28 C
ಪುತ್ತೂರು, ಬೆಳ್ತಂಗಡಿ
July 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳಿಯ ಸಹಕಾರಿ ಸಂಘದಿಂದ ಬೆಳೆ ವಿಮೆ, ಬೆಳೆ ಸಮೀಕ್ಷೆ, ಕೃಷಿ ಮಾಹಿತಿ

ಗೇರುಕಟ್ಟೆ: ಕಳಿಯ ಪ್ರಾ.ಕೃ.ಪ.ಸ. ಸಂಘದಿಂದ ಬೆಳೆ ವಿಮೆ, ಬೆಳೆ ಸಮೀಕ್ಷೆ ಹಾಗೂ ಕೃಷಿ ಮಾಹಿತಿ ಕಾರ್ಯಕ್ರಮ ಜು.28 ರಂದು ಸಂಘದ ಸಹಕಾರಿ ಸಭಾ-ಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೆರವೇರಿಸಿದರು. ಸಭೆಯ ಅಧ್ಯಕ್ಷತೆಯನ್ನು ಕಳಿಯ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ವಸಂತ ಮಜಲು ವಹಿಸಿದರು.

ಸಂಘದ ಉಪಾಧ್ಯಕ್ಷ  ರಾಜ್ ಪ್ರಕಾಶ್ ಶೆಟ್ಟಿ ,  ಆಡಳಿತ ಮಂಡಳಿ ನಿರ್ದೇಶಕರಾದ ಯಂ ಹರಿದಾಸ ಪಡಂತ್ತಾಯ, ಬಾಲಕೃಷ್ಣ ಗೌಡ ಬಿರ್ಮೊಟ್ಟು,  ಚಂದ್ರವತಿ, ಮಮತಾ, ಗೋಪಾಲ ನಾಯ್ಕ್, ಕುಶಾಲಪ್ಪ ಗೌಡ, ಉದಿತ್ ಕುಮಾರ್, ಲೋಕೇಶ್ ಎನ್ ಹಾಗೂ ಕೇಶವ ಪೂಜಾರಿ, ಜಿಲ್ಲಾ ಬ್ಯಾಂಕ್ ಪ್ರತಿನಿಧಿ ಸುದರ್ಶನ್ ವೇದಿಕೆಯಲ್ಲಿದ್ದರು.

ತಣ್ಣೀರುಪಂತ ಪ್ಯಾಕ್ಸ್ ಅಧ್ಯಕ್ಷ ಜಯನಂದ ಕಲ್ಲಾಪು, ಸುಲ್ಕೇರಿಮೊಗ್ರು ಪ್ಯಾಕ್ಸ್ ಅಧ್ಯಕ್ಷ ಸುಧೀರ್ ಆರ್ ಸುವರ್ಣ, ಅಳದಂಗಡಿ ಪ್ಯಾಕ್ಸ್ ಅಧ್ಯಕ್ಷ ರಾಕೇಶ್ ಹೆಗ್ಡೆ, ತೆಕ್ಕಾರು ಪ್ಯಾಕ್ಸ್ ನಿರ್ದೇಶಕ ಇನಾಸ್ ರೊಡ್ರಿಗಸ್, ಸಂಘದ ಸದಸ್ಯರು, ರೈತಾಪಿ ವರ್ಗದವರು ಭಾಗವಹಿಸಿದ್ದರು.

ಬೆಸ್ಟ್ ಎಂಎಲ್ ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರನ್ನು ಸನ್ಮಾನಿಸಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಬೆಳ್ತಂಗಡಿ ಕೃಷಿ ಅಧಿಕಾರಿ ಗಣೇಶ್ (ಬೆಳೆ ವಿಮೆ ಮತ್ತು ಬೆಳೆ ಸಮೀಕ್ಷೆ ಬಗ್ಗೆ), ಉಪ್ಪಿನಂಗಡಿ ಪ್ರಗತಿಪರ ಕೃಷಿಕ ಚಂದ್ರಶೇಖರ ತಾಳ್ತಾಜೆ (ಅಡಿಕೆ ಕೃಷಿ ಬಗ್ಗೆ),ಮೂಡುಬಿದ್ರೆ ಪ್ರಗತಿಪರ ಕೃಷಿಕ ಎಡ್ವಾರ್ಡ್ ರೆಬೆಲ್ಲೋ (ರಾಂಬೂಟನ್ ಮತ್ತು ಇತರೆ ಬೆಳೆಗಳ ಬಗ್ಗೆ) ಭಾಗವಹಿಸಿ ಮಾಹಿತಿಯನ್ನು ನೀಡಿದರು.

ನಿರ್ದೇಶಕ ಶೇಖರ್ ನಾಯ್ಕ್ ಸ್ವಾಗತಿಸಿ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕವಿತಾ ಶೆಟ್ಟಿ ವಂದಿಸಿ,
ಉಮೇಶ್ ಕೇಲ್ತಾಜೆ ನಿರೂಪಿಸಿದರು. ಸಿಬ್ಬಂದಿಗಳು ಸಹಕರಿಸಿದರು.

Related posts

ಶಿಶಿಲ ಬಿಜೆಪಿ ಗ್ರಾಮ ಸಮಿತಿ ವತಿಯಿಂದ ಬಿಜೆಪಿ ಕಾರ್ಯಕರ್ತರಾದ ಚಂದ್ರಶೇಖರ್ ಗೌಡ ಧರ್ಮದಕಳ ಹಾಗೂ ಚೋಮರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಸ್ಥಳೀಯರಿಂದ ಮೂರ್ಚೆ ರೋಗದಿಂದ ಬಿದ್ದಿದ್ದ ಅಪರಿಚಿತ ವ್ಯಕ್ತಿಯ ರಕ್ಷಣೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾ. ಶಾಲೆಯಲ್ಲಿ ಡಾ. ಡಿ ವೀರೇಂದ್ರ ಹೆಗ್ಗಡೆ ಯವರ ಹುಟ್ಟುಹಬ್ಬದ ಸಂಭ್ರಮ

Suddi Udaya

ಬೆಳ್ತಂಗಡಿ ಅಖಿಲ ಭಾರತ ಬ್ಯಾರಿ ಮಹಾಸಭಾ ಪ್ರತಿನಿಧಿ ಸಭೆಯ ಪೂರ್ವಭಾವಿ ಸಭೆ

Suddi Udaya

ಚೈನೈ: ಶಾಸ್ತ್ರೀಯ ಸಂಗೀತ ಆಕಾಶ್ ಕೃಷ್ಣ ದ್ವಿತೀಯ

Suddi Udaya

ನಕಲಿ ಸಹಿ ಮಾಡಿ ಅಕ್ಷರ ದಾಸೋಹ ಮತ್ತು ಎಸ್.ಎಸ್.ಎ. ಖಾತೆಯ ಹಣ ಡ್ರಾ; ಮುಖ್ಯ ಶಿಕ್ಷಕಿಯ ವಿರುದ್ಧ ಎಸ್.ಡಿ.ಎಂ.ಸಿ ಅಧ್ಯಕ್ಷೆ ದೂರು: ಪೋಜ೯ರಿ ಸಹಿ ಮಾಡಿ ಶಾಲೆಯ ಖಾತೆಯಿಂದ ಯಾವತ್ತೂ ಹಣವನ್ನು ಡ್ರಾ ಮಾಡಿರುವುದಿಲ್ಲ : ಮುಖ್ಯ ಶಿಕ್ಷಕಿ ಸ್ಪಷ್ಟನೆ

Suddi Udaya
error: Content is protected !!