July 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳಿಯ ಸಹಕಾರಿ ಸಂಘದಿಂದ ಬೆಳೆ ವಿಮೆ, ಬೆಳೆ ಸಮೀಕ್ಷೆ, ಕೃಷಿ ಮಾಹಿತಿ

ಗೇರುಕಟ್ಟೆ: ಕಳಿಯ ಪ್ರಾ.ಕೃ.ಪ.ಸ. ಸಂಘದಿಂದ ಬೆಳೆ ವಿಮೆ, ಬೆಳೆ ಸಮೀಕ್ಷೆ ಹಾಗೂ ಕೃಷಿ ಮಾಹಿತಿ ಕಾರ್ಯಕ್ರಮ ಜು.28 ರಂದು ಸಂಘದ ಸಹಕಾರಿ ಸಭಾ-ಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೆರವೇರಿಸಿದರು. ಸಭೆಯ ಅಧ್ಯಕ್ಷತೆಯನ್ನು ಕಳಿಯ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ವಸಂತ ಮಜಲು ವಹಿಸಿದರು.

ಸಂಘದ ಉಪಾಧ್ಯಕ್ಷ  ರಾಜ್ ಪ್ರಕಾಶ್ ಶೆಟ್ಟಿ ,  ಆಡಳಿತ ಮಂಡಳಿ ನಿರ್ದೇಶಕರಾದ ಯಂ ಹರಿದಾಸ ಪಡಂತ್ತಾಯ, ಬಾಲಕೃಷ್ಣ ಗೌಡ ಬಿರ್ಮೊಟ್ಟು,  ಚಂದ್ರವತಿ, ಮಮತಾ, ಗೋಪಾಲ ನಾಯ್ಕ್, ಕುಶಾಲಪ್ಪ ಗೌಡ, ಉದಿತ್ ಕುಮಾರ್, ಲೋಕೇಶ್ ಎನ್ ಹಾಗೂ ಕೇಶವ ಪೂಜಾರಿ, ಜಿಲ್ಲಾ ಬ್ಯಾಂಕ್ ಪ್ರತಿನಿಧಿ ಸುದರ್ಶನ್ ವೇದಿಕೆಯಲ್ಲಿದ್ದರು.

ತಣ್ಣೀರುಪಂತ ಪ್ಯಾಕ್ಸ್ ಅಧ್ಯಕ್ಷ ಜಯನಂದ ಕಲ್ಲಾಪು, ಸುಲ್ಕೇರಿಮೊಗ್ರು ಪ್ಯಾಕ್ಸ್ ಅಧ್ಯಕ್ಷ ಸುಧೀರ್ ಆರ್ ಸುವರ್ಣ, ಅಳದಂಗಡಿ ಪ್ಯಾಕ್ಸ್ ಅಧ್ಯಕ್ಷ ರಾಕೇಶ್ ಹೆಗ್ಡೆ, ತೆಕ್ಕಾರು ಪ್ಯಾಕ್ಸ್ ನಿರ್ದೇಶಕ ಇನಾಸ್ ರೊಡ್ರಿಗಸ್, ಸಂಘದ ಸದಸ್ಯರು, ರೈತಾಪಿ ವರ್ಗದವರು ಭಾಗವಹಿಸಿದ್ದರು.

ಬೆಸ್ಟ್ ಎಂಎಲ್ ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರನ್ನು ಸನ್ಮಾನಿಸಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಬೆಳ್ತಂಗಡಿ ಕೃಷಿ ಅಧಿಕಾರಿ ಗಣೇಶ್ (ಬೆಳೆ ವಿಮೆ ಮತ್ತು ಬೆಳೆ ಸಮೀಕ್ಷೆ ಬಗ್ಗೆ), ಉಪ್ಪಿನಂಗಡಿ ಪ್ರಗತಿಪರ ಕೃಷಿಕ ಚಂದ್ರಶೇಖರ ತಾಳ್ತಾಜೆ (ಅಡಿಕೆ ಕೃಷಿ ಬಗ್ಗೆ),ಮೂಡುಬಿದ್ರೆ ಪ್ರಗತಿಪರ ಕೃಷಿಕ ಎಡ್ವಾರ್ಡ್ ರೆಬೆಲ್ಲೋ (ರಾಂಬೂಟನ್ ಮತ್ತು ಇತರೆ ಬೆಳೆಗಳ ಬಗ್ಗೆ) ಭಾಗವಹಿಸಿ ಮಾಹಿತಿಯನ್ನು ನೀಡಿದರು.

ನಿರ್ದೇಶಕ ಶೇಖರ್ ನಾಯ್ಕ್ ಸ್ವಾಗತಿಸಿ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕವಿತಾ ಶೆಟ್ಟಿ ವಂದಿಸಿ,
ಉಮೇಶ್ ಕೇಲ್ತಾಜೆ ನಿರೂಪಿಸಿದರು. ಸಿಬ್ಬಂದಿಗಳು ಸಹಕರಿಸಿದರು.

Related posts

ಬುರುಡೆ ಚಿನ್ನಯ್ಯ ನನ್ನು ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಲಿರುವ ಅಧಿಕಾರಿಗಳು: ಚಿನ್ನಯ್ಯ ಪರ ನಾಲ್ಕು ಮಂದಿ ವಕೀಲರ ಆಗಮನ

Suddi Udaya

ಬೆಳ್ತಂಗಡಿ ಗ್ರಾ.ಪಂ. ಮಟ್ಟದ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರು ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಬೆಳ್ತಂಗಡಿ ತಾಲೂಕು ಮಟ್ಟದ ಯೂನಿಯನ್ ರಚನೆ

Suddi Udaya

ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ರವರಿಗೆ ಅಭಿನಂದನೆ ಕೋರಿ ಬ್ಯಾನರ್ ಅಳವಡಿಕೆ: ಬ್ಯಾನರ್ ನ್ನು ತೆರವುಗೊಳಿಸಿದ ಪಟ್ಟಣ ಪಂಚಾಯತ್ ಸಿಬ್ಬಂದಿಗಳು

Suddi Udaya

ಮೈಪಾಲ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಸರಕಾರದಿಂದ ರೂ 72 ಕೋಟಿ ಅನುದಾನ

Suddi Udaya

ಕೊಕ್ಕಡ: ಎಂಡೋ ಪೀಡಿತ ವಿಶೇಷ ಚೇತನರಿಗೆ ಉಚಿತ ಬಸ್ ಪಾಸ್ ವಿತರಣೆ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇಂಬರ್ ಹಾಗೂ ವಿವಿಧ ಸಂಘಗಳ ಆಶ್ರಯದಲ್ಲಿ ಉಚಿತ ದಂತ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ

Suddi Udaya
error: Content is protected !!