28.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಸಂಘ-ಸಂಸ್ಥೆಗಳು

ಅಳದಂಗಡಿ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದಾಖಲೆಯ ರೂ. 2.12 ಕೋಟಿ ನಿವ್ವಳ ಲಾಭ

ಅಳದಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2025-26ನೇ ಸಾಲಿನಲ್ಲಿ ದಾಖಲೆಯ ಆರ್ಥಿಕ ಸಾಧನೆ ಮಾಡಿ ರೂ. 2.12 ಕೋಟಿ ನಿವ್ವಳ ಲಾಭ ಗಳಿಸಿದ್ದು, ಕಳೆದ ಮೂರು ವರ್ಷಗಳಲ್ಲಿ ಲಾಭದಲ್ಲಿ ಶೇ.94.49ರಷ್ಟು ಹೆಚ್ಚಳ ದಾಖಲಿಸಿದೆ ಎಂದು ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ ತಿಳಿಸಿದ್ದಾರೆ.

ಸಂಘವು ಪ್ರಸಕ್ತ ಸಾಲಿನ ಅಂತ್ಯಕ್ಕೆ ರೂ.5.82 ಕೋಟಿ ಪಾಲು ಬಂಡವಾಳ, ರೂ.39.18 ಕೋಟಿ ಠೇವಣಿ ಹೊಂದಿದ್ದು, ರೂ.66.80 ಕೋಟಿ ಹೊರಬಾಕಿ ಸಾಲ ಹಾಗೂ ರೂ.517.77 ಕೋಟಿ ವಾರ್ಷಿಕ ವ್ಯವಹಾರ ನಡೆಸಿದೆ.

ಕಳೆದ 27 ವರ್ಷಗಳಿಂದ ಸತತ ಲಾಭಗಳಿಸುತ್ತಿರುವ ಸಂಘವು ಲೆಕ್ಕಪರಿಶೋಧನೆಯಲ್ಲಿ ‘ಎ’ ಗ್ರೇಡ್‌ನ್ನು ಕಾಯ್ದುಕೊಂಡಿದೆ.
ರೈತರು ಹಾಗೂ ಸದಸ್ಯರಿಗೆ ಕೃಷಿ ಸಾಲ, ಠೇವಣಿ, ವಿಮೆ ಸೇರಿದಂತೆ ವಿವಿಧ ಆರ್ಥಿಕ ಸೇವೆಗಳನ್ನು ಪಾರದರ್ಶಕವಾಗಿ ಒದಗಿಸಲಾಗುತ್ತಿದ್ದು, ಸದಸ್ಯರ ವಿಶ್ವಾಸ ಹಾಗೂ ನಿರ್ದೇಶಕರ ಸಹಕಾರದಿಂದ ಈ ಸಾಧನೆ ಸಾಧ್ಯವಾಗಿದೆ ಎಂದು ರಾಕೇಶ್ ಹೆಗ್ಡೆ ಹೇಳಿದರು.

ಉತ್ತಮ ಸಾಲ ವಸೂಲಾತಿ, ಶಿಸ್ತುಬದ್ಧ ಹಣಕಾಸು ನಿರ್ವಹಣೆ ಹಾಗೂ ಸದಸ್ಯ ಕೇಂದ್ರಿತ ಸೇವೆಗಳ ಮೂಲಕ ಸಂಘವು ನಿರಂತರ ಪ್ರಗತಿ ಸಾಧಿಸುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ನವೀನ ಯೋಜನೆಗಳನ್ನು ಜಾರಿಗೆ ತರಲಾಗುವುದು ಎಂದರು.

ಈ ಸಾಧನೆಗೆ ಕಾರಣರಾದ ಸಂಘದ ಎಲ್ಲಾ ನಿರ್ದೇಶಕರು,ಸಿಬ್ಬಂದಿ ವರ್ಗ, ಸದಸ್ಯರು ಹಾಗೂ ಗ್ರಾಹಕರಿಗೆ ಅಭಿನಂದನೆ ಸಲ್ಲಿಸಿದ ಅವರು, ಮುಂದೆಯೂ ಇದೇ ರೀತಿಯ ಸಹಕಾರ ನೀಡುವಂತೆ ಮನವಿ ಮಾಡಿದರು.

