ಬೆಳ್ತಂಗಡಿ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮಂಗಳೂರು ಇದರ 15ನೇ ವರ್ಷದ ಮಹಾಸಭೆಯಲ್ಲಿ ವಿವಿಧ ಕ್ಷೇತ್ರದ ಸಾಧನೆಯನ್ನು ಗುರುತಿಸಿ ಸದಾನಂದ ಆಚಾರ್ಯ ಸುಲ್ಕೇರಿಮೊಗ್ರು ಇವರನ್ನು ಸನ್ಮಾನಿಸಲಾಯಿತು.
ಇವರು ಶ್ರೀ ಗಾಯತ್ರಿ ವಿಶ್ವಕರ್ಮ ಸಂಘ ಬೆಳ್ತಂಗಡಿ, ಸಾರ್ವಜನಿಕ ಗಣೇಶೋತ್ಸವ ಸಮಿತಿ, ಶ್ರೀ ಸೋಮನಾಥೇಶ್ವರಿ ಭಜನಾ ಮಂಡಳಿ ಅಳದಂಗಡಿ, ಶ್ರೀ ವಿಶ್ವಕರ್ಮ ಅಭ್ಯುದಯ ಸಂಘ ಲಾಯಿಲ, ಶ್ರೀ ಗುರು ಸೇವಾ ಪರಿಷತ್ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಕಾರ್ಯ ಚಟುವಟಿಕೆ ತೊಡಗಿಸಿಕೊಂಡಿದ್ದಾರೆ.
















