September 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸವಣಾಲು: ಹಿತ್ತಿಲಪೇಲ ಪ್ರದೇಶಕ್ಕೆ ಶಾಶ್ವತ ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸೂಕ್ತ ವರದಿ ನೀಡುವಂತೆ ಮೇಲಂತಬೆಟ್ಟು ಗ್ರಾ.ಪಂ.ಗೆ ಮೌಖಿಕ ಆದೇಶ ನೀಡಿದ ಬೆಳ್ತಂಗಡಿ ನ್ಯಾಯಾಧೀಶರು

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಸವಣಾಲು ಗ್ರಾಮದ ಹಿತ್ತಿಲಪೇಲ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ಅಪಾಯಕಾರಿ ನದಿಗೆ ಶಾಶ್ವತ ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸೂಕ್ತ ವರದಿ ನೀಡುವಂತೆ ಬೆಳ್ತಂಗಡಿ ತಾಲೂಕು ಕಾನೂನು ಸೇವೆಗಳ ಸಮಿತಿಯ ನ್ಯಾಯಾಧೀಶರು ಮೇಲಂತಬೆಟ್ಟು ಗ್ರಾಮ ಪಂಚಾಯತ್ ಗೆ ಮೌಖಿಕ ಆದೇಶ ನೀಡಿದ್ದಾರೆ.

ಲಾಯಿಲ ಗ್ರಾಮದ ಬರಮೇಲು ನಡುಗುಡ್ಡೆ ಮರದ ಕಾಲುಸಂಕ ಪ್ರದೇಶಕ್ಕೆ ಭೇಟಿ ನೀಡಿದ ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ , ಬೆಳ್ತಂಗಡಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಮನು ಬಿ.ಕೆ ಮತ್ತು ತಾಲೂಕು ಕಾನೂನು ಸೇವೆಗಳ ಸಮಿತಿಯ ಸದಸ್ಯ ಕಾರ್ಯದರ್ಶಿ , ಪ್ರಧಾನ ಸಿವಿಲ್ ನ್ಯಾಯಧೀಶ ರಾಮಲಿಂಗಪ್ಪರವರು ಬೆಳ್ತಂಗಡಿ ತಾಲೂಕಿನಲ್ಲಿ ಅಪಾಯಕಾರಿ ನದಿ , ತೊರೆ ದಾಟಲು ಸೇತುವೆ ಇಲ್ಲದಿರುವ ಬಗ್ಗೆ ಮಾಹಿತಿಯನ್ನು ಸಾರ್ವಜನಿಕರಲ್ಲಿ , ಅಧಿಕಾರಿಗಳಲ್ಲಿ ಕೇಳಿದರು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸಂಚಾಲಕ ಶೇಖರ್ ಲಾಯಿಲ ಮಾಹಿತಿ ನೀಡಿ ಸವಣಾಲು ಗ್ರಾಮದ ಹಿತ್ತಿಲಪೇಲ ಪ್ರದೇಶದಲ್ಲಿ ಅಪಾಯಕಾರಿ ನದಿಯನ್ನು ದಾಟಲು ಸೇತುವೆ ಇಲ್ಲದೆ ಕಳೆದ ವರ್ಷ ಯುವಕರಿಬ್ಬರು ದ್ವಿಚಕ್ರ ವಾಹನ ಸಮೇತ ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಪ್ರಾಣಾಪಾಯದಿಂದ ಪಾರಗಿರುವ ಬಗ್ಗೆ ಮತ್ತು ಇಂದಿಗೂ ಸೇತುವೆ ನಿರ್ಮಾಣ ಮಾಡದ ವ್ಯವಸ್ಥೆಯ ಬಗ್ಗೆ ಹಾಗೂ ರಸ್ತೆ , ವಿದ್ಯುತ್ ವಂಚಿತ ಅಲ್ಲಿನ ಮಲೆಕುಡಿಯ ಕುಟುಂಬಗಳ ಬಗ್ಗೆ ಮಾಹಿತಿ ನೀಡಿದರು. ಇಲ್ಲಿ ಈ ವರ್ಷ ಯಾವುದೇ ಪರ್ಯಾಯ ವ್ಯವಸ್ಥೆ ಕಲ್ಪಿಸದೆ ನದಿ ದಾಟುವುದನ್ನೆ ನಿರ್ಭಂಧಿಸಿ ಬ್ಯಾನರ್ ಅಳವಡಿಸಿ 9 ಆದಿವಾಸಿ ಮಲೆಕುಡಿಯ ಸಮುದಾಯದ ಕುಟುಂಬಗಳಿಗೆ ಸರ್ಕಾರಿ ದಿಗ್ಬಂಧನ ವಿಧಿಸಿರುವ ಬಗ್ಗೆ ನ್ಯಾಯಧೀಶರ ಗಮನ ಸೆಳೆದರು. ಆಗ ಸ್ಥಳದಲ್ಲಿದ್ದ ಉಪ ತಹಶೀಲ್ದಾರ್ ಮಲ್ಲಪ್ಪ ನಡುಗುಡ್ಡೆ ಯವರಿಗೆ ಈ ಬಗ್ಗೆ ವಿಸ್ತೃತ ವರದಿಯನ್ನು ಸೋಮವಾರ ಮಧ್ಯಾಹ್ನದೊಳಗೆ ನೀಡುವಂತೆ ಮೇಲಂತಬೆಟ್ಟು ಗ್ರಾಮ ಪಂಚಾಯತ್ ಮತ್ತು ಗ್ರಾಮಾಡಳಿತಾಧಿಕಾರಿಗೆ ಸೂಚಿಸುವಂತೆ ತಿಳಿಸಿದರು. ‌

Related posts

ಉದಯ ಮಹಾಸಂಘ ಗಂಡಿಬಾಗಿಲು- ಪರಿಸರ ದಿನಾಚರಣೆ

Suddi Udaya

ಜು.8ರಿಂದ ಗಡಾಯಿಕಲ್ಲು ಚಾರಣಕ್ಕೆ ನಿರ್ಬಂಧ

Suddi Udaya

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ವಾಣಿ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿ ಕು. ಮಾನ್ಯ 620 ಅಂಕದೊಂದಿಗೆ ರಾಜ್ಯಮಟ್ಟದಲ್ಲಿ 6ನೇ ರ‍್ಯಾಂಕ್

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ “ಕೊಳಂಬೆ” ಕಿರುಚಿತ್ರ ನಿರ್ಮಾಣ: ವಿಕೆ ಸ್ಟುಡಿಯೋಸ್ ಕನ್ನಡ ಕಿರುಚಿತ್ರೋತ್ಸವ 2025, ‘ಕೊಳಂಬೆ’ ಬೆಸ್ಟ್ ಕಿರುಚಿತ್ರ ಡಬಲ್ ಪ್ರಶಸ್ತಿ,ಅನೀಶ್ ಅಮೀನ್ ಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ

Suddi Udaya

ಸೌಜನ್ಯ ಪ್ರಕರಣ: ಮರುತನಿಖೆಗೆ ಕೋರಿದ್ದ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್‌

Suddi Udaya

ಬೆಳ್ತಂಗಡಿ: ಪೃಥ್ವಿ ಜುವೆಲ್ಸ್ ನಲ್ಲಿ ಬಂಪರ್ ಲಕ್ಕಿ ಡ್ರಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya
error: Content is protected !!