ಸುವರ್ಣ ಸಂಭ್ರಮ- ವರ್ಷಪೂರ್ತಿ ಕಾರ್ಯಕ್ರಮ

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಸತತ ಮೂರು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಬ್ಯಾಂಕ್ ನೀಡುವ ವಿಶೇಷ ಪ್ರೋತ್ಸಾಹ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಈ ವರ್ಷ ಸಂಘವು ಸುವರ್ಣ ಸಂಭ್ರಮ ಆಚರಿಸುತ್ತಿದ್ದು, ಅದರ ಅಂಗವಾಗಿ ವರ್ಷಪೂರ್ತಿ ಸಾಮಾಜಿಕ, ಸಾಂಸ್ಕೃತಿಕ, ಕ್ರೀಡಾ, ಕೃಷಿ ಹಾಗೂ ಸದಸ್ಯರ ಕಲ್ಯಾಣ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ನವೆಂಬರ್ ತಿಂಗಳಲ್ಲಿ ಸುವರ್ಣ ಸಂಭ್ರಮದ ಸಮಾರೋಪ ಸಮಾರಂಭ ನಡೆಯಲಿದೆ. ಶೈಕ್ಷಣಿಕ ಸಾಧನೆ ಮಾಡಿದ ಸದಸ್ಯರ ಮಕ್ಕಳಿಗೆ ಸಹಾಯಧನ, ಕ್ರೀಡೆ, ಧಾರ್ಮಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಧನಸಹಾಯ, ತೀರ ಬಡತನದಲ್ಲಿರುವ ಸದಸ್ಯರ ವೈದ್ಯಕೀಯ ಚಿಕಿತ್ಸೆಗೆ ನೆರವು ಹಾಗೂ ಮರಣ ಸಾಂತ್ವನ ನಿಧಿ ಸೇರಿದಂತೆ ವಿವಿಧ ಜನಪರ ಯೋಜನೆಗಳನ್ನು ಸಂಘವು ನಿರಂತರವಾಗಿ ಜಾರಿಗೊಳಿಸುತ್ತಿದೆ ಎಂದು ಅಧ್ಯಕ್ಷ ರಾಕೇಶ್ ಹೆಗ್ಡೆ ತಿಳಿಸಿದ್ದಾರೆ.

Related posts

ನಾವೂರುನಲ್ಲಿ 40ನೇ ವರ್ಷದ ಶ್ರೀ ಅಯ್ಯಪ್ಪ ದೀಪೋತ್ಸವ: ಪಂದಳರಾಜ ಶಶಿಕುಮಾರ ವರ್ಮ ದಂಪತಿ ಭಾಗಿ

Suddi Udaya

ಜಿಲ್ಲಾ ಮಟ್ಟದ ಐಕ್ಸ್ ವಾಲಿಬಾಲ್ ಸ್ಪರ್ಧೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮಾಹಿತಿ ಮತ್ತು ಆಪ್ತ ಸಮಾಲೋಚನಾ ಕಾರ್ಯಾಗಾರ

Suddi Udaya

ಉಜಿರೆ “ಕನಸಿನ ಮನೆ” ಕೆ. ಮೋಹನ್ ಕುಮಾರ್‌ರ ವಿಭಿನ್ನ ಕಲ್ಪನೆಯಲ್ಲಿ ತಲೆಎತ್ತಿ ನಿಂತಿದೆ-ಬ್ರಹ್ಮಕಲಶೋತ್ಸವದಲ್ಲಿ ಮನಸೆಳೆಯುತ್ತಿರುವ “ಸುಪ್ರಸಾದ” ಭೋಜನಾಲಯ

Suddi Udaya

ಮುಳಿಯ ಜ್ಯುವೆಲ್ಸ್‌ನ ಡೈಮಂಡ್ ಫೆಸ್ಟ್‌ಗೆ ಗ್ರಾಹಕರಿಂದ ವ್ಯಾಪಕ ಬೆಂಬಲ; ಮನಮೆಚ್ಚಿದ ವಜ್ರಾಭರಣಗಳ ಖರೀದಿಗೆ ಸಾಲುಗಟ್ಟಿದ ಗ್ರಾಹಕರು

Suddi Udaya

ಆರ್ಥಿಕ ಇಲಾಖೆಯ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಹೊರಸಂಪನ್ಮೂಲ ನೌಕರರಿಂದ ರಕ್ಷಿತ್ ಶಿವರಾಂ ರವರಿಗೆ ಮನವಿ

Suddi Udaya
error: Content is protected !!