July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ವತಿಯಿಂದ ಆರ್ಥಿಕ ಸಹಾಯಧನ ವಿತರಣೆ

ಬೆಳ್ತಂಗಡಿ: ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಇದರ ವತಿಯಿಂದ ಜು.26 ರಂದು ಬೆಳ್ತಂಗಡಿ ತಾಲೂಕಿನ ಬಂಟರ ಸಂಘದ ಅಧ್ಯಕ್ಷ ಪ್ರಕಾಶ್ ಶೆಟ್ಟಿ ನೊಚ್ಚ ಇವರ ನಿರ್ದೇಶನದಂತೆ ಬಂಟರ ಗ್ರಾಮ ಸಮಿತಿ ಹೊಸಂಗಡಿ ಬಡಕೋಡಿಯ ಗ್ರಾಮ ಸಭೆಯಲ್ಲಿ ಸ್ನಾತಕೋತ್ತರ ವಿದ್ಯಾಭ್ಯಾಸದ ಸಾಮಾಗ್ರಿಗೆ ಹತ್ತು ಸಾವಿರ ರೂಪಾಯಿಯನ್ನು ಸಿಂಚನ ಶೆಟ್ಟಿ ಗೆ ಹಾಗೂ ಗ್ರಾಮದ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ಐದು ಸಾವಿರ ರೂಪಾಯಿ ಬಂಟರ ಗ್ರಾಮ ಸಮಿತಿ ಅಧ್ಯಕ್ಷರಿಗೆ ಬಂಟರ ಯಾನೆ ನಾಡವರ ಮಾತೃ ಸಂಘದ ಬೆಳ್ತಂಗಡಿ ತಾಲೂಕಿನ ಸಂಚಾಲಕರಾದ ಎಂ. ಜಯರಾಂ ಭಂಡಾರಿ ಧರ್ಮಸ್ಥಳ ಹಾಗೂ ಮಾತೃ ಸಂಘದ ಬೆಳ್ತಂಗಡಿ ತಾಲೂಕಿನ ಕಾರ್ಯಕಾರಿ ಸಮಿತಿಯ ಸದಸ್ಯೆ ಸುಜಾತ ಶೆಟ್ಟಿ ವಿತರಿಸಿದರು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕಿನ ಬಂಟರ ಸಂಘದ ನಿರ್ದೇಶಕರಾದ ರಮೇಶ್ ಶೆಟ್ಟಿ ಉಪಸ್ಥಿತರಿದ್ದರು. ಸಭೆಯಲ್ಲಿ ಗ್ರಾಮ ಸಮಿತಿಯ ಉಫಾಧ್ಯಕ್ಷ ಲೋಹಿತ್ ರೈ ಹಾಗೂ ಉಪ ಕಾರ್ಯದರ್ಶಿ ದಿನೇಶ್ ಶೆಟ್ಟಿ ಹಾಜರಿದ್ದರು. ಗ್ರಾಮದ ಬಂಟರು ಸಭೆಯಲ್ಲಿ ಹಾಜರಾಗಿದ್ದು ಮುಂದಿನ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಲಾಯಿತು.

Related posts

ಉದ್ಯಮಿ ಶಶಿಧರ ಶೆಟ್ಟಿ ಬರೋಡರಿಂದ ಕಾಶಿ ಶೆಟ್ಟಿಯವರ ಸ್ಮರಣಾರ್ಥ ಬಡ ಬಂಟ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ಆರ್ಥಿಕ ನೆರವು

Suddi Udaya

ಬೆಳ್ತಂಗಡಿ ಕಾಂಗ್ರೇಸ್ ಮಹಿಳಾ ಘಟಕದಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ

Suddi Udaya

ಬಳಂಜ: ಅಸೌಖ್ಯದಿಂದ ಮಹಿಳೆ ಸಾವು

Suddi Udaya

ಚಾರ್ಮಾಡಿಯಲ್ಲಿ ವಿಳಂಬವಾಗುತ್ತಿರುವ ಮತದಾನ, ಕಾದು ಕಾದು ಸುಸ್ತಾದ ಮತದಾರರು.

Suddi Udaya

ಉಜಿರೆ ಕಾಶಿಬೆಟ್ಟು ಸಹನಶ್ರೀ ಕ್ರೆಡಿಟ್ ಸೌಹಾರ್ದ ಕೋ-ಆಪರೆಟಿವ್ ಸೊಸೈಟಿಯಿಂದ ಮನೆ ನಿರ್ಮಾಣಕ್ಕೆ ಆರ್ಥಿಕ ಸಹಾಯ

Suddi Udaya

ಅಳದಂಗಡಿ ಸ.ಪ.ಪೂ. ಕಾಲೇಜಿನಲ್ಲಿ ಪ್ರಯೋಗಾಲಯ ಉಪಕರಣಗಳ ಹಸ್ತಾಂತರ ಮತ್ತು ಪ್ರತಿಭಾ ಪುರಸ್ಕಾರ

Suddi Udaya
error: Content is protected !!