July 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಬಂಟರ ವಲಯ ಸಮಿತಿ ವತಿಯಿಂದ ಆಟಿಡೊಂಜಿ ದಿನ

ಬೆಳ್ತಂಗಡಿ: ಬಂಟರ ವಲಯ ಸಮಿತಿ ಬೆಳ್ತಂಗಡಿ ಇದರ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮವು ಲಾಯಿಲ ಗ್ರಾಮದ ಕರ್ನೊಡಿ “ಜಯಭವಾನಿ” ಮನೆಯ ವಠಾರದಲ್ಲಿ ಜು. 26 ರಂದು ನಡೆಯಿತು.‌

ಕಾರ್ಯಕ್ರಮವನ್ನು ಬೆಳ್ತಂಗಡಿ ತಾಲೂಕು ಬಂಟರ ಸಂಘದ ಅಧ್ಯಕ್ಷ ಪ್ರಕಾಶ್ ಶೆಟ್ಟಿ ನೊಚ್ಚ ಉದ್ಘಾಟಿಸಿ ಆಟಿ ಕೂಟ ಕಾರ್ಯಕ್ರಮದ ಮಹತ್ಚವನ್ನು ತಿಳಿಸಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಹೊಟೇಲ್ ಕಂಫರ್ಟ್ ಇನ್, ದೇರಳಕಟ್ಟೆ ಮಾಲಕ ಚಂದ್ರಹಾಸ ಶೆಟ್ಟಿ ಮಾತನಾಡಿ ಆಟಿ ತಿಂಗಳಲ್ಲಿ ನಮ್ಮ ಹಿರಿಯರು ಪ್ರಕೃತಿಯಲ್ಲಿ ಸಿಗುತಿದ್ದ ವಿವಿಧ ಔಷಧಿಯ ಗುಣಗಳುಳ್ಳ ಆಹಾರ ಖಾದ್ಯಗಳನ್ನು ಸೇವಿಸುತ್ತ  ಆರೋಗ್ಯದ ಕಾಳಜಿ ವಹಿಸುತಿದ್ದರು.  ಆಗಿನ ಕಾಲದ ಆಹಾರ ಪದ್ದತಿಗಳನ್ನು, ಇಂತಹ ಕಾರ್ಯಕ್ರಮಗಳ ಮೂಲಕ ಈಗಿನ ಯುವ ಜನತೆಗೆ ಮಾಹಿತಿ ತಿಳಿಯ ಪಡಿಸುವ ಅಗತ್ಯತೆ ಇದೆ ಈ ನಿಟ್ಟಿನಲ್ಲಿ ಆಟಿದಕೂಟ ಕಾರ್ಯಕ್ರಮಗಳು ಅಯೋಜಿಸಿರುವುದು ಬಹಳ ಅರ್ಥಪೂರ್ಣ ಎಂದರು.

ಡಾ.ಮಂಜುಶ್ರೀ ಚಂದ್ರಹಾಸ್ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ವಿಶೇಷ ಸಾಧನೆಗೈದ ವಿದ್ಯಾರ್ಥಿಗಳನ್ನು ಹಾಗೂ ಗಣ್ಯರನ್ನು ಗೌರವಿಸಲಾಯಿತು. ವಲಯ ಸಮಿತಿ ಅಧ್ಯಕ್ಷ ಜಗನ್ನಾಥ್ ಶೆಟ್ಟಿ ಕರ್ನೊಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮ ಇಷ್ಟೊಂದು ಅಚ್ಚುಕಟ್ಟಾಗಿ ಮೂಡಿಬರಲು ಹಾಗೂ ಯಶಸ್ವಿಯಾಗಿ ನಡೆಯಲು ಶ್ರಮ ವಹಿಸಿದ ಎಲ್ಲರನ್ನು ಅಭಿನಂದಿಸಿದರು. ಮುಖ್ಯ ಅತಿಥಿಗಳಾಗಿ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಜಿತ್ ಜಿ ಶೆಟ್ಟಿ, ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷ ಜಯಂತ ಶೆಟ್ಟಿ ಭಂಡಾರಿಗುಡ್ಡೆ, ಮಹಿಳಾ ವಿಭಾಗದ ಅಧ್ಯಕ್ಷೆ ವಂದನ ರೈ, ವಿಠಲ ಶೆಟ್ಟಿ ಶ್ರದ್ಧಾ ಲಾಯಿಲ,   ಸುರೇಶ್ ಶೆಟ್ಟಿ, ವಸಂತ ಶೆಟ್ಟಿ, ಸಂಸ್ಕ್ರತಿ ಶೆಟ್ಟಿ ಸೇರಿದಂತೆ ವಲಯ ಸಮಿತಿಗಳ ಅಧ್ಯಕ್ಷರು ಉಪಸ್ಥಿತರಿದ್ದರು. ವಲಯ ಸಮಿತಿ ಕಾರ್ಯದರ್ಶಿ ಆಶೋಕ್ ಶೆಟ್ಟಿ ಲಾಯಿಲ ಪ್ರಸ್ತಾವಿಸಿ ಸ್ವಾಗತಿಸಿದರು.ರಘಚಂದ್ರ ಶೆಟ್ಟಿ ದನ್ಯವಾದವಿತ್ತರು.ಸೋನಾಕ್ಷಿ ವಿಭ ರೈ ಕಾರ್ಯಕ್ರಮ ನಿರ್ವಹಿಸಿದರು.

