July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಪಾಯಕಾರಿ ಮರದ ಕಾಲುಸಂಕ ಪ್ರದೇಶಕ್ಕೆ ಬೆಳ್ತಂಗಡಿ ನ್ಯಾಯಾಧೀಶರ ಭೇಟಿ

ಲಾಯಿಲ ಗ್ರಾಮದ ಬರೆಮೇಲು ನಡುಗುಡ್ಡೆ ಎಂಬಲ್ಲಿರುವ ಅಪಾಯಕಾರಿ ಕಾಲುಸಂಕವನ್ನು ಬೆಳ್ತಂಗಡಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶರು , ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ಮನು ಬಿ.ಕೆ , ಪ್ರಧಾನ ಸಿವಿಲ್ ನ್ಯಾಯಾಧೀಶರು , ತಾಲೂಕು ಕಾನೂನು ಸೇವೆಗಳ ಸಮಿತಿ ಸದಸ್ಯ ಕಾರ್ಯದರ್ಶಿ ರಾಮಲಿಂಗಪ್ಪ ರವರು ಅದಿತ್ಯವಾರ ಸಂಜೆ ಭೇಟಿ ನೀಡಿ ವೀಕ್ಷಿಸಿದರು.

ಕಳೆದ ಬುಧವಾರ ಲಾಯಿಲ ಪರಿಶಿಷ್ಟ ಜಾತಿ/ ಪಂಗಡಗಳ ವಿಶೇಷ ಗ್ರಾಮಸಭೆಯಲ್ಲಿ ವ್ಯಾಪಕ ಚರ್ಚೆ , ಮಾಧ್ಯಮಗಳ ವರದಿಯ ನಂತರ ಶುಕ್ರವಾರ ಅಧಿಕಾರಿಗಳ ದಂಡು ಈ ಪ್ರದೇಶಕ್ಕೆ ಭೇಟಿ ನೀಡಿದ್ದರು. ಇದೀಗ ಬೆಳ್ತಂಗಡಿ ನ್ಯಾಯಾದೀಶರುಗಳಾದ ಮನು ಬಿ.ಕೆ , ರಾಮಲಿಂಗಪ್ಪ ರವರು ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಅಲ್ಲಿನ ಪರಿಸ್ಥಿತಿಯನ್ನು ಖುದ್ದಾಗಿ ವೀಕ್ಷಿಸಿ , ಸಾರ್ವಜನಿಕರೊಂದಿಗೆ ಮಾತನಾಡಿದರು. ಈ ಕಾಲುಸಂಕವನ್ನು ಅವಲಂಬಿಸಿರುವ ಕುಟುಂಬಗಳ ಮಾಹಿತಿಯೊಂದಿಗೆ ಹಿರಿಯ ನಾಗರಿಕರು , ವಿದ್ಯಾರ್ಥಿಗಳು , ವಿಶೇಷ ಚೇತನರು , ವಿಧವೆಯರ ಬಗ್ಗೆ ಪ್ರತ್ಯೇಕ ಮಾಹಿತಿಯನ್ನು ಸಂಗ್ರಹಿಸಿ , ಸೋಮವಾರ ಮಧ್ಯಾಹ್ನದೊಳಗೆ ವರದಿ ನೀಡುವಂತೆ ಲಾಯಿಲ ಗ್ರಾಮ ಪಂಚಾಯತ್ ನ ಪಿಡಿಓ ಹಾಗೂ ಲಾಯಿಲ ಗ್ರಾಮಾಡಳಿತಾಧಿಕಾರಿ ಯವರಿಗೆ ಸೂಚಿಸಿದರು.

