July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಚಿಕಿತ್ಸೆ ಅರಿವು ಕಾರ್ಯಕ್ರಮ

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ರೋವರ್ಸ್ & ರೇಂಜರ್ಸ್ ಘಟಕದ ವತಿಯಿಂದ ಪ್ರಥಮ ಚಿಕಿತ್ಸೆ ಅರಿವು ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ. ವಹಿಸಿದ್ದರು.

ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಸಚೇತ್ ಸುವರ್ಣ, RSL (Advanced), ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ದಕ್ಷಿಣ ಕನ್ನಡ ಜಿಲ್ಲೆ ಹಾಗೂ First Aid Master Trainer ಭಾಗವಹಿಸಿ, ಅಪಘಾತ ಅಥವಾ ತುರ್ತು ಸಂದರ್ಭಗಳಲ್ಲಿ ಪ್ರಥಮ ಚಿಕಿತ್ಸೆ ನೀಡುವ ವಿಧಾನಗಳು, ರಕ್ತಸ್ರಾವ ನಿಯಂತ್ರಣ, ಗಾಯಗಳಿಗೆ ಸೂಕ್ತ ಚಿಕಿತ್ಸೆ, ತುರ್ತು ಪರಿಸ್ಥಿತಿಯಲ್ಲಿ ಅನುಸರಿಸಬೇಕಾದ ಕ್ರಮಗಳು ಹಾಗೂ ಪ್ರಥಮ ಚಿಕಿತ್ಸೆಯ ಮಹತ್ವವನ್ನು ಪ್ರಾತ್ಯಕ್ಷಿಕೆಯೊಂದಿಗೆ ವಿವರಿಸಿದರು.

ವಿದ್ಯಾರ್ಥಿಗಳು ಆಸಕ್ತಿಯಿಂದ ಭಾಗವಹಿಸಿ ವಿವಿಧ ಪ್ರಶ್ನೆಗಳನ್ನು ಕೇಳಿ ಮಾಹಿತಿ ಪಡೆದರು.

ಕಾರ್ಯಕ್ರಮದಲ್ಲಿ ಆಡಳಿತಾಧಿಕಾರಿ ಪ್ರಸಾದ್ ಕುಮಾರ್, ಬೆಳಿಯಪ್ಪ ಕೆ. (RSL) ಹಾಗೂ ಶ್ರೀಮತಿ ರಕ್ಷಾ ಎ. (RL) ಉಪಸ್ಥಿತರಿದ್ದರು.
ಕಾರ್ಯಕ್ರಮದ ಆರಂಭದಲ್ಲಿ ಬೆಳಿಯಪ್ಪ ಕೆ. (RSL) ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯರಾದ ತನ್ವಿ ಮತ್ತು ಶ್ರೀಜ ಕಾರ್ಯಕ್ರಮವನ್ನು ನಿರೂಪಿಸಿದರು.

ಶ್ರೀಮತಿ ರಕ್ಷಾ ಎ. (RL) ವಂದಿಸಿದರು. ರೋವರ್ಸ್ & ರೇಂಜರ್ಸ್ ಘಟಕದ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ಯಕ್ಷಭಾರತಿ ಸಂಸ್ಥೆಗೆ ನೂತನ ಟ್ರಸ್ಟಿಗಳ ಆಯ್ಕೆ

Suddi Udaya

ನಿಡ್ಲೆ: 24 ನೇ ವರ್ಷದ ಕರುಂಬಿತ್ತಿಲು ಸಂಗೀತ ಶಿಬಿರ ಸಮಾರೋಪ

Suddi Udaya

ಗುರುವಾಯನಕೆರೆ: ಅನಾರೋಗ್ಯದಿಂದ ಬಳಲುತ್ತಿರುವ ಆಟೋ ಚಾಲಕ ರಾಜೇಶ್ ಪೂಜಾರಿಯವರಿಗೆ ಕುವೆಟ್ಟು ಬಿಜೆಪಿ ಶಕ್ತಿ ಕೇಂದ್ರ ಹಾಗೂ ಸಾಯಿರಾಮ್ ಫ್ರೆಂಡ್ಸ್ ಶಕ್ತಿನಗರ ವತಿಯಿಂದ ರೂ. 25 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಮುಖ್ಯ ಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿದ ಮಾಜಿ ಶಾಸಕ ವಸಂತ ಬಂಗೇರ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಮಹಿಳಾ ಮತ್ತು ಜೂನಿಯರ್ ಜೆಸಿ ಸಮ್ಮೇಳನದಲ್ಲಿ ಪ್ರಶಸ್ತಿ

Suddi Udaya

ಕನ್ಯಾಡಿ: ಶ್ರೀರಾಮ ತಾರಕ ಮಂತ್ರ‌ ಸಪ್ತಾಹದಲ್ಲಿ ಭಾಗವಹಿಸಿದ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ

Suddi Udaya
error: Content is protected !!