28.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಕಾರ್ಗಿಲ್ ವಿಜಯ ದಿವಸ ಪ್ರಯುಕ್ತ ವನಮಹೋತ್ಸವ

ಮುಂಡಾಜೆ: ಸುಮಾರು ನಾಲ್ಕು ಎಕರೆ ಪ್ರದೇಶದಲ್ಲಿ ವ್ಯಾಪಿಸಿಕೊಂಡು ಕಾರ್ಗಿಲ್ ಸಮರದ ಹುತಾತ್ಮ ಯೋಧರ ಹೆಸರಿನಲ್ಲಿ ಬೆಳೆಯುತ್ತಿರುವ ಎಂಟುನೂರಕ್ಕೂ ಹೆಚ್ಚು ಗಿಡಗಳ ಮುಂಡಾಜೆಯ ಕಾರ್ಗಿಲ್ ವನದಲ್ಲಿ ಇಪ್ಪತ್ತೇಳನೇ ವರ್ಷದ ಕಾರ್ಗಿಲ್ ವಿಜಯ ದಿವಸ ಪ್ರಯುಕ್ತ ವನಮಹೋತ್ಸವ ಕಾರ್ಯಕ್ರಮ ನಡೆಯಿತು.

ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳದ ಕಮಾಂಡರ್ ಶಾಂತಿಲಾಲ್ ಜಟಿಯಾ ಹಾಗೂ ತಂಡ ಆಗಮಿಸಿ ಕಾರ್ಗಿಲ್ ವನದಲ್ಲಿ ಗಿಡ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಕಾರ್ಗಿಲ್ ವೀರ ನಿವೃತ್ತ ಕರ್ನಲ್ ನಿತಿನ್ ಭಿಡೆಯವರು ಭಾರತೀಯರಾದ ನಾವೆಲ್ಲರೂ ನಮ್ಮ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸಿದಾಗ ಗಡಿಯಲ್ಲಿ ಕಾರ್ಯಾಚರಿಸುವ ಯೋಧರ ಕರ್ತವ್ಯ ಹಾಗೂ ಬಲಿದಾನಕ್ಕೆ ನಿಜವಾದ ಗೌರವ ದೊರಕುತ್ತದೆ ಎಂದರು.

ಹುತಾತ್ಮ ಯೋಧರ ಗೌರವಾರ್ಥ ಮೂರು ನಿಮಿಷಗಳ ಮೌನಾಚರಣೆ ನಡೆಸಿ ಗೌರವ ಸಲ್ಲಿಸಲಾಯಿತು.
ನಿವೃತ್ತ ಮೇಜರ್ ಜನರಲ್ ಎಂ.ವಿ. ಭಟ್ ಹಾಗೂ ಭಾರತೀಯ ನೌಕದಳದ ನಿವೃತ್ತಸೇನಾನಿ ಕೃಷ್ಣ ಭಟ್ ಕದಂಬ ವೃಕ್ಷಗಳನ್ನು ನೆಟ್ಟು ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದರು.

ಈ ಸಂದರ್ಭದಲ್ಲಿ ಊರ ಹಿರಿಯರಾದ ರಾಮಚಂದ್ರ ಭಟ್ ಅರೆಕಲ್ , ಶಶಿಧರ ಖಾಡಿಲ್ಕಾರ್ , ಸುನಿಲ್ ಭಿಡೆ, ಯೋಗೀಶ್ ಭಿಡೆ, ಹಿರಿಯ ವರ್ತಕರಾದ ಪ್ರಹ್ಲಾದ ಫಡ್ಕೆ ದಂಪತಿಗಳು ,ಮುಂಡಾಜೆ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ವಾಸುದೇವ ಗೋಖಲೆ ,ಮುಂಡಾಜೆ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕಿ ಶ್ರೀಮತಿ ಸುಮನಾ ಗೋಖಲೆ,ಪತ್ರಿಕಾ ವಿತರಕರಾದ ಬಾಲಚಂದ್ರ ನಾಯಕ್, ಪ್ರಗತಿಪರ ಕೃಷಿಕರಾದ ಶಿವಣ್ಣ , ಅವಿನಾಶ್ ಭಿಡೆ ದಂಪತಿಗಳು ಅರಸಿನಮಕ್ಕಿ , ರಮೇಶ ಹಾಗೂ ನಿತಿನ್ ಬೈರಕಟ್ಟ ಉಪಸ್ಥಿತರಿದ್ದರು.
ಕಾರ್ಗಿಲ್ ವನದ ರೂವಾರಿಗಳಾದ ಶ್ರೀಮತಿ ಲತಾ ಜಿ .ಭಿಡೆ ಹಾಗೂ ಪುತ್ರ ಸಚಿನ್ ಭಿಡೆ ಸ್ವಾಗತಿಸಿ ,ಧನ್ಯವಾದವಿತ್ತರು.

Related posts

ನೆರಿಯದಲ್ಲಿ ಬಿದಿರು ಕೃಷಿ ಮಾಹಿತಿ ಸಭೆ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ: ಸವಾರರಿಗೆ ತೊಂದರೆಯಾದರೆ ಇಂಜಿನಿಯರ್ ರನ್ನು ನೇರ ಹೊಣೆ ಮಾಡಿ ನಿರ್ದಾಕ್ಷಿಣ್ಯ ಕ್ರಮ : ದಿನೇಶ್ ಗುಂಡೂರಾವ್

Suddi Udaya

ಸುದ್ದಿ ಉದಯ ವಾರ ಪತ್ರಿಕೆ ದೀಪಾವಳಿ ವಿಶೇಷಾಂಕ ಹಾಗೂ ‘ಹೇ ಶಾರದೆ’ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ವಿಶ್ವ ಯುವ ಕೌಶಲ್ಯ ದಿನದ ಅಂಗವಾಗಿ ವಿಶೇಷ ಕೌಶಲ್ಯ ತರಬೇತಿ “ಐಸ್ ಬ್ರೇಕಿಂಗ್ ಸೆಷನ್” ಕಾರ್ಯಾಗಾರ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಪ್ರಶಿಕ್ಷಣ ಕಾರ್ಯಕ್ರಮ

Suddi Udaya

ಸುದ್ದಿ ಉದಯ ದೀಪಾವಳಿ ವಿಶೇಷಾಂಕ- 2024: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ‌.ಡಿ ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya
error: Content is protected !!