July 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸವಣಾಲು: ಹಿತ್ತಿಲಪೇಲ ಪ್ರದೇಶಕ್ಕೆ ಶಾಶ್ವತ ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸೂಕ್ತ ವರದಿ ನೀಡುವಂತೆ ಮೇಲಂತಬೆಟ್ಟು ಗ್ರಾ.ಪಂ.ಗೆ ಮೌಖಿಕ ಆದೇಶ ನೀಡಿದ ಬೆಳ್ತಂಗಡಿ ನ್ಯಾಯಾಧೀಶರು

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಸವಣಾಲು ಗ್ರಾಮದ ಹಿತ್ತಿಲಪೇಲ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ಅಪಾಯಕಾರಿ ನದಿಗೆ ಶಾಶ್ವತ ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸೂಕ್ತ ವರದಿ ನೀಡುವಂತೆ ಬೆಳ್ತಂಗಡಿ ತಾಲೂಕು ಕಾನೂನು ಸೇವೆಗಳ ಸಮಿತಿಯ ನ್ಯಾಯಾಧೀಶರು ಮೇಲಂತಬೆಟ್ಟು ಗ್ರಾಮ ಪಂಚಾಯತ್ ಗೆ ಮೌಖಿಕ ಆದೇಶ ನೀಡಿದ್ದಾರೆ.

ಲಾಯಿಲ ಗ್ರಾಮದ ಬರಮೇಲು ನಡುಗುಡ್ಡೆ ಮರದ ಕಾಲುಸಂಕ ಪ್ರದೇಶಕ್ಕೆ ಭೇಟಿ ನೀಡಿದ ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ , ಬೆಳ್ತಂಗಡಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಮನು ಬಿ.ಕೆ ಮತ್ತು ತಾಲೂಕು ಕಾನೂನು ಸೇವೆಗಳ ಸಮಿತಿಯ ಸದಸ್ಯ ಕಾರ್ಯದರ್ಶಿ , ಪ್ರಧಾನ ಸಿವಿಲ್ ನ್ಯಾಯಧೀಶ ರಾಮಲಿಂಗಪ್ಪರವರು ಬೆಳ್ತಂಗಡಿ ತಾಲೂಕಿನಲ್ಲಿ ಅಪಾಯಕಾರಿ ನದಿ , ತೊರೆ ದಾಟಲು ಸೇತುವೆ ಇಲ್ಲದಿರುವ ಬಗ್ಗೆ ಮಾಹಿತಿಯನ್ನು ಸಾರ್ವಜನಿಕರಲ್ಲಿ , ಅಧಿಕಾರಿಗಳಲ್ಲಿ ಕೇಳಿದರು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸಂಚಾಲಕ ಶೇಖರ್ ಲಾಯಿಲ ಮಾಹಿತಿ ನೀಡಿ ಸವಣಾಲು ಗ್ರಾಮದ ಹಿತ್ತಿಲಪೇಲ ಪ್ರದೇಶದಲ್ಲಿ ಅಪಾಯಕಾರಿ ನದಿಯನ್ನು ದಾಟಲು ಸೇತುವೆ ಇಲ್ಲದೆ ಕಳೆದ ವರ್ಷ ಯುವಕರಿಬ್ಬರು ದ್ವಿಚಕ್ರ ವಾಹನ ಸಮೇತ ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಪ್ರಾಣಾಪಾಯದಿಂದ ಪಾರಗಿರುವ ಬಗ್ಗೆ ಮತ್ತು ಇಂದಿಗೂ ಸೇತುವೆ ನಿರ್ಮಾಣ ಮಾಡದ ವ್ಯವಸ್ಥೆಯ ಬಗ್ಗೆ ಹಾಗೂ ರಸ್ತೆ , ವಿದ್ಯುತ್ ವಂಚಿತ ಅಲ್ಲಿನ ಮಲೆಕುಡಿಯ ಕುಟುಂಬಗಳ ಬಗ್ಗೆ ಮಾಹಿತಿ ನೀಡಿದರು. ಇಲ್ಲಿ ಈ ವರ್ಷ ಯಾವುದೇ ಪರ್ಯಾಯ ವ್ಯವಸ್ಥೆ ಕಲ್ಪಿಸದೆ ನದಿ ದಾಟುವುದನ್ನೆ ನಿರ್ಭಂಧಿಸಿ ಬ್ಯಾನರ್ ಅಳವಡಿಸಿ 9 ಆದಿವಾಸಿ ಮಲೆಕುಡಿಯ ಸಮುದಾಯದ ಕುಟುಂಬಗಳಿಗೆ ಸರ್ಕಾರಿ ದಿಗ್ಬಂಧನ ವಿಧಿಸಿರುವ ಬಗ್ಗೆ ನ್ಯಾಯಧೀಶರ ಗಮನ ಸೆಳೆದರು. ಆಗ ಸ್ಥಳದಲ್ಲಿದ್ದ ಉಪ ತಹಶೀಲ್ದಾರ್ ಮಲ್ಲಪ್ಪ ನಡುಗುಡ್ಡೆ ಯವರಿಗೆ ಈ ಬಗ್ಗೆ ವಿಸ್ತೃತ ವರದಿಯನ್ನು ಸೋಮವಾರ ಮಧ್ಯಾಹ್ನದೊಳಗೆ ನೀಡುವಂತೆ ಮೇಲಂತಬೆಟ್ಟು ಗ್ರಾಮ ಪಂಚಾಯತ್ ಮತ್ತು ಗ್ರಾಮಾಡಳಿತಾಧಿಕಾರಿಗೆ ಸೂಚಿಸುವಂತೆ ತಿಳಿಸಿದರು. ‌

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾಗಿ ಜಿತೇಶ್, ಕಾರ್ಯದರ್ಶಿಯಾಗಿ ರಕ್ಷಿತ್ ಅಂಡಿಂಜೆ ಆಯ್ಕೆ

Suddi Udaya

ಕಲ್ಲುಂಜ ಪ್ರಗತಿಪರ ಕೃಷಿಕ, ನಾಟಿ ವೈದ್ಯ ಅಣ್ಣಿ ಶೆಟ್ಟಿ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ನ.19-20 ರಂದು ಕೆ.ಎಸ್.ಆರ್ ಟಿ.ಸಿ ಬಸ್ ಸಂಚಾರದಲ್ಲಿ ವ್ಯತ್ಯಯ

Suddi Udaya

ತಣ್ಣೀರುಪಂತ: ಕುದ್ಕೋಳಿಕಟ್ಟೆ ಬ್ರಹ್ಮಬೈದರ್ಕಳ ಗರಡಿ ವಾರ್ಷಿಕ ನೇಮೋತ್ಸವ

Suddi Udaya

ಹುಟ್ಟೂರಿಗೆ ಆಗಮಿಸಿದ ನಿವೃತ್ತ ಯೋಧ ಎ.ಸಿ.ಪಿ. ನಾಯಕ್ ಸುಬೇದಾರ್ ಮೋಹನ ಗೌಡರಿಗೆ ಉಜಿರೆ ವರ್ತಕರ ಸಂಘದಿಂದ ಗೌರವಾರ್ಪಣೆ

Suddi Udaya

ಧರ್ಮಸ್ಥಳ ಅಶೋಕನಗರದಲ್ಲಿ 75 ನೇ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!