28.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಸಿದ್ದವನ ಗುರುಕುಲದಲ್ಲಿ ಗುರುವಂದನಾ ವ್ಯಾಸಪೂರ್ಣಿಮೆ ಮತ್ತು ‘ವಂದೇ -ಗುರುಪರಂಪರಾಮ್’ ಕಾರ್ಯಕ್ರಮ

ಬೆಳ್ತಂಗಡಿ : ಪಶ್ಚಿಮ ಬಂಗಾಳದ ಪದಚಿಹ್ನದಿಂದ ಹೊರಟು ಇಡೀ ಅಖಂಡ ಭಾರತ ವ್ಯಾಪಿಸಿದ ವಂದೇ ಮಾತರಂ ನೂರೈವತ್ತು ವರ್ಷ ದಾಟಿದ ತರುವಾಯವೂ ಅಖಂಡ ಭಾರತದ ಸಾರ್ವಕಾಲಿಕ ರಣಮಂತ್ರ ಎಂದು ಬರಹಗಾರ ಶಿವಪ್ರಸಾದ್ ಸುರ್ಯ ಹೇಳಿದರು. ಶಸ್ತ್ರ ಮತ್ತು ಶಾಸ್ತ್ರಗಳ ಪ್ರತೀಕವಾಗಿ, ಅಧ್ಯಾತ್ಮದ ಅನುಭೂತಿಯಾಗಿ, ಗಿರಿ ಕಾನನಗಳ ವಸ್ತುಗಳನ್ನು ಒಳಗೊಂಡ ಭಾರತೀಯರ ಆರಾಧನಾ ಪದ್ದತಿಗಳ ಕಲಶಪ್ರಾಯವಾಗಿ ವಂದೇಮಾತರಂ ಹಾಡು ಮೈದಳೆದಿದ್ದು, ಆನಂದ ಮಠದಲ್ಲಿ ಬರುವ ಸಂತಾನ ಸನ್ಯಾಸಿಗಳ ಕಥಾವಸ್ತು ಭಾರತಕ್ಕಿರುವ ನಾನಾ ಸಾಧ್ಯತೆಗಳ ಪ್ರತೀಕ ಎಂದವರು ಬಣ್ಣಿಸಿದರು.

