July 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕಿನ 212 ಫಲಾಭನುವಿಗಳಿಗೆ ವಿದ್ಯುತ್ ಚಾಲಿತ: ಹೊಲಿಗೆ ಯಂತ್ರ ಹಾಗೂ ಉಪಕರಣಗಳ ವಿತರಣೆ

ಬೆಳ್ತಂಗಡಿ: ದ.ಕ ಜಿಲ್ಲಾ ಪಂಚಾಯತ್, ಗ್ರಾಮೀಣ ಕೈಗಾರಿಕಾ ವಿಭಾಗ ಮಂಗಳೂರು ಹಾಗೂ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಇದರ ವತಿಯಿಂದ ಬೆಳ್ತಂಗಡಿ ತಾಲೂಕಿನ ಅರ್ಹ 212 ಫಲಾನುಭವಿಗಳಿಗೆ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ಹಾಗೂ ಉಚಿತ ಸುಧಾರಿತ ಉಪಕರಣಗಳನ್ನು ಜು.28ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾಭವನದಲ್ಲಿ ನಡೆದ ಸಮಾರಂಭದಲ್ಲಿ ಶಾಸಕ ಹರೀಶ್ ಪೂಂಜ ಅವರು ಫಲಾನುಭವಿಗಳಿಗೆ ವಿತರಿಸಿದರು.

ನಂತರ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಹರೀಶ್ ಪೂಂಜ ಅವರು ವೃತ್ತಿ ಬದುಕು ನಡೆಸುತ್ತಿರುವವರನ್ನು ಗುರುತಿಸಿ, ಅವರಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ತಲುಪಿಸುವ ಕಾರ್ಯವನ್ನು ಬೆಳ್ತಂಗಡಿಯಲ್ಲಿ ನಿರಂತರವಾಗಿ ಮಾಡಲಾಗುತ್ತಿದೆ. ಸರ್ಕಾರದ ಎಲ್ಲ ಯೋಜನೆಗಳನ್ನು ಪಾರದರ್ಶಕವಾಗಿ ಫಲಾನುಭವಿಗಳಿಗೆ ತಲುಪಿಸುವ ಕೆಲಸವನ್ನು ಮುಂದುವರಿಸಲಾಗುವುದು. ವಿತರಿಸಲಾದ ಸಲಕರಣೆಗಳು ಫಲಾನುಭವಿಗಳ ಬದುಕಿಗೆ ಶಕ್ತಿಯಾಗಿ, ಆರ್ಥಿಕವಾಗಿ ಸ್ವಾವಲಂಬಿಗಳಾಗಲು ನೆರವಾಗಲಿ ಎಂದು ಹೇಳಿದರು.


ಜಿಲ್ಲಾ ಪಂಚಾಯತ್ ಕೈಗಾರಿಕಾ ವಿಭಾಗದ ಉಪನಿರ್ದೇಶಕ ಮಂಜುನಾಥ ಹೆಗ್ಡೆ ಅವರು ಸರಕಾರದಿಂದ ದೊರೆಯುವ ವಿವಿಧ ಸೌಲಭ್ಯಗಳ ಮಾಹಿತಿ ನೀಡಿದರು. ವೇದಿಕೆಯಲ್ಲಿ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಮಂಜು ಅವರು ಉಪಸ್ಥಿತರಿದ್ದರು. ಜಿಲ್ಲಾ ಪಂಚಾಯತ್ ಕೈಗಾರಿಕಾ ವಿಭಾಗದ ಉಪನಿರ್ದೇಶಕ ಮಂಜುನಾಥ ಹೆಗ್ಡೆ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.

Related posts

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಒಳಗೆ ನುಗ್ಗಿದ ಪ್ರವಾಹ: ಕಂಪೌಂಡ್ ಕುಸಿತ

Suddi Udaya

ನಿಡ್ಲೆ: ನರೇಗಾ ಯೋಜನೆಯ ಕೂಲಿಕಾರರಿಗೆ ಆರೋಗ್ಯ ತಪಾಸಣೆ

Suddi Udaya

ಮುಂಡೂರುನಲ್ಲಿ ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇದರ 4ನೇ ನೂತನ ಮುಂಡೂರು ಶಾಖೆಯನ್ನು ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

Suddi Udaya

ಮಚ್ಚಿನ: ಕುಕ್ಕಿಲದಲ್ಲಿ ಗುಡ್ಡ ಕುಸಿದು ಮನೆ ಹಾಗೂ ಹಟ್ಟಿಗೆ ಸಂಪೂರ್ಣ ಹಾನಿ

Suddi Udaya

ಸೋಣಂದೂರು: ಬೆನೆಡಿಕ್ಟ್ ಪಿಂಟೊ ನಿಧನ

Suddi Udaya

ಲಾಯಿಲ ಗ್ರಾ.ಪಂ. ಅಧ್ಯಕ್ಷರಾಗಿ ಜಯಂತಿ ಎಂ.ಕೆ. ಉಪಾಧ್ಯಕ್ಷರಾಗಿ ಸುಗಂಧಿ ಜಗನ್ನಾಥ್ ಆಯ್ಕೆ

Suddi Udaya
error: Content is protected !!