July 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಬಂಟರ ವಲಯ ಸಮಿತಿ ವತಿಯಿಂದ ಆಟಿಡೊಂಜಿ ದಿನ

ಬೆಳ್ತಂಗಡಿ: ಬಂಟರ ವಲಯ ಸಮಿತಿ ಬೆಳ್ತಂಗಡಿ ಇದರ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮವು ಲಾಯಿಲ ಗ್ರಾಮದ ಕರ್ನೊಡಿ “ಜಯಭವಾನಿ” ಮನೆಯ ವಠಾರದಲ್ಲಿ ಜು. 26 ರಂದು ನಡೆಯಿತು.‌

ಕಾರ್ಯಕ್ರಮವನ್ನು ಬೆಳ್ತಂಗಡಿ ತಾಲೂಕು ಬಂಟರ ಸಂಘದ ಅಧ್ಯಕ್ಷ ಪ್ರಕಾಶ್ ಶೆಟ್ಟಿ ನೊಚ್ಚ ಉದ್ಘಾಟಿಸಿ ಆಟಿ ಕೂಟ ಕಾರ್ಯಕ್ರಮದ ಮಹತ್ಚವನ್ನು ತಿಳಿಸಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಹೊಟೇಲ್ ಕಂಫರ್ಟ್ ಇನ್, ದೇರಳಕಟ್ಟೆ ಮಾಲಕ ಚಂದ್ರಹಾಸ ಶೆಟ್ಟಿ ಮಾತನಾಡಿ ಆಟಿ ತಿಂಗಳಲ್ಲಿ ನಮ್ಮ ಹಿರಿಯರು ಪ್ರಕೃತಿಯಲ್ಲಿ ಸಿಗುತಿದ್ದ ವಿವಿಧ ಔಷಧಿಯ ಗುಣಗಳುಳ್ಳ ಆಹಾರ ಖಾದ್ಯಗಳನ್ನು ಸೇವಿಸುತ್ತ  ಆರೋಗ್ಯದ ಕಾಳಜಿ ವಹಿಸುತಿದ್ದರು.  ಆಗಿನ ಕಾಲದ ಆಹಾರ ಪದ್ದತಿಗಳನ್ನು, ಇಂತಹ ಕಾರ್ಯಕ್ರಮಗಳ ಮೂಲಕ ಈಗಿನ ಯುವ ಜನತೆಗೆ ಮಾಹಿತಿ ತಿಳಿಯ ಪಡಿಸುವ ಅಗತ್ಯತೆ ಇದೆ ಈ ನಿಟ್ಟಿನಲ್ಲಿ ಆಟಿದಕೂಟ ಕಾರ್ಯಕ್ರಮಗಳು ಅಯೋಜಿಸಿರುವುದು ಬಹಳ ಅರ್ಥಪೂರ್ಣ ಎಂದರು.

ಡಾ.ಮಂಜುಶ್ರೀ ಚಂದ್ರಹಾಸ್ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ವಿಶೇಷ ಸಾಧನೆಗೈದ ವಿದ್ಯಾರ್ಥಿಗಳನ್ನು ಹಾಗೂ ಗಣ್ಯರನ್ನು ಗೌರವಿಸಲಾಯಿತು. ವಲಯ ಸಮಿತಿ ಅಧ್ಯಕ್ಷ ಜಗನ್ನಾಥ್ ಶೆಟ್ಟಿ ಕರ್ನೊಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮ ಇಷ್ಟೊಂದು ಅಚ್ಚುಕಟ್ಟಾಗಿ ಮೂಡಿಬರಲು ಹಾಗೂ ಯಶಸ್ವಿಯಾಗಿ ನಡೆಯಲು ಶ್ರಮ ವಹಿಸಿದ ಎಲ್ಲರನ್ನು ಅಭಿನಂದಿಸಿದರು. ಮುಖ್ಯ ಅತಿಥಿಗಳಾಗಿ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಜಿತ್ ಜಿ ಶೆಟ್ಟಿ, ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷ ಜಯಂತ ಶೆಟ್ಟಿ ಭಂಡಾರಿಗುಡ್ಡೆ, ಮಹಿಳಾ ವಿಭಾಗದ ಅಧ್ಯಕ್ಷೆ ವಂದನ ರೈ, ವಿಠಲ ಶೆಟ್ಟಿ ಶ್ರದ್ಧಾ ಲಾಯಿಲ,   ಸುರೇಶ್ ಶೆಟ್ಟಿ, ವಸಂತ ಶೆಟ್ಟಿ, ಸಂಸ್ಕ್ರತಿ ಶೆಟ್ಟಿ ಸೇರಿದಂತೆ ವಲಯ ಸಮಿತಿಗಳ ಅಧ್ಯಕ್ಷರು ಉಪಸ್ಥಿತರಿದ್ದರು. ವಲಯ ಸಮಿತಿ ಕಾರ್ಯದರ್ಶಿ ಆಶೋಕ್ ಶೆಟ್ಟಿ ಲಾಯಿಲ ಪ್ರಸ್ತಾವಿಸಿ ಸ್ವಾಗತಿಸಿದರು.ರಘಚಂದ್ರ ಶೆಟ್ಟಿ ದನ್ಯವಾದವಿತ್ತರು.ಸೋನಾಕ್ಷಿ ವಿಭ ರೈ ಕಾರ್ಯಕ್ರಮ ನಿರ್ವಹಿಸಿದರು.

