July 27, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಎರಡು ವರ್ಷದ ಕತ್ತಲೆಗೆ ಅಂತ್ಯ ಹಾಡಿದ ಶಾಸಕ ಹರೀಶ್ ಪೂಂಜ: ಮಂದಹಾಸ ಮೂಡಿಸಿದ ವಿದ್ಯುತ್ ಸಂಪರ್ಕ

ಬೆಳ್ತಂಗಡಿ: ಚುನಾವಣೆ ಬಂದಾಗ ಮಾತ್ರ ನೆನಪಾಗುವ ಜನಪ್ರತಿನಿಧಿಗಳ ಮಧ್ಯೆ, ಕೆಲಸ ಮಾಡಿ ತೋರಿಸುವ ಶಾಸಕರು ಇನ್ನೂ ಇದ್ದಾರೆ ಎಂಬುದಕ್ಕೆ ಬೆಳ್ತಂಗಡಿ ತಾಲೂಕಿನ ತಣ್ಣಿರುಪಂತ ಗ್ರಾಮದ ಪಾಲೇದು ಕೊಲ್ಯಾತ್ತಾರು ನಿವಾಸಿ ಉಷಾ ಪರಮೇಶ್ವರ ಪೂಜಾರಿ ಅವರ ಕುಟುಂಬವೇ ಸಾಕ್ಷಿ.

ಎರಡು ವರ್ಷ ಕತ್ತಲಲ್ಲೇ ಜೀವನ: ಆರ್ಥಿಕವಾಗಿ ಅತೀ ಹಿಂದುಳಿದ ಉಷಾ ಅವರ ಕುಟುಂಬದಲ್ಲಿ ಪತಿ-ಪತ್ನಿ ಇಬ್ಬರೂ ಕೂಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದಾರೆ. ಮಗನ ಫಿಸಿಯೋಥೆರಪಿ ವ್ಯಾಸಂಗಕ್ಕೆ ಹಣ ಹೊಂದಿಸುವ ಒತ್ತಡವೂ ಇದೆ. ಇದ್ದ ಚಿಕ್ಕ ಮನೆ ಕುಸಿದುಬಿದ್ದ ಬಳಿಕ, ಯಾರೋ ಹೇಳಿದ ಕಾರಣಕ್ಕೆ ಇದ್ದ ವಿದ್ಯುತ್ ಮೀಟರ್ ಅನ್ನು ಇಲಾಖೆಗೆ ಹಿಂದಿರುಗಿಸಿದ್ದರು.ನಂತರ ಪಂಚಾಯತ್ ನಿಂದ ಹೊಸ ಮನೆ ಮಂಜೂರಾಗಿ ಸಿಮೆಂಟ್ ಶೀಟ್ ಹಾಕಿ ಮನೆ ನಿರ್ಮಾಣವಾಯಿತು. ಆದರೆ ಇಲಾಖೆಯ ಕಾನೂನು ತೊಡಕು ಮತ್ತು ಹೆಚ್ಚುವರಿ ಶುಲ್ಕ ಪಾವತಿಸಲು ಆಗದ ಕಾರಣ ಕಳೆದ ಎರಡು ವರ್ಷಗಳಿಂದ ಈ ಮನೆಗೆ ವಿದ್ಯುತ್ ಸಂಪರ್ಕವೇ ಇರಲಿಲ್ಲ. ಚಿಮಿಣಿ ದೀಪದ ಬೆಳಕಿನಲ್ಲೇ ದಿನ ದೂಡುವ ಪರಿಸ್ಥಿತಿ ಇತ್ತು.