ನ್ಯಾಯಾದೀಶರುಗಳು ಅಭಿವೃದ್ಧಿ ವಂಚಿತ ಬರಮೇಲು ನಡುಗುಡ್ಡೆ ಭೇಟಿ ಮೂಲಕ ಈ ಭಾಗದ ಬಹುಕಾಲದ ಸೇತುವೆಯ ಬೇಡಿಕೆಯೊಂದು ಈಡೇರುವ ಆಶಾ ಭಾವನೆ ಸಾರ್ವಜನಿಕರಲ್ಲಿ ಮೂಡಿದೆ.

ಈ ಸಂದರ್ಭದಲ್ಲಿ ನ್ಯಾಯಾದೀಶರ ಜೊತೆಗೆ ಬೆಳ್ತಂಗಡಿ ಪೋಲಿಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಆನಂದ , ಬೆಳ್ತಂಗಡಿ ಉಪ ತಹಶೀಲ್ದಾರ್ ಮಲ್ಲಪ್ಪ ನಡುಗಡ್ಡಿ , ವೇಣೂರು ಹೋಬಳಿ ಕಂದಾಯ ನಿರೀಕ್ಷಕ ಕುಮಾರಸ್ವಾಮಿ , ತಾಲೂಕು ಕಾನೂನು ಸೇವೆಗಳ ಸಮಿತಿಯ ಸಿಬ್ಬಂದಿ ಯಲ್ಲಪ್ಪ ಹಂಗರಗಿ , ಲಾಯಿಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಭಿವೃದ್ಧಿ ಅಧಿಕಾರಿ ತಾರಾನಾಥ ನಾಯ್ಕ್ , ಲಾಯಿಲ ಗ್ರಾಮಾಡಳಿತಾಧಿಕಾರಿ ರನಿತಾ , ಮಾಜಿ ಗ್ರಾಮ ಪಂಚಾಯತ್ ಸದಸ್ಯ ಪ್ರಸಾದ್ ಶೆಟ್ಟಿ ಏಣಿಂಜೆ ,ದಲಿತ ಮುಖಂಡ ಶೇಖರ್ ಲಾಯಿಲ, ಗ್ರಾಮ ಸಹಾಯಕ ಸತೀಶ್ ಹೆಗ್ಡೆ ಉಪಸ್ಥಿತರಿದ್ದರು.

Related posts

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೈ‌ ಕೊಟ್ಟ ವಿದ್ಯುತ್: ವೈದ್ಯರಿಂದ ಕತ್ತಲಲ್ಲಿ ರೋಗಿಗಳ ಆರೋಗ್ಯ ತಪಾಸಣೆ: ಇನ್ವರ್ಟರ್ ವ್ಯವಸ್ಥೆಗಳು ಇಲ್ಲದೆ ಟಾರ್ಚ್ ಬೆಳಕಿನಿಂದ ಚಿಕಿತ್ಸೆ ನೀಡಬೇಕಾದ ಸ್ಥಿತಿ

Suddi Udaya

ನಾರಾವಿ ವಲಯದ ಭಜನಾ ಪರಿಷತ್ತಿನ ಪದಾಧಿಕಾರಿಗಳ ಆಯ್ಕೆ

Suddi Udaya

ತಣ್ಣೀರುಪಂತ ಸಹಕಾರ ಸಂಘಗಳ ವ್ಯಾಪ್ತಿಯಲ್ಲಿ ರಾಸುಗಳ ಭ್ರೂಣ ವರ್ಗಾವಣೆ ಕಾರ್ಯಕ್ರಮ

Suddi Udaya

ಶತಾಯುಷಿ ಚೆಲುವಮ್ಮ ಇರ್ತಿಲಾಲ್ ನಿಧನ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಉದ್ಯಮಿ ಸತೀಶ್ ಪೂಜಾರಿ ಬೆಳಪು ಮತ್ತು ಪ್ರಭಾಕರ ಸುವರ್ಣ ಕರ್ನಿರೆ ಭೇಟಿ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜು ಬಿಸಿಎ ವಿಭಾಗದಿಂದ ಎನಿಗ್ಮಾ-2024

Suddi Udaya
error: Content is protected !!