ಬೆಳಗ್ಗಿನಿಂದ ಸಂಜೆಯವರೆಗೆ ಪುಟಾಣಿ ಮಕ್ಕಳು ಸಹಿತ ಎಲ್ಲರಿಗೂ ಕ್ರೀಡಾಕೂಟವ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು.

ವಲಯದ ವಿವಿಧ ಮನೆಗಳಿಂದ ತಯಾರಿಸಿ ತಂದಿದ್ದ ಸುಮಾರು 70 ಕ್ಕಿಂತಲೂ ಅಧಿಕ ಬಗೆಯ ವಿವಿಧ ಆಹಾರ ಖಾಧ್ಯಗಳು ಎಲ್ಲರ ಗಮನಸೆಳೆದವು. ಸಂಜೆ ಪುರುಷರ ,ಮಹಿಳೆಯರ ಹಗ್ಗಜಗ್ಗಾಟ ಕ್ರೀಡೆಯೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು.ಲಾಯಿಲ, ನಡ, ಕನ್ಯಾಡಿ,ಗುರಿಪಳ್ಳ, ನಾವೂರು,ಸವಣಾಲು,ಮೇಲಂತಬೆಟ್ಟು,ಬೆಳ್ತಂಗಡಿ ಗ್ರಾಮಸಮಿತಿಗಳ ಸುಮಾರು 700 ಮಂದಿ ಬಂಟ ಭಾಂಧವರು ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಪಾಲ್ಗೊಂಡರು.ತಾಲೂಕಿನ‌ ವಿವಿಧ ವಲಯ ಸಮಿತಿಗಳ ಪದಾಧಿಕಾರಿಗಳು ಆಗಮಿಸಿ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

Related posts

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಕುದ್ರೋಳಿ ನವರಾತ್ರಿ ಮಹೋತ್ಸವದಲ್ಲಿ ಸ್ವಯಂ ಸೇವಕರಾಗಿ ಸೇವೆ

Suddi Udaya

ಕೈಕಂಬ- ಅತ್ಯಡ್ಕ- ಬಳ್ಳಿತೋಟ- ಬೋಜಾರ- ಮೂಡಾಯಿಬೆಟ್ಟು ಸಂಪರ್ಕಿಸುವ ಕೈಕಂಬ ಸೇತುವೆ ಶಿಥಿಲ: ಘನ ವಾಹನ ಸಂಚಾರ ನಿಷೇಧಿಸಿ ನಾವೂರು ಗ್ರಾ.ಪಂ. ನಿಂದ ಫಲಕ ಅಳವಡಿಕೆ

Suddi Udaya

ಬೆಳ್ತಂಗಡಿ:ರಬ್ಬರ್ ಕೃಷಿ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಕೋರಿ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ಕೆ.ವಸಂತ ಬಂಗೇರ ರವರ ನುಡಿನಮನ ಕಾರ್ಯಕ್ರಮಕ್ಕೆ ಆಹ್ವಾನ

Suddi Udaya

ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯಿಂದ ನಗರ ಸಂಕೀರ್ತನೆ, ರಾಮತಾರಕ ಮಂತ್ರ

Suddi Udaya

ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಯಕ್ಷಧ್ರುವ-ಯಕ್ಷಶಿಕ್ಷಣ ತರಗತಿಗೆ ಚಾಲನೆ

Suddi Udaya
error: Content is protected !!