July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ಸಂಪರ್ಕ ರಸ್ತೆಯಲ್ಲಿ ಮತ್ತೆ ಉರುಳಿ ಬಿದ್ದ ಮರ: ಪರದಾಡಿದ ಶಾಲಾ ಮಕ್ಕಳು

ವೇಣೂರು: ವೇಣೂರು-ಅಳದಂಗಡಿ ಸಂಪರ್ಕ ರಸ್ತೆಯ ಸೂಳಬೆಟ್ಟು ಎಂಬಲ್ಲಿ ರಸ್ತೆಗೆ ಅಡ್ಡವಾಗಿ ಬೃಹದಾಕಾರದ ಮರಬಿದ್ದು ಸಂಪರ್ಕ ಕಡಿತಗೊಂಡಿತು.

ಇಂದು ಬೆಳಿಗ್ಗೆ ಅದೇ ರಸ್ತೆಯಲ್ಲಿ ಬರುತ್ತಿದ್ದ ಖಾಸಗಿ ಶಾಲಾ ಬಸ್‌ ಸಂಚಾರಕ್ಕೆ ಅಡಚಣೆ ಉಂಟಾಗಿ ಶಾಲಾಮಕ್ಕಳಿಗೆ ತೊಂದರೆ ಆಗಿದೆ. ಕೆಲ ದಿನಗಳ ಹಿಂದೇ ಇದೇ ರಸ್ತೆಯಲ್ಲಿ ಮರಬಿದ್ದು ರಸ್ತೆ ಸಂಪರ್ಕ ಕಡಿತಗೊಂಡಿದ್ದಲ್ಲದೆ ವಿದ್ಯುತ್ ಕಂಬಗಳೂ ಉರುಳಿಬಿದ್ದಿದ್ದವು. ಮರ ಉರುಳಿ ಬೀಳುವ ವೇಳೆ ವಾಹನ ಸಂಚಾರ ಇಲ್ಲದೇ ಇದ್ದುದರಿಂದ ಅನಾಹುತ ನಡೆಯುವುದು ತಪ್ಪಿದೆ. ರಸ್ತೆಯುದ್ದಕ್ಕೂ ರಸ್ತೆಯ ಬದಿಗಳಲ್ಲಿ ಮರಗಳಿದ್ದು, ಇದು ಅರಣ್ಯ ಪ್ರದೇಶಗಳಿಂದ ಕೂಡಿದೆ. ಆದರೆ ರಸ್ತೆಯ ಬದಿಯಲ್ಲಿರುವ ಅಪಾಯಕಾರಿ ಮರಗಳನ್ನು ಗುರುತಿಸಿ ತೆರವುಗೊಳಿಸಬೇಕೆಂಬ ಆಗ್ರಹ ಕೇಳಿ ಬಂದಿದೆ.

Related posts

ಬೂಡುಜಾಲು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಧರ್ಮಸ್ಥಳ: ಮರದಿಂದ ಬಿದ್ದು ವ್ಯಕ್ತಿ ಮೃತ್ಯು

Suddi Udaya

ಮಂಜು ಇಂಡೇನ್ ಗ್ಯಾಸ್‌ನಿಂದ ಅಸಮರ್ಪಕ ಗ್ಯಾಸ್ ವಿತರಣೆ: ಜಿಲ್ಲಾಧಿಕಾರಿ, ಬೆಳ್ತಂಗಡಿ ಪೊಲೀಸರಿಗೆ ಗ್ರಾಹಕರಿಂದ ದೂರು.

Suddi Udaya

ಬೆಳ್ತಂಗಡಿ ಠಾಣೆಯಲ್ಲಿ ಎರಡು ಪ್ರಕರಣ ದಾಖಲು ಹಿನ್ನೆಲೆ: ಶಾಸಕ ಹರೀಶ್ ಪೂಂಜರ‌ ಬಂಧನಕ್ಕೆ ಅವರ ಮನೆಗೆ ಬಂದ ಪೊಲೀಸರು

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಓಡಿಲ್ನಾಳ ಮತ್ತು ಕುವೆಟ್ಟು ಗ್ರಾಮ ಸಮಿತಿಯ ತ್ರೈಮಾಸಿಕ ಸಭೆ ಹಾಗೂ ವನಮಹೋತ್ಸವ

Suddi Udaya

ಕಳೆಂಜ ಸಂತ ಸೆಬಾಸ್ಟಿಯನ್ ದೇವಾಲಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರಕ್ಕೆ ಚಾಲನೆ

Suddi Udaya
error: Content is protected !!