28.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳಂಜ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಪ್ರವೀಣ್ ಕುಮಾರ್ ಹೆಚ್.ಎಸ್ ಆಯ್ಕೆ

ಬಳಂಜ: ಅತ್ಯಂತ ವಿಜೃಂಭಣೆ ಮತ್ತು ವೈವಿದ್ಯಮಯವಾಗಿ ನಡೆಯುವ ಬಳಂಜ ಸಾರ್ವಜನಿಕ‌ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆಯು ಜು 26ರಂದು ಬಳಂಜ ಶ್ರೀ ಉಮಾಮಹೇಶ್ವರ ಯುವಕ ಮಂಡಲದಲ್ಲಿ ನಡೆಯಿತು.

39ನೇ ವರ್ಷದ ಶ್ರೀ ಗಣೇಶೋತ್ಸವ ಆಚರಣಾ ಸಮಿತಿ ಅಧ್ಯಕ್ಷರಾಗಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ನಿಕಟಪೂರ್ವಾಧ್ಯಕ್ಷ, ಸಾಮಾಜಿಕ, ಧಾರ್ಮಿಕ,ಶೈಕ್ಷಣಿಕ ಕ್ಷೇತ್ತದ ಮುಂದಾಳು ಪ್ರವೀಣ್ ಕುಮಾರ್ ಹೆಚ್‌ಎಸ್ ಅವಿರೋಧವಾಗಿ ಆಯ್ಕೆಯಾದರು.

ಪ್ರಧಾನ ಕಾರ್ಯದರ್ಶಿಯಾಗಿ ಯುವ ಸಂಘಟಕ ಗಣೇಶ್ ಸಂಭ್ರಮ, ಉಪಾಧ್ಯಕ್ಷರಾಗಿ ಪ್ರವೀಣ್ ಪೂಜಾರಿ ಲಾಂತ್ಯಾರು, ರಾಘವೇಂದ್ರ ಭಟ್ ಬಳಂಜ, ಯಶೋಧರ ಶೆಟ್ಟಿ ಬಳಂಜ, ಸುಕೇಶ್ ಹಾನಿಂಜ, ಸಂಪತ್ ಕೋಟ್ಯಾನ್ , ಕೋಶಾಧಿಕಾರಿಯಾಗಿ ಗುರುಪ್ರಸಾದ್ ಹೆಗ್ಡೆ ಆಯ್ಕೆಯಾದರು.

ಶ್ರೀ ಗಣೇಶೋತ್ಸವ ಯಶಸ್ವಿಗೆ ಇತರ ಸಮಿತಿಗಳನ್ನು ರಚಿಸಲಾಯಿತು. ಕಳೆದ ವರ್ಷದ ಅಧ್ಯಕ್ಷ ಗುರುಪ್ರಸಾದ್ ಹೆಗ್ಡೆ ಹಿಂದಿನ ಅವಧಿಯಲ್ಲಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಅರ್ಪಿಸಿದರು.

ಈ ಸಂದರ್ಭದಲ್ಲಿ ಸಮಿತಿ ಮಾಜಿ‌ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ, ಯತೀಶ್ ದೇವಾಡಿಗ ಹಾಗೂ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು .

Related posts

ಮಲವಂತಿಗೆ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಪಂಚಾಯತ್‌ ನೌಕರರ ಮೂಲ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರುನಲ್ಲಿ ಗ್ರಾಮ ಪಂಚಾಯತ್ ನೌಕರರ ರಾಜ್ಯ ಮಟ್ಟದ ಬೃಹತ್ ಪ್ರತಿಭಟನೆ

Suddi Udaya

ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು ಇದರ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಣಿಯೂರು : ಓಮ್ಮಿ ಕಾರು ಹಾಗೂ ರಿಡ್ಜ್ ಕಾರು ಮುಖಾಮುಖಿ ಡಿಕ್ಕಿ

Suddi Udaya

ಎಂಡೋ ಪೀಡಿತ ಮಗುವಿನ ಚಿಕಿತ್ಸೆಗೆ ನೇರವಾದ ರಕ್ಷಾಸಮಿತಿ ಸದಸ್ಯ ಕರೀಮ್‌ ಗೇರುಕಟ್ಟೆ

Suddi Udaya
error: Content is protected !!