July 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತಾಲ್ಲೂಕು ಮಟ್ಟದ ಕರಾಟೆ ಸ್ಪರ್ಧೆ: ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿಗಳು

ಬೆಳ್ತಂಗಡಿ: ತಾಲ್ಲೂಕು ಮಟ್ಟದ ಕರಾಟೆ ಸ್ಪರ್ಧೆಯು ನವಚೇತನ ಆಂಗ್ಲ ಮಾಧ್ಯಮ ಶಾಲೆ ವೇಣೂರು ಇಲ್ಲಿ ನಡೆಯಿತು.

ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಕರಾಟೆಯಲ್ಲಿ ಭಾಗವಹಿಸಿ ಅನೇಕ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡರು.
ಕ್ಲೇಯರ್ ಸಜಿ 8ನೇ ತರಗತಿ ದ್ವಿತೀಯ ಸ್ಥಾನ, ಫಾತಿಮತ್ ರಾಹಿಝ 8 ನೇ ತರಗತಿ ತೃತೀಯ ಸ್ಥಾನ, ರಿಸ್ಟನ್ ಲೋಬೊ 10 ನೇ ತರಗತಿ ತೃತೀಯ ಸ್ಥಾನ, ವೆಲ್ರೋಯ್ ಪಾಯ್ಸ್ 8ನೇ ತರಗತಿ ತೃತಿಯ ಸ್ಥಾನ ಗಳಿಸಿಕೊಂಡಿದ್ದಾರೆ. ಇವರಿಗೆ ಶಾಲೆಯ ಕರಾಟೆ ಶಿಕ್ಷಕ ಸೆನ್ಸಾಯಿ ಅಬ್ದುಲ್ ರೆಹಮಾನ್ ಇವರು ತರಬೇತಿಯನ್ನು ನೀಡಿರುತ್ತಾರೆ.

ವಿಜೇತರನ್ನು ಶಾಲಾ ಮ್ಯಾನೇಜರ್ ವಂದನೀಯ.ರೆ. ಫಾ. ಮ್ಯಾತ್ಯು, ಶಾಲಾ ಮುಖ್ಯ ಶಿಕ್ಷಕಿ ವಂದನೀಯ ರೆ. ಸಿ. ಲೀನಾ, ಶಾಲಾ ಬೋಧಕ ಮತ್ತು ಭೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

Related posts

ಉರುವಾಲುನಲ್ಲಿ ಗುಡ್ಡ ಕುಸಿತ : ಮನೆ ಹಾಗೂ ಕೃಷಿಗೆ ಹಾನಿ

Suddi Udaya

ಕ್ರೀಡಾಕೂಟ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಎಸ್‌ಡಿಟಿಯು ಆಟೋ ಯೂನಿಯನ್ ಬಾಜಾರ್ ಘಟಕ ಅಸ್ಥಿತ್ವಕ್ಕೆ

Suddi Udaya

ಪೆರಿಂಜೆ ಪಟ್ಟಾಡಿಯಲ್ಲಿ ಹಾಜಿ ಮಲಂಗ್ ಇಂಟರ್ ನ್ಯಾಷನಲ್ ಗರ್ಲ್ಸ್ ಕ್ಯಾಂಪಸ್ ಉದ್ಘಾಟನೆ

Suddi Udaya

ಜ.27: ಮಡಂತ್ಯಾರು ಗ್ರಾಮ ಪಂಚಾಯತ್ ನಲ್ಲಿ ವಿವಿಧ ರಸ್ತೆ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಪ.ಜಾತಿ / ಪ.ಪಂಗಡ ಮತ್ತು ದಿವ್ಯಾಂಗಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಣೆ

Suddi Udaya

ಚಾರ್ಮಾಡಿ ಘಾಟಿನಲ್ಲಿ ಭಾರಿ ಬೆಂಕಿ ಅವಘಡ

Suddi Udaya
error: Content is protected !!