July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ, ಮಹಿಳಾ ಘಟಕ, ಯುವ ವೇದಿಕೆ ಆಶ್ರಯದಲ್ಲಿ ‘ಆಟಿಡೊಂಜಿ ದಿನ’ ಮತ್ತು ಪ್ರತಿಭಾ ಪುರಸ್ಕಾರ

ನಡ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ ,/ ಮಹಿಳಾ ಘಟಕ, ಯುವ ವೇದಿಕೆ, ನಡ ಇವರ ಆಶ್ರಯದಲ್ಲಿ ಜು.26 ರಂದು ಆಟಿಡೊಂಜಿ ದಿನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಪೂವಾಜೆ ಕುಶಾಲಪ್ಪಗೌಡ ನೆರವೇರಿಸಿದರು . ವಾಣಿ ವಿದ್ಯಾ ಸಂಸ್ಥೆಗಳು ಬೆಳೆದು ಬಂದ ಹಾದಿಯನ್ನು ವಿವರಿಸಿದರು ಹಾಗೂ ಸಮುದಾಯದವರು ಹೆಚ್ಚಿನ ಸಾಧನೆಯನ್ನು ಮಾಡಬೇಕು ಎಂಬ ಶುಭ ಹಾರೈಕೆ ಮಾಡಿದರು.

ಮುಖ್ಯ ಅತಿಥಿಯಾಗಿ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ ಪುಷ್ಪಗಿರಿ ಯುವ ಉದ್ಯಮಿ ಇವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಸಮುದಾಯದ ಜನರ ಅಭಿವೃದ್ಧಿಯ ವಿಚಾರವನ್ನು ತಿಳಿಸಿದರು. ಹಾಗೂ ಕಾರ್ಯಕ್ರಮದ ಯಶಸ್ವಿಗೆ ಸಹಕಾರ ನೀಡಿದರು. ಸಮಾರಂಭದಲ್ಲಿ ಸುರೇಶ್ ಕೌಡಂಗೆ, ತಾಲೂಕು ಮಹಿಳಾ ವೇದಿಕೆ ಕಾರ್ಯದರ್ಶಿ ಶ್ರೀಮತಿ ಲೀಲಾವತಿ ಪ್ರಸ್ತುತ ಮಹಿಳೆಯರ ಆಚಾರ ವಿಚಾರಗಳ ಬಗ್ಗೆ ತಿಳಿಸಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಮಹಾಬಲ ಗೌಡ ಉಪನ್ಯಾಸಕರು ವಾಣಿ ಪದವಿ ಪೂರ್ವ ಕಾಲೇಜು ಇವರು ಆಟಿ ತಿಂಗಳ ಮಹತ್ವದ ಬಗ್ಗೆ ಉಪನ್ಯಾಸ ನೀಡಿದರು. ಹತ್ತನೇ ತರಗತಿಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಪ್ರಾಪ್ತಿ ಯಂ ಗೌಡ ಇವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು. ಹಾಗೂ ಕೋಕೋ ಪಂದ್ಯಾಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಗ್ರಾಮದ ಪ್ರತಿಭೆಗಳಾದ ಸುಚಿತ್ರ ಗೌಡ , ಭಾಗ್ಯಶ್ರೀ ಕೆ ಗೌಡ ಸನ್ಮಾನಿಸಲಾಯಿತು.

ಗ್ರಾಮದ ಪಿಯುಸಿ ಹಾಗೂ ಎಸ್ ಎಸ್ ಎಲ್ ಸಿ ಎಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಪ್ರತಿಭಾ ಪುರಸ್ಕಾರ ನೀಡುವುದರ ಮೂಲಕ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಹಾಗೂ ಮಕ್ಕಳಿಗೆ ವಿಶೇಷ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಯಿತು. ಕಾರ್ಯಕ್ರಮಕ್ಕೆ ಆಗಮಿಸಿದ ಹಿರಿಯ ದಂಪತಿಗಳನ್ನು ಗುರುತಿಸಿ ಗೌರವಿಸಲಾಯಿತು. ಇದೇ ರೀತಿ ಹಿಂದೂ ಸಂಸ್ಕೃತಿಯನ್ನು ಬಿಂಬಿಸುವ ಪುರುಷರು ಕಿವಿಯೋಲೆ ಧರಿಸಿದವರನ್ನು ವಿಶೇಷವಾಗಿ ಗಮನಿಸಿ ವಿಶೇಷ ಬಹುಮಾನವನ್ನು ನೀಡಲಾಯಿತು. ಸಭಾಧ್ಯಕ್ಷತೆಯನ್ನು ಮಹಿಳಾ ಘಟಕದ ಅಧ್ಯಕ್ಷ ಶ್ರೀಮತಿ ಸೌಮ್ಯ ಯತೀಶ್ ಗೌಡ ವಹಿಸಿದ್ದರು.

