July 28, 2026
ತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಧರ್ಮಸ್ಥಳದಲ್ಲಿ ಸಂಸ್ಕೃತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಧರ್ಮಸ್ಥಳ: ಕರ್ನಾಟಕ ರಾಜ್ಯ ಪ್ರೌಢಶಾಲಾ ಸಂಸ್ಕೃತ ಅಧ್ಯಾಪಕ ಸಂಘ (ರಿ.),ದಕ್ಷಿಣ ಕನ್ನಡ ಜಿಲ್ಲಾ ಪ್ರೌಢಶಾಲಾ ಸಂಸ್ಕೃತ ಅಧ್ಯಾಪಕ ಸಂಘ, ಮಂಗಳೂರು ಸಂಸ್ಕೃತ ಸಂಘ (ರಿ.) ಇವುಗಳ ಸಹಯೋಗದೊಂದಿಗೆ ಎಸ್.ಎಸ್.ಎಲ್.ಸಿ ವಾರ್ಷಿಕ-ಪರೀಕ್ಷೆಯಲ್ಲಿ ಸಂಸ್ಕೃತ-ಭಾಷೆಯಲ್ಲಿ ಅಧಿಕ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಧರ್ಮಸ್ಥಳದ ಅಮೃತವರ್ಷಿಣಿ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

ಸಮಾರಂಭಕ್ಕೆ ಉದ್ಘಾಟಕರಾಗಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಆಗಮಿಸಿ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಸಂಸ್ಕೃತ ಭಾಷೆಯ ಮಹತ್ವ ಹಾಗೂ ವಿದ್ಯಾರ್ಥಿಗಳು ಅದನ್ನು ತಿರಸ್ಕರಿಸದೆ ತಮ್ಮ ಜೀವಮಾನದ ಉದ್ದಕ್ಕೂ ಬಳಸಿಕೊಳ್ಳಬೇಕು, ಸಂಸ್ಕೃತ ಭಾಷೆಯ ಮಹತ್ವವನ್ನು ಅರಿತು ಬಾಳಬೇಕು ಎಂದು ಆಶೀರ್ವಚನವನ್ನು ನೀಡಿದರು. ಬಳಿಕ ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸಂಸ್ಕೃತದಲ್ಲಿ ಪ್ರಥಮ ಭಾಷೆಯಲ್ಲಿ 125ಕ್ಕೆ 125 ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಸಾಂಕೇತಿಕವಾಗಿ ಸನ್ಮಾನಿಸಿ ಶುಭ ಹಾರೈಸಿದರು.

ಅನಂತರಾಮ ಐತಾಳರು ಪ್ರಸ್ತಾವಿಕ ನುಡಿಗಳನ್ನು ಆಡುತ್ತಾ ಈ ಕಾರ್ಯಕ್ರಮದ ಹಿಂದಿನ ಉದ್ದೇಶ ಹಾಗೂ ಇದರ ಹಿಂದೆ ಇರುವಂತಹ ಶ್ರಮದ ಕುರಿತಾಗಿ ಮಾತುಗಳನ್ನಾಡಿದರು.ಬಳಿಕ ಮಾತನಾಡಿದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಾವಿದ್ಯಾಲಯ ಉಜಿರೆ ಇಲ್ಲಿನ ಸಂಸ್ಕೃತ ಪ್ರಾಧ್ಯಾಪಕರಾಗಿರುವ ಶ್ರೀಧರ ಎನ್ ಭಟ್ ತನ್ನ ದಿಕ್ಸೂಚಿ ಭಾಷಣದಲ್ಲಿ ಸಂಸ್ಕೃತ ಭಾಷೆಯಲ್ಲಿ ಮಾತನಾಡುತ್ತಾ ಸಂಸ್ಕೃತ ಭಾಷೆಯ ಮಹತ್ವ ಸಂಸ್ಕೃತ ಭಾಷೆಯ ಅಗತ್ಯ ಹಾಗೂ ಸಂಸ್ಕೃತ ಭಾಷೆಯಲ್ಲಿರುವ ಪಾಂಡಿತ್ಯದ ಕುರಿತಾಗಿ ಮಾತನಾಡಿದರು, ಬಳಿಕ ಮಾತನಾಡಿರುವ ಮಾನ್ಯ ವಿಧಾನ ಪರಿಷತ್ ಮಾಜಿ ಸದಸ್ಯ ಪ್ರತಾಪ ಸಿಂಹ ನಾಯಕ್ ಮಾತನಾಡುತ್ತಾ ಸಂಸ್ಕೃತ ಭಾಷೆಯ ಉಳಿವಿಗಾಗಿ ನಾವು ಮಾಡುವ ಪ್ರಯತ್ನ ಹೇಗಿರಬೇಕು ಎಂಬುದನ್ನು ವಿವರಿಸಿದರು, ಧರ್ಮಸ್ಥಳ ಶಾಲೆಗಳ ಸಂಚಾಲಕರಾಗಿರುವ ಅನಂತಪದ್ಮನಾಭ ಭಟ್ ಕಾರ್ಯಕ್ರಮಕ್ಕೆ ತಮ್ಮ ಶುಭನುಡಿಯನ್ನು ನುಡಿದರು. ದಕ್ಷಿಣ ಕನ್ನಡ ಜಿಲ್ಲಾ ಪ್ರೌಢಶಾಲಾ ಸಂಸ್ಕೃತ ಅಧ್ಯಾಪಕ ಸಂಘ ಇದರ ಅಧ್ಯಕ್ಷ ಜಯರಾಮ ಭಟ್ ಈ ಕಾರ್ಯಕ್ರಮದ ಹಿಂದಿನ ಧೀಶಕ್ತಿ ಹಾಗೂ ಅದರ ಹಿಂದಿರುವ ಪ್ರಯತ್ನಗಳು ಅದರ ಉಳಿವಿನ ಕುರಿತಾದ ಅನೇಕ ವಿಚಾರಗಳನ್ನು ಮಾತನಾಡಿದರು.

