26.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಪಾಯಕಾರಿ ಮರದ ಕಾಲುಸಂಕ ಪ್ರದೇಶಕ್ಕೆ ಬೆಳ್ತಂಗಡಿ ನ್ಯಾಯಾಧೀಶರ ಭೇಟಿ

ಲಾಯಿಲ ಗ್ರಾಮದ ಬರೆಮೇಲು ನಡುಗುಡ್ಡೆ ಎಂಬಲ್ಲಿರುವ ಅಪಾಯಕಾರಿ ಕಾಲುಸಂಕವನ್ನು ಬೆಳ್ತಂಗಡಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶರು , ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ಮನು ಬಿ.ಕೆ , ಪ್ರಧಾನ ಸಿವಿಲ್ ನ್ಯಾಯಾಧೀಶರು , ತಾಲೂಕು ಕಾನೂನು ಸೇವೆಗಳ ಸಮಿತಿ ಸದಸ್ಯ ಕಾರ್ಯದರ್ಶಿ ರಾಮಲಿಂಗಪ್ಪ ರವರು ಅದಿತ್ಯವಾರ ಸಂಜೆ ಭೇಟಿ ನೀಡಿ ವೀಕ್ಷಿಸಿದರು.

ಕಳೆದ ಬುಧವಾರ ಲಾಯಿಲ ಪರಿಶಿಷ್ಟ ಜಾತಿ/ ಪಂಗಡಗಳ ವಿಶೇಷ ಗ್ರಾಮಸಭೆಯಲ್ಲಿ ವ್ಯಾಪಕ ಚರ್ಚೆ , ಮಾಧ್ಯಮಗಳ ವರದಿಯ ನಂತರ ಶುಕ್ರವಾರ ಅಧಿಕಾರಿಗಳ ದಂಡು ಈ ಪ್ರದೇಶಕ್ಕೆ ಭೇಟಿ ನೀಡಿದ್ದರು. ಇದೀಗ ಬೆಳ್ತಂಗಡಿ ನ್ಯಾಯಾದೀಶರುಗಳಾದ ಮನು ಬಿ.ಕೆ , ರಾಮಲಿಂಗಪ್ಪ ರವರು ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಅಲ್ಲಿನ ಪರಿಸ್ಥಿತಿಯನ್ನು ಖುದ್ದಾಗಿ ವೀಕ್ಷಿಸಿ , ಸಾರ್ವಜನಿಕರೊಂದಿಗೆ ಮಾತನಾಡಿದರು. ಈ ಕಾಲುಸಂಕವನ್ನು ಅವಲಂಬಿಸಿರುವ ಕುಟುಂಬಗಳ ಮಾಹಿತಿಯೊಂದಿಗೆ ಹಿರಿಯ ನಾಗರಿಕರು , ವಿದ್ಯಾರ್ಥಿಗಳು , ವಿಶೇಷ ಚೇತನರು , ವಿಧವೆಯರ ಬಗ್ಗೆ ಪ್ರತ್ಯೇಕ ಮಾಹಿತಿಯನ್ನು ಸಂಗ್ರಹಿಸಿ , ಸೋಮವಾರ ಮಧ್ಯಾಹ್ನದೊಳಗೆ ವರದಿ ನೀಡುವಂತೆ ಲಾಯಿಲ ಗ್ರಾಮ ಪಂಚಾಯತ್ ನ ಪಿಡಿಓ ಹಾಗೂ ಲಾಯಿಲ ಗ್ರಾಮಾಡಳಿತಾಧಿಕಾರಿ ಯವರಿಗೆ ಸೂಚಿಸಿದರು.

ನ್ಯಾಯಾದೀಶರುಗಳು ಅಭಿವೃದ್ಧಿ ವಂಚಿತ ಬರಮೇಲು ನಡುಗುಡ್ಡೆ ಭೇಟಿ ಮೂಲಕ ಈ ಭಾಗದ ಬಹುಕಾಲದ ಸೇತುವೆಯ ಬೇಡಿಕೆಯೊಂದು ಈಡೇರುವ ಆಶಾ ಭಾವನೆ ಸಾರ್ವಜನಿಕರಲ್ಲಿ ಮೂಡಿದೆ.

ಈ ಸಂದರ್ಭದಲ್ಲಿ ನ್ಯಾಯಾದೀಶರ ಜೊತೆಗೆ ಬೆಳ್ತಂಗಡಿ ಪೋಲಿಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಆನಂದ , ಬೆಳ್ತಂಗಡಿ ಉಪ ತಹಶೀಲ್ದಾರ್ ಮಲ್ಲಪ್ಪ ನಡುಗಡ್ಡಿ , ವೇಣೂರು ಹೋಬಳಿ ಕಂದಾಯ ನಿರೀಕ್ಷಕ ಕುಮಾರಸ್ವಾಮಿ , ತಾಲೂಕು ಕಾನೂನು ಸೇವೆಗಳ ಸಮಿತಿಯ ಸಿಬ್ಬಂದಿ ಯಲ್ಲಪ್ಪ ಹಂಗರಗಿ , ಲಾಯಿಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಭಿವೃದ್ಧಿ ಅಧಿಕಾರಿ ತಾರಾನಾಥ ನಾಯ್ಕ್ , ಲಾಯಿಲ ಗ್ರಾಮಾಡಳಿತಾಧಿಕಾರಿ ರನಿತಾ , ಮಾಜಿ ಗ್ರಾಮ ಪಂಚಾಯತ್ ಸದಸ್ಯ ಪ್ರಸಾದ್ ಶೆಟ್ಟಿ ಏಣಿಂಜೆ ,ದಲಿತ ಮುಖಂಡ ಶೇಖರ್ ಲಾಯಿಲ, ಗ್ರಾಮ ಸಹಾಯಕ ಸತೀಶ್ ಹೆಗ್ಡೆ ಉಪಸ್ಥಿತರಿದ್ದರು.

Related posts

ಶಿಶಿಲ: ದೇನೋಡಿ ನಿವಾಸಿ ನಾಣ್ಯಪ್ಪ ಪೂಜಾರಿ ನಿಧನ

Suddi Udaya

ಸೌತಡ್ಕ ಕ್ಷೇತ್ರದಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿದ ಕ್ಷೇತ್ರದ ಎಲ್ಲಾ ಅರ್ಚಕ ವೃಂದ ಹಾಗೂ ಸಿಬ್ಬಂದಿಗಳಿಗೆ ಗೌರವಾರ್ಪಣೆ

Suddi Udaya

ಪಡಂಗಡಿ ಹಾಲು ಉತ್ಪಾದಕರ ಸಂಘದ ನೂತನ ಅಧ್ಯಕ್ಷರಾಗಿ ಸುಂದರ ಪೂಜಾರಿ ಅವಿರೋಧ ಆಯ್ಕೆ

Suddi Udaya

ಮಾಜಿ ಸಚಿವ ಹಾಗೂ ಹಿರಿಯ ರಾಜಕೀಯ ಮುತ್ಸದ್ಧಿ ಡಿ. ಬಿ. ಚಂದ್ರೇಗೌಡ ನಿಧನಕ್ಕೆ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಮಳೆಗಾಲದ ಮೆಗಾ ಆಫರ್ ಸೇಲ್‌ಗೆ ಚಾಲನೆ – ಸುನಿಲ್ ಸಿಲ್ಕ್ ಸಾರೀಸ್‌ನಲ್ಲಿ ಆಕರ್ಷಕ ರಿಯಾಯಿತಿಗಳ ಮಹಾಪರ್ವ

Suddi Udaya

ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ, ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ

Suddi Udaya
error: Content is protected !!