28.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳಂಜ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಪ್ರವೀಣ್ ಕುಮಾರ್ ಹೆಚ್.ಎಸ್ ಆಯ್ಕೆ

ಬಳಂಜ: ಅತ್ಯಂತ ವಿಜೃಂಭಣೆ ಮತ್ತು ವೈವಿದ್ಯಮಯವಾಗಿ ನಡೆಯುವ ಬಳಂಜ ಸಾರ್ವಜನಿಕ‌ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆಯು ಜು 26ರಂದು ಬಳಂಜ ಶ್ರೀ ಉಮಾಮಹೇಶ್ವರ ಯುವಕ ಮಂಡಲದಲ್ಲಿ ನಡೆಯಿತು.

39ನೇ ವರ್ಷದ ಶ್ರೀ ಗಣೇಶೋತ್ಸವ ಆಚರಣಾ ಸಮಿತಿ ಅಧ್ಯಕ್ಷರಾಗಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ನಿಕಟಪೂರ್ವಾಧ್ಯಕ್ಷ, ಸಾಮಾಜಿಕ, ಧಾರ್ಮಿಕ,ಶೈಕ್ಷಣಿಕ ಕ್ಷೇತ್ತದ ಮುಂದಾಳು ಪ್ರವೀಣ್ ಕುಮಾರ್ ಹೆಚ್‌ಎಸ್ ಅವಿರೋಧವಾಗಿ ಆಯ್ಕೆಯಾದರು.

ಪ್ರಧಾನ ಕಾರ್ಯದರ್ಶಿಯಾಗಿ ಯುವ ಸಂಘಟಕ ಗಣೇಶ್ ಸಂಭ್ರಮ, ಉಪಾಧ್ಯಕ್ಷರಾಗಿ ಪ್ರವೀಣ್ ಪೂಜಾರಿ ಲಾಂತ್ಯಾರು, ರಾಘವೇಂದ್ರ ಭಟ್ ಬಳಂಜ, ಯಶೋಧರ ಶೆಟ್ಟಿ ಬಳಂಜ, ಸುಕೇಶ್ ಹಾನಿಂಜ, ಸಂಪತ್ ಕೋಟ್ಯಾನ್ , ಕೋಶಾಧಿಕಾರಿಯಾಗಿ ಗುರುಪ್ರಸಾದ್ ಹೆಗ್ಡೆ ಆಯ್ಕೆಯಾದರು.

ಶ್ರೀ ಗಣೇಶೋತ್ಸವ ಯಶಸ್ವಿಗೆ ಇತರ ಸಮಿತಿಗಳನ್ನು ರಚಿಸಲಾಯಿತು. ಕಳೆದ ವರ್ಷದ ಅಧ್ಯಕ್ಷ ಗುರುಪ್ರಸಾದ್ ಹೆಗ್ಡೆ ಹಿಂದಿನ ಅವಧಿಯಲ್ಲಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಅರ್ಪಿಸಿದರು.

ಈ ಸಂದರ್ಭದಲ್ಲಿ ಸಮಿತಿ ಮಾಜಿ‌ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ, ಯತೀಶ್ ದೇವಾಡಿಗ ಹಾಗೂ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು .

Related posts

ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸುಳ್ಯಗ್ರಾಹಕರ ಸೇವೆಗಾಗಿ ವೇಣೂರಿನಲ್ಲಿ 21 ನೇ ನೂತನ ಶಾಖೆಯ ಉದ್ಘಾಟನೆ

Suddi Udaya

ಉಜಿರೆ ದೇವಸ್ಥಾನದಲ್ಲಿ ಸಂಕಷ್ಟ ಚತುರ್ಥಿ ಪ್ರಯುಕ್ತ  ಕಾವ್ಯವಾಚನ-ವ್ಯಾಖ್ಯಾನ   

Suddi Udaya

ಕಲ್ಲಾಜೆ-ಇಂದಬೆಟ್ಟು ನವ ಭಾರತ್ ಗೆಳೆಯರ ಬಳಗದ ವತಿಯಿಂದ ಆಟಿಡೊಂಜಿ ದಿನ ಹಾಗೂ ವಿದ್ಯಾನಿಧಿ ವಿತರಣಾ ಸಮಾರಂಭ

Suddi Udaya

ಬೆಳಾಲು ಡಿ.ಪಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಹಾಗೂ ವಲಯ ಮಟ್ಟದ ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಕಾರ್ಯಕ್ರಮ

Suddi Udaya

ಕರ್ತವ್ಯದ ವೇಳೆ ಬೆಳ್ತಂಗಡಿ ತಹಶೀಲ್ದಾ‌ರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ನಾವೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಆರ್ಥಿಕ ಸಹಾಯ

Suddi Udaya
error: Content is protected !!