28.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಜನಜಾಗೃತಿ ನವ ಜೀವನ ವಲಯ ಸಮಿತಿಯ ಸಭೆ

ಅಳದಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಜಾಗೃತಿ ನವ ಜೀವನ ವಲಯ ಸಮಿತಿಯ ಸಭೆಯನ್ನು ವಲಯ ಅಧ್ಯಕ್ಷ ನಾರಾಯಣ ಸಾಲ್ಯಾನ್ ಅಧ್ಯಕ್ಷತೆಯಲ್ಲಿ ನಡೆಯಿತು.

ತಾಲೂಕು ಸದಸ್ಯರಾದ ಸದಾನಂದ ಪೂಜಾರಿ ಎಲ್ಲ ಗ್ರಾಮದ ಜನಜಾಗೃತಿ ಗ್ರಾಮ ಸಮಿತಿ ನವ ಜೀವನ ಸಮಿತಿಯ ಸಂಘಟನಾತ್ಮಕ ಪಾತ್ರ ಏನೆಂಬುದರ ಬಗ್ಗೆ ತಿಳಿಸಿದರು. ವಲಯ ಮೇಲ್ವಿಚಾರಕರಾದ ಶ್ರೀಮತಿ ಯಶೋಧ ಎಂ ಮಾತನಾಡಿ ಯೋಜನೆ ಬೆಳೆದು ಬಂದ ದಾರಿ. ಇನ್ನು ಮುಂದೆ ನಡೆಯುವ ಮಧ್ಯವರ್ಜನ ಶಿಬಿರದಲ್ಲಿ ಜನಜಾಗೃತಿ ಸಮಿತಿ ನವ ಜೀವನ ಸಮಿತಿಯವರ ಜವಾಬ್ದಾರಿಗಳೇನು ಎಂಬುದನ್ನು ತಿಳಿಸಿದರು.

ವೇದಿಕೆಯಲ್ಲಿ ತಾಲೂಕು ಸದಸ್ಯರಾದ ಜಗನ್ನಾಥ ಪೂಜಾರಿ, ಸೇವಾ ಪ್ರತಿನಿಧಿಗಳಾದ ಶ್ರೀಮತಿ ಶುಭ ಹರೀಶ್, ಶ್ರೀಮತಿ ಪೂರ್ಣಿಮಾ ಪ್ರಮೋದ್, ಎಲ್ಲಾ ಜನಜಾಗೃತಿ ನವ ಜೀವನ ಸಮಿತಿ ಅಧ್ಯಕ್ಷರು, ಸದಸ್ಯರು ಭಾಗವಹಿಸಿದ್ದರು. ಮಂಜುನಾಥ ಆಚಾರ್ಯ ಸ್ವಾಗತಿಸಿ, ಶ್ರೀಮತಿ ಯಶೋಧ ಎಂ. ಧನ್ಯವಾದವಿತ್ತರು. ಎಲ್ಲಾ ಗ್ರಾಮಗಳಲ್ಲಿ ಗ್ರಾಮಸಮಿತಿ ಪದಾಧಿಕಾರಿಗಳು ನವಜೀವನ ಸಮಿತಿ ಸದಸ್ಯರು ಹಾಜರಿದ್ದರು

Related posts

ಮನಕಲಕುವ ಹೃದಯ ವಿದ್ರಾವಕ ಘಟನೆ: ನಲ್ಲೂರು ಬಳಿ ಬೈಕ್- ಮಿನಿ ಲಾರಿ ನಡುವೆ ಅಪಘಾತ: ಬೈಕ್ ನಲ್ಲಿದ್ದ ಪುಟ್ಟ ಮಕ್ಕಳು ಸೇರಿ ನಾಲ್ವರು ದುರ್ಮರಣ

Suddi Udaya

ಸೂಳಬೆಟ್ಟು ಸ.ಕಿ.ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಪುಸ್ತಕಗಳ ಹಾಗೂ ಶೈಕ್ಷಣಿಕ ಪರಿಕರಗಳ ವಿತರಣೆ

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ನಾವೂರು: ತೋಟದ ಮನೆಗೆ ಸೋಲಾರ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿ ಅಪಾರ ನಷ್ಟ

Suddi Udaya

ಲಾಯಿಲ ಶ್ರೀ ಮಹಮ್ಮಾಯಿ ಅಮ್ಮನವರ ದೇವಸ್ಥಾನದ ವಾರ್ಷಿಕ ಮಾರಿ ಪೂಜೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶರತ್ ಮಡಿವಾಳ ಸ್ಮಾರಕಕ್ಕೆ ಪುಷ್ಪ ನಮನ

Suddi Udaya
error: Content is protected !!