ಬಳಿಕ ಪ್ರಥಮ ಭಾಷೆ ಸಂಸ್ಕೃತ ಇದರಲ್ಲಿ 125 ಹಾಗೂ 124 ಹಾಗೂ ತೃತೀಯ ಭಾಷೆಯಲ್ಲಿ 100 ಪೂರ್ಣ ಅಂಕಗಳನ್ನು, ಹಾಗೂ, 99 ಅಂಕಗಳನ್ನು ಪಡೆದಿರುವ ವಿದ್ಯಾರ್ಥಿಗಳಿಗೆ ಸನ್ಮಾನವನ್ನು ಮಾಡಿ ಶುಭ ಹಾರೈಸಲಾಯಿತು. ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆ ಧರ್ಮಸ್ಥಳ ಇಲ್ಲಿನ ಸಂಸ್ಕೃತ ಶಿಕ್ಷಕಿ ಶ್ರೀಮತಿ ಭವ್ಯ ನಿರ್ವಹಿಸಿದ ಕಾರ್ಯಕ್ರಮದಲ್ಲಿ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆ, ಉಜಿರೆ ಇಲ್ಲಿನ ಶಿಕ್ಷಕಿ ಸುಜನ ಸ್ವಾಗತಿಸಿ , ಮುರಾರಿ ತಂತ್ರಿ ಕಾರ್ಯಕ್ರಮದ ವಂದನಾರ್ಪಣೆಯನ್ನುಗೈದರು. ವಿವಿಧ ಶಾಲೆಗಳ ಸಂಸ್ಕೃತ ಉಪನ್ಯಾಸಕರು ಹೆತ್ತವರು ಹಾಗೂ 500ಕ್ಕೂ ಅಧಿಕ ವಿದ್ಯಾರ್ಥಿಗಳು ಈ ಕಾರ್ಯಕ್ರಮಕ್ಕೆ ಸಾಕ್ಷಿಗಳಾದರು.

Related posts

ಧರ್ಮಸ್ಥಳದಿಂದ ಆನ್‌ಲೈನ್ ಜಾಗೃತಿ ಕಾರ್ಯಕ್ರಮ; ಕುಂಭಶ್ರೀ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ವೀಕ್ಷಣೆ

Suddi Udaya

ಜ.8-12: ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ : ಅರಸರಾದ ಡಾ. ಪದ್ಮಪ್ರಸಾದ್ ಅಜಿಲರ ನೇತೃತ್ವದಲ್ಲಿ ಪೂರ್ವಾಸಿದ್ದತಾ ಸಭೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ಬಸ್ಸು ಪಾಸು ವಿತರಣೆ

Suddi Udaya

ಧರ್ಮಸ್ಥಳ ಪ್ರಾ. ಆ. ಕೇಂದ್ರದ ಹಿರಿಯ ಮಹಿಳಾ ಆರೋಗ್ಯ ಸುರಕ್ಷಾಧಿಕಾರಿ ವಿಜಯಲಕ್ಷ್ಮಿ ಕೆ. ಎಸ್. ಸೇವಾ ನಿವೃತ್ತಿ.

Suddi Udaya

ಕೈಲಾರು ರಾಜಗೋಪಾಲ್ ಭಟ್ ರಿಂದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರಿಗೆ ವಾಸ್ತು ಗಿಡ ಸಮರ್ಪಣೆ

Suddi Udaya

ಅರಸಿನಮಕ್ಕಿ: ವಿಶ್ವ ಮಹಿಳಾ ದಿನ ಹಾಗೂ ಅರಸಿನಮಕ್ಕಿ ಗೊಂಚಲು ಸ್ತ್ರೀ ಶಕ್ತಿ ಸಂಘದ ಬೆಳ್ಳಿಹಬ್ಬದ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ

Suddi Udaya
error: Content is protected !!