ಶಾಸಕರ ಮಧ್ಯಪ್ರವೇಶದಿಂದ ಪರಿಹಾರ: ಈ ವಿಷಯವನ್ನು ಮಾಜಿ ತಾಲೂಕು ಪಂಚಾಯತ್ ಸದಸ್ಯರು ಗ್ರಾಮ ಪಂಚಾಯತ್ ನಿಂದ ದೃಢ ಪತ್ರ, ಇಂಜಿನಿಯರ್ ನಿಂದ ಮನೆ ಪೂರ್ಣಗೊಂಡ ಬಗ್ಗೆ ದಾಖಲೆಗಳೊಂದಿಗೆ ಶಾಸಕ ಶ್ರೀ ಹರೀಶ್ ಪೂಂಜಾ ಅವರ ಗಮನಕ್ಕೆ ತಂದರು.ವಿಷಯ ತಿಳಿದ ಕೂಡಲೇ ಶಾಸಕರು ಮುತುವರ್ಜಿ ವಹಿಸಿದರು. ಮೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಅವರೊಂದಿಗೆ ಮಾತನಾಡಿ ಕನಿಷ್ಠ ಶುಲ್ಕದಲ್ಲಿ ಸಂಪರ್ಕ ನೀಡಲು ಅನುಮತಿ ಕೊಡಿಸಿದರು.ಅದರಂತೆ ಉಪ್ಪಿನಂಗಡಿಯ ಮಹಾಲಿಂಗೇಶ್ವರ ಇಲೆಕ್ಟ್ರಿಕಲ್ ಗುತ್ತಿಗೆದಾರರು ಕಡಿಮೆ ವೆಚ್ಚದಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಿದರು.

ಕತ್ತಲಿಂದ ಬೆಳಕಿಗೆ: ಇಂದು ಉಷಾ ಅವರ ಮುಖದಲ್ಲಿ ಎರಡು ವರ್ಷದ ಬಳಿಕ ಮಂದಹಾಸ ಮೂಡಿದೆ. ಮನೆಯಲ್ಲಿ ಬಲ್ಬ್ ಬೆಳಗಿದ ಕ್ಷಣವೇ ಅವರಿಗೆ ಹೊಸ ಬದುಕು ಆರಂಭವಾದ ಅನುಭವವಾಗಿದೆ. ಸಮಾಜಭಿಮಾನದ ಮಾತು ಆಡುವುದೊಂದೇ ಅಲ್ಲ, ನೆಲದ ಮೇಲಿನ ಸಮಸ್ಯೆಗೆ ಸ್ಪಂದಿಸುವ ನಾಯಕತ್ವಕ್ಕೆ‌ಶಾಸಕರ ಸ್ಪಂದಿಸುವ ಈ ಘಟನೆ ಮತ್ತೊಂದು ಉದಾಹರಣೆಯಾಗಿದೆ.

Related posts

ಉಜಿರೆ: ಎಸ್ ಡಿ ಎಂ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಯೋಧ್ಯೆ ಶ್ರೀರಾಮಮಂದಿರ ನಿರ್ಮಾಣದ ಉಸ್ತುವಾರಿ ವಿ.ಹಿಂ.ಪ. ಸಮಿತಿ ಪ್ರಧಾನಕಾರ್ಯದರ್ಶಿ ಗೋಪಾಲ್ ಜಿ. ಭೇಟಿ

Suddi Udaya

ಮಚ್ಚಿನ ಸಂಪರ್ಕ ರಸ್ತೆಯ ಪಯ್ಯೊಟ್ಟು ಎಂಬಲ್ಲಿ ವಿದ್ಯುತ್ ಕಂಬದ ಮೇಲೆ ಮರ ಬಿದ್ದು ಹಾನಿ

Suddi Udaya

ರಾಜ್ಯ ಮಟ್ಟದ ಸ್ಕೌಟ್ಸ್‌ & ಗೈಡ್ಸ್‌ ಜಾಂಬೋರೇಟ್‌ ಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಅಕ್ಕಿ ಕೊಡುಗೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮ: ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಲಾಯಿಲ : ಸಿಂಧೂರ ಮಹಿಳಾ ಜ್ಞಾನ ವಿಕಾಸ ಕೇಂದ್ರದಲ್ಲಿ ಬೀದಿ ನಾಟಕ ಕಾರ್ಯಕ್ರಮ

Suddi Udaya
error: Content is protected !!