July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ- ರಕ್ಷಕ ಸಂಘದ ವಾರ್ಷಿಕ ಮಹಾಸಭೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ೨೦೨೬-೨೭ನೇ ಶೈಕ್ಷಣಿಕ ಸಾಲಿನ ಶಿಕ್ಷಕ-ರಕ್ಷಕ ಸಂಘದ ಮಹಾಸಭೆಯು ಜು. 25 ರಂದು ಮಡಂತ್ಯಾರು ಸೇಕ್ರೆಡ್ ಹಾರ್ಟ್ ಸಮುದಾಯ ಭವನದಲ್ಲಿ ಶಿಕ್ಷಕ ವೃಂದದವರು ಪ್ರಾರ್ಥನಾ ಗೀತೆಯನ್ನು ಹಾಡುವುದರ ಮೂಲಕ ಪ್ರಾರಂಭವಾಯಿತು.

ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಶಾಲಾ ಸಂಚಾಲಕರಾದ ವಂ|ಸ್ವಾ| ಸ್ಟ್ಯಾನಿ ಗೋವಿಯಸ್ ರವರು ವಹಿಸಿದ್ದರು. ಶಾಲಾ ಸಹಶಿಕ್ಷಕಿಯರಾದ ಶ್ರೀಮತಿ ರಮ್ಯಾಲತಾ ಮತ್ತು ಶ್ರೀಮತಿ ಸವಿತಾ ರವರು 2025-26ನೇ ಶೈಕ್ಷಣಿಕ ವರ್ಷದ ಸಭೆಯ ವರದಿಯನ್ನು ಮಂಡಿಸಿದರು. ಸಹ ಶಿಕ್ಷಕಿಯಾದ ಎಲಿಜಾ ಶಾಂತಿರವರು ೨೦೨೫-೨೬ನೇ ಶೈಕ್ಷಣಿಕ ಸಾಲಿನ ಲೆಕ್ಕಪತ್ರವನ್ನು ಸಭೆಗೆ ಮಂಡಿಸಿದರು.

ಸಭೆಗೆ ಸಂಪನ್ಮೂಲ ವ್ಯಕ್ತಿಗಳಾಗಿ ಸೇಂಟ್ ಪೌಲ್ ಚರ್ಚ್ ನ ಧರ್ಮಗುರುಗಳು , SIGNIS ಕರ್ನಾಟಕ ಪ್ರದೇಶದ ಅಧ್ಯಕ್ಷರಾದ ವಂ|ಸ್ವಾ| ರಿಚರ್ಡ್ ಡಿಸೋಜ ರವರು ಆಗಮಿಸಿ “ಜನರೇಷನ್ Z ಮತ್ತು ಜನರೇಷನ್ ಆಲ್ಫಾ ಮಕ್ಕಳ ಪೋಷಣೆ: ಅವಕಾಶಗಳು ಮತ್ತು ಸವಾಲುಗಳು”ಎಂಬ ವಿಷಯದ ಬಗ್ಗೆ ಮಾಹಿತಿಯನ್ನು ನೀಡಿದರು. ಸಹಶಿಕ್ಷಕಿಯಾದ ಶ್ರೀಮತಿ ಹರಿಣಾಕ್ಷಿ ರವರು ಸಂಪನ್ಮೂಲ ವ್ಯಕ್ತಿಗಳ ಪರಿಚಯವನ್ನು ಸಭೆಗೆ ಮಾಡಿದರು. ಶಾಲಾ ಮುಖ್ಯೋಪಾಧ್ಯಾಯರಾದ ವಂ|ಸ್ವಾ|ದೀಪಕ್ ಲಿಯೋ ಡೇಸರವರು ಶಾಲಾ ನಿಯಮಗಳು ಹಾಗೂ ಹೆತ್ತವರ ಸಲಹೆ ಸೂಚನೆಗಳಿಗೆ ಉತ್ತರವನ್ನು ನೀಡಿದರು. ಶಿಕ್ಷಕ-ರಕ್ಷಕ ಸಂಘದ ಎಲ್ಲಾ ಮಾಜಿ ಪದಾಧಿಕಾರಿಗಳಿಗೆ ಗಿಡವನ್ನು ನೀಡುವುದರ ಮೂಲಕ ಧನ್ಯವಾದಗಳನ್ನು ಅರ್ಪಿಸಲಾಯಿತು. 2026-27ನೇ ಶೈಕ್ಷಣಿಕ ಸಾಲಿನ ಪದಾಧಿಕಾರಿಗಳ ಚುನಾವಣೆಯನ್ನು ಮುಖ್ಯೋಪಾಧ್ಯಾಯರಾದ ವಂ|ಸ್ವಾ|ದೀಪಕ್ ಲಿಯೋ ಡೇಸರವರು ನೆರವೇರಿಸಿ ನಂತರ ದೀಪ ಬೆಳಗಿಸುವುದರ ಮೂಲಕ ೨೦೨೬-೨೭ನೇ ಶೈಕ್ಷಣಿಕ ಸಾಲಿನ ಶಿಕ್ಷಕ-ರಕ್ಷಕ ಸಂಘವನ್ನು ಉದ್ಘಾಟಿಸಲಾಯಿತು.

