್ ಜೆ ಹೇರಾಜೆ, ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೆ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ಬೆಳ್ತಂಗಡಿ ಇದರ ಅಧ್ಯಕ್ಷ ಸoಪತ್ ಸುವರ್ಣ, ತಾಲೂಕು ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಹಿಳಾ ಬಿಲ್ಲವ ವೇದಿಕೆಯ ಕಾರ್ಯದರ್ಶಿ ಶಾoಭವಿ ಪಿ ಬoಗೇರ, . ಕೋಶಾಧಿಕಾರಿ ತುಳಸಿ ವಸoತ್, ಮತ್ತಿತರರು ಆಗಮಿಸಿದ್ದರು. ಆನoದ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು. ದಿಶಾಲಿ ಪ್ರಾರ್ಥನೆ ಗೈದರು. ಶಾoತ ಜೆ ಬಂಗೇರ ಸ್ವಾಗತಿಸಿ, ಉಮೇಶ್ ಕುಮಾರ್ ಧನ್ಯವಾದ ನೀಡಿದರು. ಆಟಿ ಕೂಟದ ವಿಶೇಷ ಆಕರ್ಷಣೆಯಾಗಿ ಸದಸ್ಯರು ತಮ್ಮ ಮನೆಯಲ್ಲಿ ತಯಾರಿಸಿದ ಸುಮಾರು 40 ಬಗೆಯ ಸಾoಪ್ರದಾಯಕ ಖಾದ್ಯಗಳ ಪ್ರದರ್ಶನ ಸವಿಯುವ ಕಾರ್ಯಕ್ರಮ ನಡೆಯಿತು. ಗ್ರಾಮ ಸಮಿತಿ ಪದಾಧಿಕಾರಿಗಳು ಕಾರ್ಯಕ್ರಮ ಯಶಸ್ವಿಗೆ ಸಹಕರಿಸಿದರು.

✍️ ಮನು ಮದ್ದಡ್ಕ

Related posts

ಗೇರುಕಟ್ಟೆ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

Suddi Udaya

ವೇಣೂರು: ತುಂಬೆದಲ್ಕೆ ನಿವಾಸಿ ಕೃಷಿಕ ಸೇಸಪ್ಪ ಪೂಜಾರಿ ನಿಧನ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಗೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

Suddi Udaya

ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಮಹಿಳಾ ವೇದಿಕೆಯ ಪದಾಧಿಕಾರಿಗಳ ಆಯ್ಕೆ

Suddi Udaya

ಪುದುವೆಟ್ಟು ಓಂ ಶಕ್ತಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಬಜಿರೆ : ಹೊಸಪಟ್ಣ ನಿವಾಸಿ ಶ್ರೀಧರ ಪೂಜಾರಿ ನಿಧನ

Suddi Udaya
error: Content is protected !!