July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ‘ಶ್ರಮದಾನದ ಮೂಲಕ ಕೆದ್ದು ನರ್ಸರಿ ರಸ್ತೆ ಅಭಿವೃದ್ಧಿ ,ಗ್ರಾಮಸ್ಥರ ಸೇವೆಗೆ ಸಾರ್ವಜನಿಕರಿಂದ ಮೆಚ್ಚುಗೆ

ಅಳದಂಗಡಿ:ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡಗಕಾರಂದೂರು ಗ್ರಾಮದ ಕೆದ್ದು ನರ್ಸರಿ ರಸ್ತೆಯನ್ನು ಗ್ರಾಮಸ್ಥರು ಸ್ವಯಂಪ್ರೇರಿತವಾಗಿ ಜು 26ರಂದು ಶ್ರಮದಾನದ ಮೂಲಕ ಅಭಿವೃದ್ಧಿಪಡಿಸಿ ಮಾದರಿಯಾಗಿದ್ದಾರೆ.

ಸಾರ್ವಜನಿಕರಿಗೆ ಸುಗಮ ಸಂಚಾರ ಕಲ್ಪಿಸುವ ಉದ್ದೇಶದಿಂದ ಗ್ರಾಮಸ್ಥರು ಒಗ್ಗಟ್ಟಿನಿಂದ ರಸ್ತೆ ಕಾಮಗಾರಿಯನ್ನು ಕೈಗೊಂಡಿದ್ದು, ಸ್ಥಳೀಯರ ಶ್ರಮ ಮತ್ತು ಸಹಕಾರದಿಂದ ರಸ್ತೆ ಬದಿಯಯಲ್ಲಿದ ಕಳೆಗಿಡಗಂಟಿಗಳನ್ನು ತೆಗೆದು ಸರಿಪಡಿಸಲಾಗಿದೆ. ಜೆಸಿಬಿ ಮೂಲಕ ರಸ್ತೆಯನ್ನು ದುರುಸ್ತಿಗೊಳಿಸಲಾಗುತ್ತಿದೆ.

ಗ್ರಾಮಸ್ಥರ ಈ ಸಾಮಾಜಿಕ ಕಳಕಳಿ ಹಾಗೂ ಸೇವಾ ಮನೋಭಾವಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದ್ದು, ಶ್ರಮದಾನದಲ್ಲಿ ಸಂಜೀವ ಪೂಜಾರಿ ಗುರುದೇವ ಕೊಡಂಗೆ, ಪ್ರಶಾಂತ ಕೊಡಂಗೆ, ಹರೀಶ್ ಕುಲಾಲ್, ಗಣೇಶ್, ಸುನಿಲ್, ರಮೇಶ್ ಆಚಾರಿಬೆಟ್ಟು, ಪ್ರಭಾಕರ, ಪ್ರವೀಣ್, ಅರವಿಂದ, ಸುಧಾಕರ್, ಪೀಟರ್, ಶಕೀಬ್, ರಾಜೇಶ್, ನವೀನ್, ಸತೀಶ್, ಪ್ರಜ್ವಲ್, ಯಶೋಧರ, ರಮೇಶ್, ರಂಜಿತ್, ಭಾಸ್ಕರ, ರಮಾನಂದ ಸೇರಿದಂತೆ ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.

Related posts

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ಕಾರ್ಯತಂತ್ರ ಯೋಜನೆ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಟೀಂ ಅಭಯಹಸ್ತ ಇದರ ಸಮಾಲೋಚನಾ ಸಭೆ

Suddi Udaya

ಕಳೆಂಜ ಗ್ರಾಮ ಪಂಚಾಯತ್ ನಲ್ಲಿ ವಿಶೇಷಚೇತನರ ಸಮನ್ವಯ ಗ್ರಾಮಸಭೆ

Suddi Udaya

ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ಡಾ.ರಾಜಶೇಖರ ಕೋಟ್ಯಾನ್ ರವರ ನೇತೃತ್ವದಲ್ಲಿ ಮುದರಂಗಡಿಯಲ್ಲಿ ಸನ್ಮಾನ

Suddi Udaya

ಚಿಬಿದ್ರೆ: ಪೆರಿಯಡ್ಕ ಮಾಲ್ನ ನಿವಾಸಿ ಬಾಲಣ್ಣ ಗೌಡ ಹೃದಯಾಘಾತದಿಂದ ನಿಧನ

Suddi Udaya

ಅನಧಿಕೃತವಾಗಿ ಕಟ್ಟಡ ನಿರ್ಮಿಸುತ್ತಿದ್ದು ಸ್ಥಳ ಪರಿಶೀಲನೆ ವೇಳೆ ಗ್ರಾಮ ಆಡಳಿತ ಅಧಿಕಾರಿಯ ಮೇಲೆ ಹಲ್ಲೆ ಆರೋಪ: ಹಲ್ಲೆ ಮಾಡಿರುವ ಆರೋಪಿತರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಪೊಲೀಸ್ ಉಪನಿರೀಕ್ಷಕರಿಗೆ ಸೂಕ್ತ ನಿರ್ದೇಶನ ನೀಡಲು ಜಿಲ್ಲಾಧಿಕಾರಿಗಳಿಗೆ ಪತ್ರ

Suddi Udaya
error: Content is protected !!