25.7 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳಿಯ ಸಹಕಾರಿ ಸಂಘದಿಂದ ಬೆಳೆ ವಿಮೆ, ಬೆಳೆ ಸಮೀಕ್ಷೆ, ಕೃಷಿ ಮಾಹಿತಿ

ಗೇರುಕಟ್ಟೆ: ಕಳಿಯ ಪ್ರಾ.ಕೃ.ಪ.ಸ. ಸಂಘದಿಂದ ಬೆಳೆ ವಿಮೆ, ಬೆಳೆ ಸಮೀಕ್ಷೆ ಹಾಗೂ ಕೃಷಿ ಮಾಹಿತಿ ಕಾರ್ಯಕ್ರಮ ಜು.28 ರಂದು ಸಂಘದ ಸಹಕಾರಿ ಸಭಾ-ಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೆರವೇರಿಸಿದರು. ಸಭೆಯ ಅಧ್ಯಕ್ಷತೆಯನ್ನು ಕಳಿಯ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ವಸಂತ ಮಜಲು ವಹಿಸಿದರು.

ಸಂಘದ ಉಪಾಧ್ಯಕ್ಷ  ರಾಜ್ ಪ್ರಕಾಶ್ ಶೆಟ್ಟಿ ,  ಆಡಳಿತ ಮಂಡಳಿ ನಿರ್ದೇಶಕರಾದ ಯಂ ಹರಿದಾಸ ಪಡಂತ್ತಾಯ, ಬಾಲಕೃಷ್ಣ ಗೌಡ ಬಿರ್ಮೊಟ್ಟು,  ಚಂದ್ರವತಿ, ಮಮತಾ, ಗೋಪಾಲ ನಾಯ್ಕ್, ಕುಶಾಲಪ್ಪ ಗೌಡ, ಉದಿತ್ ಕುಮಾರ್, ಲೋಕೇಶ್ ಎನ್ ಹಾಗೂ ಕೇಶವ ಪೂಜಾರಿ, ಜಿಲ್ಲಾ ಬ್ಯಾಂಕ್ ಪ್ರತಿನಿಧಿ ಸುದರ್ಶನ್ ವೇದಿಕೆಯಲ್ಲಿದ್ದರು.

ತಣ್ಣೀರುಪಂತ ಪ್ಯಾಕ್ಸ್ ಅಧ್ಯಕ್ಷ ಜಯನಂದ ಕಲ್ಲಾಪು, ಸುಲ್ಕೇರಿಮೊಗ್ರು ಪ್ಯಾಕ್ಸ್ ಅಧ್ಯಕ್ಷ ಸುಧೀರ್ ಆರ್ ಸುವರ್ಣ, ಅಳದಂಗಡಿ ಪ್ಯಾಕ್ಸ್ ಅಧ್ಯಕ್ಷ ರಾಕೇಶ್ ಹೆಗ್ಡೆ, ತೆಕ್ಕಾರು ಪ್ಯಾಕ್ಸ್ ನಿರ್ದೇಶಕ ಇನಾಸ್ ರೊಡ್ರಿಗಸ್, ಸಂಘದ ಸದಸ್ಯರು, ರೈತಾಪಿ ವರ್ಗದವರು ಭಾಗವಹಿಸಿದ್ದರು.

ಬೆಸ್ಟ್ ಎಂಎಲ್ ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರನ್ನು ಸನ್ಮಾನಿಸಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಬೆಳ್ತಂಗಡಿ ಕೃಷಿ ಅಧಿಕಾರಿ ಗಣೇಶ್ (ಬೆಳೆ ವಿಮೆ ಮತ್ತು ಬೆಳೆ ಸಮೀಕ್ಷೆ ಬಗ್ಗೆ), ಉಪ್ಪಿನಂಗಡಿ ಪ್ರಗತಿಪರ ಕೃಷಿಕ ಚಂದ್ರಶೇಖರ ತಾಳ್ತಾಜೆ (ಅಡಿಕೆ ಕೃಷಿ ಬಗ್ಗೆ),ಮೂಡುಬಿದ್ರೆ ಪ್ರಗತಿಪರ ಕೃಷಿಕ ಎಡ್ವಾರ್ಡ್ ರೆಬೆಲ್ಲೋ (ರಾಂಬೂಟನ್ ಮತ್ತು ಇತರೆ ಬೆಳೆಗಳ ಬಗ್ಗೆ) ಭಾಗವಹಿಸಿ ಮಾಹಿತಿಯನ್ನು ನೀಡಿದರು.

ನಿರ್ದೇಶಕ ಶೇಖರ್ ನಾಯ್ಕ್ ಸ್ವಾಗತಿಸಿ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕವಿತಾ ಶೆಟ್ಟಿ ವಂದಿಸಿ,
ಉಮೇಶ್ ಕೇಲ್ತಾಜೆ ನಿರೂಪಿಸಿದರು. ಸಿಬ್ಬಂದಿಗಳು ಸಹಕರಿಸಿದರು.

Related posts

ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

Suddi Udaya

ಉಜಿರೆಯಲ್ಲಿ ಡಿ.ಡಿ ಮೆನ್ಸ್ & ವಿಮೆನ್ಸ್ ಸೆಂಟರ್ ಮಲ್ಟಿ‌ ಶೋರೂಮ್ ಅದ್ದೂರಿ ಉದ್ಘಾಟನೆ

Suddi Udaya

ಜು.2: ಪೆರಾಡಿ ಪ್ರಾ.ಕೃ.ಪ. ಸ. ಸಂಘ, ಫ್ರೆಂಡ್ಸ್ ಕ್ಲಬ್ ಹೊಸಂಗಡಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಉಚಿತ ವೈದ್ಯಕೀಯ ಶಿಬಿರ, ಉಚಿತ ದಂತ ಚಿಕಿತ್ಸಾ ಶಿಬಿರ ಹಾಗೂ ರಕ್ತದಾನ ಶಿಬಿರ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀಯ ಆಜ್ಞಾ- ಅರಿವಿನ ಧ್ಯಾನ ಕಾರ್ಯಕ್ರಮ ಸಂಪನ್ನ

Suddi Udaya

ವೇಣೂರು : ದಿ| ಸತೀಶ್ ಆಚಾರ್ಯ ರವರ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಕೊಕ್ಕಡ ಶ್ರೀ ಕ್ಷೇತ್ರ ‌ಸೌತಡ್ಕ ಮಹಾಗಣಪತಿ ‌ದೇವಾಲಯದ‌ ಮುಂಭಾಗದಲ್ಲಿ ನೂತನ ಹರಕೆಯ ಘಂಟೆಯ ‌ಅಂಗಡಿ ಶುಭಾರಂಭ

Suddi Udaya
error: Content is protected !!