July 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನ–ಬಳ್ಳಮಂಜದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ನೂತನ ಶಾಖೆ ಉದ್ಘಾಟನೆ

ಬಳ್ಳಮಂಜ : ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ.), ಕೇಂದ್ರ ಕಚೇರಿ ತುಮಕೂರು, ನೇತ್ರಾವತಿ ವಲಯ ಮಂಗಳೂರು ಇದರ ಆಶ್ರಯದಲ್ಲಿ ಮಚ್ಚಿನ ಸಮುದಾಯ ಭವನದಲ್ಲಿ ನೂತನ ಯೋಗ ಶಿಕ್ಷಣ ಶಾಖೆಯನ್ನು ಜು.26ರಂದು ಉದ್ಘಾಟಿಸಲಾಯಿತು.

ಕಾರ್ಯಕ್ರಮವನ್ನು ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಅನುವಂಶೀಯ ಆಡಳಿತ ಮೋಕ್ತೇಸರರಾದ ಡಾ. ಎಂ. ಹರ್ಷ ಸಂಪಿಗೆತ್ತಾಯ ಅವರು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು.

ಸಮಿತಿಯ ನೇತ್ರಾವತಿ ವಲಯ ಸಂಚಾಲಕರಾದ ಅಶೋಕ್ ಪ್ರಾಸ್ತಾವಿಕ ನುಡಿಗಳ ಮೂಲಕ ಸಮಿತಿಯ ಉದ್ದೇಶ ಹಾಗೂ ಯೋಗದ ಮಹತ್ವವನ್ನು ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಷಮರ್ದಿನಿ ಶಾಖೆಯ ಸಹ ಶಿಕ್ಷಕ ಸುಧಾಕರ್ ವಹಿಸಿದ್ದರು. ಯೋಗ ಶಿಬಿರಾರ್ಥಿಗಳಾದ ದಿವಾಕರ್, ಉಮಾ ಹಾಗೂ ನಾರಾಯಣ ಅವರು ಯೋಗಾಭ್ಯಾಸದಿಂದ ತಮ್ಮ ಜೀವನದಲ್ಲಿ ಕಂಡ ಬದಲಾವಣೆ ಹಾಗೂ ಅನುಭವಗಳನ್ನು ಹಂಚಿಕೊಂಡರು .ಸಹ ಶಿಕ್ಷಕ ಸುಕೇಶ್ ಉಪಸ್ಥಿತರಿದ್ದರು.

ಕುಮಾರಿ ಭಕ್ತಿಪ್ರಿಯ ಪ್ರಾರ್ಥನೆ ನೆರವೇರಿಸಿ, ಉಮಾ ಸ್ವಾಗತಿಸಿದರು.ಅಮಿತಾ ಕಾರ್ಯಕ್ರಮವನ್ನು ನಿರೂಪಿಸಿದರು. ಬಾಲಕೃಷ್ಣ ವಂದಿಸಿದರು. ಸುಧಾ ಸೂಚನೆಗಳನ್ನು ನೀಡಿದರು.

Related posts

ಪಡಂಗಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಅಳದಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ರಸ್ತೆಯ ಮೇಲೆ ಬಿದ್ದ ಮಣ್ಣನ್ನು ಜೆಸಿಬಿ ಮೂಲಕ ತೆರವು ಕಾರ್ಯ

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಧರ್ಮಸ್ಥಳವನ್ನು ಏಕ ಬಳಕೆಯ ಪ್ಲಾಸ್ಟಿಕ್ ಮುಕ್ತ ಗ್ರಾಮವೆಂದು ಸಚಿವ ಈಶ್ವರ ಖಂಡ್ರೆಯವರಿಂದ ಅಧಿಕೃತ ಘೋಷಣೆ

Suddi Udaya

ಕಕ್ಕಿಂಜೆಗೆ ಮೌಲಾನಾ ಆಜಾದ್ ಮಾದರಿ ಶಾಲೆ ಮಂಜೂರು ಸಚಿವರಿಗೆ ಅಭಿನಂದನೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಹಾಗೂ ಒಕ್ಕೂಟದ ವತಿಯಿಂದ ವಿಶ್ವ ತಂಬಾಕು ವಿರೋಧಿ ದಿನಾಚರಣೆ

Suddi Udaya
error: Content is protected !!