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಬೆಳ್ತಂಗಡಿ ತಾಲೂಕು ಸಮಿತಿ ವತಿಯಿಂದ ಸಿದ್ದವನ ಗುರುಕುಲ ಉಜಿರೆಯಲ್ಲಿ ಆಯೋಜಿಸಿದ್ದ ಗುರುವಂದನಾ ವ್ಯಾಸಪೂರ್ಣಿಮೆ ಮತ್ತು ವಂದೇ ಮಾತರಂ ನೂರೈವತ್ತು ವರ್ಷಗಳ ಸಂಭ್ರಮಾಚರಣೆ ‘ವಂದೇ -ಗುರುಪರಂಪರಾಮ್’ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಅವರು ಮಾತನಾಡಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮಿತಿ ಅಧ್ಯಕ್ಷ ಪ್ರೊ.ಗಣಪತಿ ಭಟ್ ಕುಳಮರ್ವ ವಹಿಸಿ ಪ್ರಾಸ್ತಾವನೆಗೈದರು. ಅಭಾಸಾಪ ವಿಭಾಗ ಸಂಯೋಜಕ್ ಸುಂದರ ಶೆಟ್ಟಿ ಇಳಂತಿಲ, ತಾಲೂಕು ಸಮಿತಿ ಕಾರ್ಯದರ್ಶಿ ಶ್ರೀಮತಿ ಸುಭಾಷಿಣಿ , ಉಪಾಧ್ಯಕ್ಷ ರಾಮಕೃಷ್ಣ ಭಟ್, ಸಮಿತಿ ಸದಸ್ಯೆ ಶ್ರೀಮತಿ ಅಕ್ಷತಾ ಅಡೂರು, ಅಭಾಸಾಪ ಜಿಲ್ಲಾ ಸಮಿತಿ ಸದಸ್ಯರಾದ ಶ್ರೀ ಪ್ರಕಾಶ್ ನಾರಾಯಣ್, ಸಿದ್ದವನ ಗುರುಕುಲ ಮುಖ್ಯ ಪಾಲಕರಾದ ಕೇಶವ್, ಮಹಿಳಾ ಪ್ರಕಾರ ಪ್ರಮುಖ್ ಶ್ರೀಮತಿ ವನಿತಾ ವಿ ಶೆಟ್ಟಿ, ಮಹಿಳಾ ಘಟಕ ಕಾರ್ಯದರ್ಶಿ ಶ್ರೀಮತಿ ಮೇಘನಾ ಪ್ರಶಾಂತ್, ಶ್ರೀಮತಿ ವಿದ್ಯಾ ಅಡೂರು,ಡಾllತಾರಕೇಶ್ವರಿ, ಶ್ರೀಮತಿ ವಿಜಯಲಕ್ಷ್ಮಿ, ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸಮಿತಿ ಜತೆ ಕಾರ್ಯದರ್ಶಿ ಶ್ರೀಮತಿ ಸಂತೋಷಿಣಿ ಅವರ ಶಾರದಾ ಸ್ತುತಿಯೊಂದಿಗೆ ಕಾರ್ಯಕ್ರಮ ಆರಂಭಗೊಂಡು , ಮಹಿಳಾ ಘಟಕ ಅಧ್ಯಕ್ಷೆ ಶ್ರೀಮತಿ ಆಶಾ ಅಡೂರ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಸಮಿತಿ ಸ್ಥಾಪಕ ಅಧ್ಯಕ್ಷರಾದ ಡಾ.ಶ್ರೀಧರ್ ಭಟ್ ವಂದಿಸಿದರು. ಮಕ್ಕಳ ಪ್ರಕಾರ ಪ್ರಮುಖ್ ಶ್ರೀಮತಿ ಮೇಧಾ ಅವರ ವಂದೇ ಮಾತರಂ ನಿಂದ ಕಾರ್ಯಕ್ರಮ ಸಮಾಪನಗೊಂಡಿತು.

Related posts

ಮೊಬೈಲ್ ಸಂಭಾಷಣೆಯನ್ನು ಅನಧಿಕೃತವಾಗಿ ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ ಬಗ್ಗೆ ದೂರು

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ 3ನೇ ವರ್ಷದ ಶಾರದೋತ್ಸವ, ಪೂರ್ವಾಭಾವಿ ಸಭೆ

Suddi Udaya

ಬೆಳ್ತಂಗಡಿ : ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ

Suddi Udaya

ರಾಜ್ಯ ಮಟ್ಟದ ಪ್ರೌಢ ಶಾಲಾ ಬಾಲಕರ ವಿಭಾಗದ ಕಬ್ಬಡಿ ಪಂದ್ಯಾಟ: ಸುಲ್ಕೇರಿ ಶ್ರೀರಾಮ ಪ್ರೌಢ ಶಾಲಾ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಯಾವುದೇ ನೋಟೀಸು ನೀಡದೆ, ಕಾರಣವಿಲ್ಲದೆ ಏಕಾಏಕಿ ಗೃಹರಕ್ಷಕದಳದ ಘಟಕಾಧಿಕಾರಿಯನ್ನು ಬದಲಾವಣೆ ಮಾಡಿರುವುದು ಯಾವ ನ್ಯಾಯ: ನಾನು ಯಾವುದೇ ತಪ್ಪನ್ನು ಮಾಡಿಲ್ಲ, ಜಿಲ್ಲೆಯ ಆದೇಶವನ್ನು ದುರುಪಯೋಗ ಮಾಡಿಲ್ಲ 36 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ನನಗೆ ನ್ಯಾಯ ಕೊಡಿ : ಜಯಾನಂದ ಲಾಯಿಲ

Suddi Udaya

ಧರ್ಮಸ್ಥಳ “ರಂಗಶಿವ”ಬಳಗದಿಂದ ಮಕ್ಕಳ ರಂಗ ಶಿಬಿರ “ನಲಿಯೋಣ ಬಾ- 2023”

Suddi Udaya
error: Content is protected !!