ಗೌರವಾಧ್ಯಕ್ಷೆ ಮಮತಾ ಶ್ರೀನಾಥ್ ಸ್ವಾಗತಿಸಿ, , ಉಮಾವತಿ ಧನ್ಯವಾದ ಹೇಳಿದರು. ಹಲವಾರು ಜವಾಬ್ದಾರಿಗಳನ್ನು ಲಲಿತಾ ಸುಭಾಷ್ ಚಂದ್ರ ಗೌಡ, ಚಿತ್ರ ಕರುಣಾಕರ ಗೌಡ, ಹರ್ಣಿ, ತುಳಸಿ ಹರಿಶ್ಚಂದ್ರ ಗೌಡ, ಪವಿತ್ರ ದಿನೇಶ್ ಗೌಡ, ಲಲಿತಾ ಒಬ್ಬಯ್ಯ ಗೌಡ ನಿರ್ವಹಿಸಿದರು. ಗ್ರಾಮ ಸಮಿತಿಯ ಅಧ್ಯಕ್ಷ ಶ್ಯಾಮ ಸುಂದರ ಗೌಡ, ಯುವ ವೇದಿಕೆ ಅಧ್ಯಕ್ಷ ಶ್ರೀಧರ ಗೌಡ ಹಾಗೂ ಕಾರ್ಯದರ್ಶಿ ಉಮೇಶ್ ಗೌಡ ಭಾಗವಹಿಸಿದ್ದರು. ಕಾರ್ಯಕ್ರಮದ ನಿರ್ವಹಣೆಯನ್ನು ರತ್ನಾವತಿ ಲೋಕೇಶ್ ಗೌಡ ನೆರವೇರಿಸಿದರು . ನಳಿನಿ ಮತ್ತು ಬಳಗ ಪ್ರಾರ್ಥನೆ ನೆರವೇರಿಸಿದರು. ಆಟಿಯ ವಿಶೇಷ ಬಗೆ ಬಗೆಯ ಖಾದ್ಯಗಳನ್ನು ಸವಿಯೋದರ ಮೂಲಕ ಕಾರ್ಯಕ್ರಮ ಸಂಪನ್ನಗೊಂಡಿತು.

Related posts

ಬಂಟ್ವಾಳದಲ್ಲಿ ಸಮರ ಸೌಗಂಧಿಕೆ ತಾಳಮದ್ದಳೆ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ 27ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ-ಉಪ್ಪಿನಂಗಡಿ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಬೃಹತ್ ಸಾರಿ ಮೇಳ: ಸೀರೆಗಳ ಮೇಲೆ ಶೇ.50 ಡಿಸ್ಕೌಂಟ್: ಕೆಲವೇ ದಿನಗಳು ಮಾತ್ರ

Suddi Udaya

ಬೆಳ್ತಂಗಡಿ: ಪಂಚಾಯತ್ ಸದಸ್ಯರ ಪೂರ್ವಭಾವಿ ಸಭೆ: ಮಹಾತ್ಮಾ ಗಾಂಧಿಯವರ ‘ಗ್ರಾಮ ಸ್ವರಾಜ್ಯ’ ಕನಸು ಸಾಕಾರಗೊಳಿಸಿದ್ದು ‘ಪಂಚಾಯತ್ ರಾಜ್’ ವ್ಯವಸ್ಥೆ: ರಕ್ಷಿತ್ ಶಿವರಾಂ

Suddi Udaya

ಮರುಮೌಲ್ಯ ಮಾಪನದಲ್ಲಿ ಶ್ರೀ ಧ.ಮಂ.ಪ.ಪೂ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಕು. ಅನನ್ಯ ರಾಜ್ಯಕ್ಕೆ 9ನೇ ರ‍್ಯಾಂಕ್

Suddi Udaya

ಲಾಯಿಲದಲ್ಲಿ ಕೃಷಿ/ತೋಟಗಾರಿಕೆ ಯಂತ್ರೋಪಕರಣಗಳ ಮಾರಾಟ ಹಾಗೂ ಸರ್ವೀಸ್ ಸೆಂಟರ್ ಮಳಿಗೆ ಉದ್ಘಾಟನೆ

Suddi Udaya
error: Content is protected !!