ಬೆಳಗ್ಗಿನಿಂದ ಸಂಜೆಯವರೆಗೆ ಪುಟಾಣಿ ಮಕ್ಕಳು ಸಹಿತ ಎಲ್ಲರಿಗೂ ಕ್ರೀಡಾಕೂಟವ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು.

ವಲಯದ ವಿವಿಧ ಮನೆಗಳಿಂದ ತಯಾರಿಸಿ ತಂದಿದ್ದ ಸುಮಾರು 70 ಕ್ಕಿಂತಲೂ ಅಧಿಕ ಬಗೆಯ ವಿವಿಧ ಆಹಾರ ಖಾಧ್ಯಗಳು ಎಲ್ಲರ ಗಮನಸೆಳೆದವು. ಸಂಜೆ ಪುರುಷರ ,ಮಹಿಳೆಯರ ಹಗ್ಗಜಗ್ಗಾಟ ಕ್ರೀಡೆಯೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು.ಲಾಯಿಲ, ನಡ, ಕನ್ಯಾಡಿ,ಗುರಿಪಳ್ಳ, ನಾವೂರು,ಸವಣಾಲು,ಮೇಲಂತಬೆಟ್ಟು,ಬೆಳ್ತಂಗಡಿ ಗ್ರಾಮಸಮಿತಿಗಳ ಸುಮಾರು 700 ಮಂದಿ ಬಂಟ ಭಾಂಧವರು ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಪಾಲ್ಗೊಂಡರು.ತಾಲೂಕಿನ‌ ವಿವಿಧ ವಲಯ ಸಮಿತಿಗಳ ಪದಾಧಿಕಾರಿಗಳು ಆಗಮಿಸಿ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

Related posts

ಮದ್ದಡ್ಕದಲ್ಲಿ ಸ್ಕೂಟಿ ಹಾಗೂ ಆಪೆ ರಿಕ್ಷಾ ಡಿಕ್ಕಿ

Suddi Udaya

ಮುಂಡಾಜೆ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಲ್ಮಂಜ ಸಿದ್ದಬೈಲ್ ಪರಾರಿ ಸ.ಹಿ.ಪ್ರಾ. ಶಾಲೆಗೆ ಯುವ ಉದ್ಯಮಿ ಮೋಹನ್ ಗೌಡರಿಂದ ಇನ್ವಾರ್ಟರ್ ಕೊಡುಗೆ

Suddi Udaya

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಿಂದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೀಕ್ಷಣೆ: ಅಸಮಪ೯ಕ ಕಾಮಗಾರಿ ನಿರ್ವಹಣೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಜಿಲ್ಲಾಧಿಕಾರಿ

Suddi Udaya

ಶಿರ್ಲಾಲು : ಮೊಂಟ ಮೂಲ್ಯ ನಿಧನ

Suddi Udaya

ಉಜಿರೆ ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!