July 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವಿದ್ಯಾರ್ಥಿಗಳಲ್ಲಿ ಪ್ರಕೃತಿ ಪ್ರೇಮ ಬೆಳೆಸಿದ ಎಕ್ಸೆಲ್ ಟೆಕ್ನೊ ಸ್ಕೂಲ್‌ನ ‘ನೇಚರ್ ನರ್ಚರ್ ಡೇ’

ಗುರುವಾಯನಕೆರೆ: ಅಳಿವಿನಂಚಿನಲ್ಲಿರುವ ಪ್ರಕೃತಿಯನ್ನು ಸಂರಕ್ಷಿಸಿ ಬೆಳೆಸುವ ಕುರಿತು ಮಕ್ಕಳಲ್ಲಿ ಎಳೆ ವಯಸ್ಸಿನಲ್ಲೇ ಪರಿಸರ ಜಾಗೃತಿ ಮೂಡಿಸುವ ಉದ್ದೇಶದಿಂದ ಗುರುವಾಯನಕೆರೆಯ ಎಕ್ಸೆಲ್ ಟೆಕ್ನೊ ಸ್ಕೂಲ್‌ನ ಪೂರ್ವ ಪ್ರಾಥಮಿಕ ವಿಭಾಗದಲ್ಲಿ ‘Nature Nurture Day’ ಕಾರ್ಯಕ್ರಮವನ್ನು ಆಚರಿಸಲಾಯಿತು.

ಶಾಲೆಯ ಸಂಯೋಜಕಿ ಲೀನಾ ಫ್ಲೋರಿನ್ ಪಿಂಟೋ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುಟಾಣಿ ವಿದ್ಯಾರ್ಥಿಗಳು ಹಸಿರು ಬಣ್ಣದ ಉಡುಗೆ ತೊಟ್ಟು ಸಂಭ್ರಮದಿಂದ ಪಾಲ್ಗೊಂಡರು. ಮಕ್ಕಳು ಮನೆಯಿಂದ ತಂದಿದ್ದ ಹಸಿರು ಬಣ್ಣದ ವಸ್ತುಗಳು ಹಾಗೂ ಆಟಿಕೆಗಳನ್ನು ಪ್ರದರ್ಶಿಸಿ ಎಲ್ಲರ ಗಮನ ಸೆಳೆದರು.

ವಿಶೇಷ ಆಕರ್ಷಣೆಯಾಗಿ ಕಾಡುಮನುಷ್ಯರ ವೇಷಭೂಷಣ ತೊಟ್ಟ ಪುಟಾಣಿಗಳು ಗುಹಾಕೃತಿಯಿಂದ ಹೊರಬಂದು ಪ್ರಕೃತಿಯೊಂದಿಗಿನ ಮಾನವನ ಬಾಂಧವ್ಯವನ್ನು ಮನಮಿಡಿಯುವ ರೀತಿಯಲ್ಲಿ ಬಿಂಬಿಸಿದರು. ವಿವಿಧ ವಿಭಾಗಗಳ ವಿದ್ಯಾರ್ಥಿಗಳು ಪ್ರಕೃತಿ ಸಂರಕ್ಷಣೆಯ ಕುರಿತು ಪಾತ್ರಾಭಿನಯ ಹಾಗೂ ಭಾಷಣಗಳನ್ನು ನಡೆಸಿ ಮೆಚ್ಚುಗೆ ಪಡೆದರು.

ಈ ಸಂದರ್ಭದಲ್ಲಿ ಸಂಯೋಜಕಿ ಲೀನಾ ಫ್ಲೋರಿನ್ ಪಿಂಟೋ ಅವರು ಪ್ರಕೃತಿಯ ಮಹತ್ವವನ್ನು ಮಕ್ಕಳಿಗೆ ಮನವರಿಕೆ ಮಾಡಿಕೊಟ್ಟು, ಮುಂದಿನ ದಿನಗಳಲ್ಲಿ ಪ್ರತಿದಿನದ ಪ್ರಾರ್ಥನಾ ಸಭೆಯಲ್ಲಿ ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಯ ಕುರಿತು ಮಾತನಾಡುವ ಮೂಲಕ ಜಾಗೃತಿ ಮೂಡಿಸುವಂತೆ ತಿಳಿಸಿದರು.

ಕಾರ್ಯಕ್ರಮದ ಯಶಸ್ಸಿಗೆ ಶಿಕ್ಷಕಿಯರಾದ ಗೀತಾ, ಜೋಸ್ಲಿಟಾ ಲೋಬೊ, ಪೂರ್ಣಿಮಾ ಆಚಾರ್ಯ, ಲವೀನಾ, ಪ್ರೇಮ, ವಿಲ್ಮಾ, ಚೇತನಾ ಹಾಗೂ ಬೋಧಕೇತರ ಸಿಬ್ಬಂದಿ ಸಹಕರಿಸಿದರು. ಹಸಿರುಮಯ ಕಾರ್ಯಕ್ರಮದ ಯಶಸ್ಸಿನಲ್ಲಿ ಪೋಷಕರ ಉತ್ಸಾಹಭರಿತ ಸಹಭಾಗಿತ್ವ ಮತ್ತು ಪರಿಶ್ರಮವೂ ಪ್ರಮುಖ ಪಾತ್ರ ವಹಿಸಿತು.

Related posts

ಆ.4 ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರದಲ್ಲಿ ಆಟಿ ಅಮಾವಾಸ್ಯೆಯ ಪ್ರಯುಕ್ತ ತೀರ್ಥಸ್ನಾನ

Suddi Udaya

ಕುಕ್ಕೇಡಿ: ಶ್ರೀ ಶಾರಾದಾಂಬ ಮಹಿಳಾ ಭಜನಾ ಸಮಿತಿಯ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪಾರೆಂಕಿ ಮಾರಿಕಾಂಬ ದೇವಿ ಸನ್ನಿಧಿಯಲ್ಲಿ ಜಾತ್ರೋತ್ಸವ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವ

Suddi Udaya

ಹುಣ್ಸೆಕಟ್ಟೆಯಲ್ಲಿ ನಾಯಿಗಳ ದಾಳಿಯಿಂದ ಬಿದ್ದು ಗಾಯಗೊಂಡ ಜಿಂಕೆ

Suddi Udaya

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನ ಬ್ಯೂಟಿ ಅಂಡ್ ವೆಲ್ನೆಸ್ ನ ಉಪನ್ಯಾಸಕಿ ಪುಷ್ಪಲತಾ ರಿಗೆ “ಗುರುವೇ ನಮಃ” ಅವಾರ್ಡ್

Suddi Udaya

ವೈಯಕ್ತಿಕ ದ್ವೇಷ ಹಿನ್ನೆಲೆ ವ್ಯಕ್ತಿಯ ಮೇಲೆ ಹಲ್ಲೆ – ಪ್ರಕರಣ ದಾಖಲು

Suddi Udaya
error: Content is protected !!