ಮಾಜಿ ಉಪಾಧ್ಯಕ್ಷ ರವಿಂದ್ರ ರೈ ರವರು ಮಾತನಾಡಿ ನಾವು ನಮ್ಮ ಮಕ್ಕಳನ್ನು ಈ ಸಂಸ್ಥೆಗೆ ಕಳುಹಿಸುವುದು ನಮ್ಮ ಹೆಮ್ಮೆಯ ವಿಷಯ ಆಗಿರುತ್ತದೆ ಎಂದು ಹೇಳಿ ಎಲ್ಲರಿಗೂ ಕೃತಜ್ಞತೆಯನ್ನು ಸಲ್ಲಿಸಿದರು. ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಪ್ರವೀಣ್ ಚಂದ್ರ ಶೆಟ್ಟಿ ಮಾತನಾಡಿ ಶಾಲೆಯ ಏಳಿಗೆಗೆ ಶ್ರಮಿಸುವುದಾಗಿ ಭರವಸೆಯನ್ನಿತ್ತರು. ನೂತನವಾಗಿ ನೇಮಕಗೊಂಡ ಎಲ್ಲಾ ಪದಾಧಿಕಾರಿಗಳಿಗೆ ಹೂವನ್ನು ನೀಡುವುದರ ಮೂಲಕ ಅಭಿನಂದಿಸಲಾಯಿತು. ಸಹ ಶಿಕ್ಷಕಿಯರಾದ ಶ್ರೀಮತಿ ಸಿಸಿಲಿಯ ಡಿಸೋಜ ಮತ್ತು ಶ್ರೀಮತಿ ಆಶಾಲತಾ ಕಾರ್ಯಕ್ರಮವನ್ನು ನಿರೂಪಿಸಿ, ಶ್ರೀಮತಿ ಮೇಘಶ್ರೀ ಸ್ವಾಗತಿಸಿ, ಶ್ರೀಮತಿ ಟ್ರೆಸಿ ಲೋಬೋ ಧನ್ಯವಾದವನ್ನು ಸಮರ್ಪಿಸಿದರು.

Related posts

ಬಳಂಜ ಜ್ಯೋತಿ ಮಹಿಳಾ ಮಂಡಲದ ಪದಾಧಿಕಾರಿಗಳ ಆಯ್ಕೆ ಸಭೆ: ಅಧ್ಯಕ್ಷರಾಗಿ ಚೇತನಾ ಜೈನ್, ಪ್ರ.ಕಾರ್ಯದರ್ಶಿಯಾಗಿ ಯಕ್ಷಿತಾ ದೇವಾಡಿಗ

Suddi Udaya

ನೆರಿಯ ಗ್ರಾಮ ಸಭೆ: ಜನವಸತಿಯಿರುವ ಪ್ರದೇಶಕ್ಕೆ ದಾರಿದೀಪ ವಿಸ್ತರಣೆಗೆ ಗ್ರಾಮಸ್ಥರ ಒತ್ತಾಯ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ಡ್ರಗ್ ಡಿಸ್ಕವರಿ ಮತ್ತು ಪ್ರಿಸಿಷನ್ ಮೆಡಿಸಿನ್‌ನಲ್ಲಿ ಎ.ಐ ಪಾತ್ರ ಕುರಿತು ಉಪನ್ಯಾಸ

Suddi Udaya

ರಾಷ್ಟ್ರೀಯ ತುಳು ಗುಡಿಗಾರ ಸಂಘ ದಕ್ಷಿಣ ಕನ್ನಡ ಮತ್ತು ಉಡುಪಿ ಇದರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ನಿರಂತರ ನೆಟ್‌ವರ್ಕ್ ಸಮಸ್ಯೆಯಿಂದ ಪರದಾಡುತ್ತಿರುವ ಗ್ರಾಮಸ್ಥರು, ಏರ್‌ಟೆಲ್ ವಿರುದ್ಧ ತೆಂಕಕಾರಂದೂರು ಗ್ರಾಮಸ್ಥರ ಪ್ರತಿಭಟನೆ

Suddi Udaya

ಬಿಲ್ಲವ ಜಾತಿ ಮಾತ್ರ, ಉಪಜಾತಿ ಇಲ್ಲ, ಬಿಲ್ಲವ ಸಮುದಾಯದ ಪ್ರತಿಯೊಬ್ಬರು ಜಾತಿ ಕಾಲಂ ನಂ 9ರಲ್ಲಿ ‘ಬಿಲ್ಲವ ‘ ಎಂದೇ ನಮೂದಿಸಿ: ಪತ್ರಿಕಾಗೋಷ್ಠಿಯಲ್ಲಿ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಹೇಳಿಕೆ

Suddi Udaya
error: Content is protected !!