July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಬಿ. ವಿಜಯ ಕುಮಾರ್ ಗೆ ಕರ್ನಾಟಕದ ಡಿಜಿ ಮತ್ತು ಐಜಿಪಿ ರವರ ಪ್ರಶಂಸ ಪದಕ ಪ್ರದಾನ

ಬೆಳ್ತಂಗಡಿ: ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸಾಧನೆಗಾಗಿ ಬೆಳ್ತಂಗಡಿ ನಗರದ ಕೆಲ್ಲಗುತ್ತು ನಿವಾಸಿ ದಿ. ಗೋಪಾಲ ಕೃಷ್ಣ ಮತ್ತು ಶಾರದ ದಂಪತಿಗಳ ಪುತ್ರ ಪ್ರಸ್ತುತ ಉಡುಪಿ ಪೊಲೀಸ್ ಇಲಾಖೆ ಯಲ್ಲಿ ಸಿವಿಲ್ ಹೆಡ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಬಿ. ವಿಜಯಕುಮಾರ್ ರವರಿಗೆ 2026 ನೇ ಸಾಲಿನ ಕರ್ನಾಟಕ ದ ಡಿಜಿ ಮತ್ತು ಐಜಿಪಿ ರವರು ನೀಡುವ ಪ್ರತಿಷ್ಠಿತ ಪ್ರಶಂಸನ ಚಿನ್ನದ ಪದಕವನ್ನು ಬೆಂಗಳೂರಿನ ಕೆ ಎಸ್ ಆರ್ ಪಿ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ
ಡಿ.ಜಿ & ಐಜಿಪಿ ಡಾ.ಎಂ. ಎ. ಸಲಿಂ ಪ್ರದಾನ ಮಾಡಿದರು.

ಈ ಸಂದರ್ಭದಲ್ಲಿ ಡಿಜಿಪಿಗಳಾದ ಪ್ರಣವ್ ಮೊಹಂತಿ, ಅಲೋಕ್ ಕುಮಾರ್, ಅರುಣ್ ಚಕ್ರವರ್ತಿ ಮತ್ತಿತರ ಅಧಿಕಾರಗಳು ಉಪಸ್ಥಿತರಿದ್ದರು.

ಬಿ.ವಿಜಯ ಕುಮಾರ್ ಅವರು ಈ ಮೊದಲು 2022ರಲ್ಲಿ ಕರ್ನಾಟಕ ಮುಖ್ಯ ಮಂತ್ರಿ ಯವರ ಚಿನ್ನದ ಪದಕ ಹಾಗೂ 2024ರಲ್ಲಿ ಭಾರತದ ರಾಷ್ಟ್ರಪತಿಗಳ ಶ್ಲಾಘನೀಯ ಪದಕಕ್ಕೆ ಪಾತ್ರರಾಗಿದ್ದರು.
ಇವರು ಸುಮಾರು 33 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿರುತ್ತಾರೆ. ಇವರು ಈ ಮೊದಲು ಉಳ್ಳಾಲ, ಪಣಂಬೂರು, ಕದ್ರಿ, ಉರ್ವ, ಪುತ್ತೂರು ನಗರ, ಉಡುಪಿ ನಗರ, ಉಡುಪಿ ಸಂಚಾರ ಮಹಿಳಾ ಠಾಣೆ, ಡಿ ಸಿ ಅರ್ ಬಿ ಮುಂತಾದ ಕಡೆ ಸೇವೆ ಸಲ್ಲಿಸಿರುತ್ತಾರೆ. ಇವರ ಈ ಸಾಧನೆಗೆ ದ. ಕ ಮತ್ತು ಉಡುಪಿ ಜಿಲ್ಲೆಯ ಸಹೋದ್ಯೋಗಿಗಳು ಮತ್ತು ಸಾರ್ವಜನಿಕರು ಅಭಿನಂದಿಸಿರುತ್ತಾರೆ.

Related posts

ನ.29: ಹಿರಿಯ ಆರೋಗ್ಯ ಸುರಕ್ಷಣಾಧಿಕಾರಿ ಹೆಚ್.ಬಿ ಲೀಲಾವತಿ ಸೇವಾ ನಿವೃತ್ತಿ

Suddi Udaya

ಕಣಿಯೂರು: ಶ್ವೇತ ಸಮೂಹ ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ರಜತ ಮಹೋತ್ಸವ

Suddi Udaya

ಶಿಶಿಲ ಗಿರಿಜನ ಕಾಲೋನಿ ಅಂಗನವಾಡಿ ಕೇಂದ್ರದಲ್ಲಿ ನಂದಿನಿ ಹಾಗೂ ನಿರ್ಮಲ ಸ್ತ್ರೀ ಶಕ್ತಿ ಸದಸ್ಯರಿಂದ ಶ್ರಮದಾನ ಹಾಗೂ ಪೌಷ್ಟಿಕ ಕೈತೋಟ ನಿರ್ಮಾಣ

Suddi Udaya

ಉಜಿರೆ ಬ್ರಹ್ಮಕಲಶೋತ್ಸವ ಯಶಸ್ವಿಗೆ ಶ್ರಮಿಸಿದವರಿಗೆ ಧನ್ನೋಸ್ಮಿ ಕಾರ್ಯಕ್ರಮ: ಶ್ರಮಿಸಿದ ಎಲ್ಲಾ ಸ್ವಯಂ ಸೇವಕರಿಗೆ ಗೌರವಾಪ೯ಣೆ

Suddi Udaya

ಮಡಂತ್ಯಾರು ಸೆಕ್ರೇಡ್ ಹಾರ್ಟ್ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಲ್ಮಂಜ ಸರಕಾರಿ ಪ್ರೌಢ ಶಾಲೆಯ ನೂತನ ಸಭಾಂಗಣಕ್ಕೆ ಶಿಲಾನ್ಯಾಸ

Suddi Udaya
error: Content is protected !!