32.2 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಬಂಟರ ವಲಯ ಸಮಿತಿ ವತಿಯಿಂದ ಆಟಿಡೊಂಜಿ ದಿನ

ಬೆಳ್ತಂಗಡಿ: ಬಂಟರ ವಲಯ ಸಮಿತಿ ಬೆಳ್ತಂಗಡಿ ಇದರ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮವು ಲಾಯಿಲ ಗ್ರಾಮದ ಕರ್ನೊಡಿ “ಜಯಭವಾನಿ” ಮನೆಯ ವಠಾರದಲ್ಲಿ ಜು. 26 ರಂದು ನಡೆಯಿತು.‌

ಕಾರ್ಯಕ್ರಮವನ್ನು ಬೆಳ್ತಂಗಡಿ ತಾಲೂಕು ಬಂಟರ ಸಂಘದ ಅಧ್ಯಕ್ಷ ಪ್ರಕಾಶ್ ಶೆಟ್ಟಿ ನೊಚ್ಚ ಉದ್ಘಾಟಿಸಿ ಆಟಿ ಕೂಟ ಕಾರ್ಯಕ್ರಮದ ಮಹತ್ಚವನ್ನು ತಿಳಿಸಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಹೊಟೇಲ್ ಕಂಫರ್ಟ್ ಇನ್, ದೇರಳಕಟ್ಟೆ ಮಾಲಕ ಚಂದ್ರಹಾಸ ಶೆಟ್ಟಿ ಮಾತನಾಡಿ ಆಟಿ ತಿಂಗಳಲ್ಲಿ ನಮ್ಮ ಹಿರಿಯರು ಪ್ರಕೃತಿಯಲ್ಲಿ ಸಿಗುತಿದ್ದ ವಿವಿಧ ಔಷಧಿಯ ಗುಣಗಳುಳ್ಳ ಆಹಾರ ಖಾದ್ಯಗಳನ್ನು ಸೇವಿಸುತ್ತ  ಆರೋಗ್ಯದ ಕಾಳಜಿ ವಹಿಸುತಿದ್ದರು.  ಆಗಿನ ಕಾಲದ ಆಹಾರ ಪದ್ದತಿಗಳನ್ನು, ಇಂತಹ ಕಾರ್ಯಕ್ರಮಗಳ ಮೂಲಕ ಈಗಿನ ಯುವ ಜನತೆಗೆ ಮಾಹಿತಿ ತಿಳಿಯ ಪಡಿಸುವ ಅಗತ್ಯತೆ ಇದೆ ಈ ನಿಟ್ಟಿನಲ್ಲಿ ಆಟಿದಕೂಟ ಕಾರ್ಯಕ್ರಮಗಳು ಅಯೋಜಿಸಿರುವುದು ಬಹಳ ಅರ್ಥಪೂರ್ಣ ಎಂದರು.

ಡಾ.ಮಂಜುಶ್ರೀ ಚಂದ್ರಹಾಸ್ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ವಿಶೇಷ ಸಾಧನೆಗೈದ ವಿದ್ಯಾರ್ಥಿಗಳನ್ನು ಹಾಗೂ ಗಣ್ಯರನ್ನು ಗೌರವಿಸಲಾಯಿತು. ವಲಯ ಸಮಿತಿ ಅಧ್ಯಕ್ಷ ಜಗನ್ನಾಥ್ ಶೆಟ್ಟಿ ಕರ್ನೊಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮ ಇಷ್ಟೊಂದು ಅಚ್ಚುಕಟ್ಟಾಗಿ ಮೂಡಿಬರಲು ಹಾಗೂ ಯಶಸ್ವಿಯಾಗಿ ನಡೆಯಲು ಶ್ರಮ ವಹಿಸಿದ ಎಲ್ಲರನ್ನು ಅಭಿನಂದಿಸಿದರು. ಮುಖ್ಯ ಅತಿಥಿಗಳಾಗಿ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಜಿತ್ ಜಿ ಶೆಟ್ಟಿ, ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷ ಜಯಂತ ಶೆಟ್ಟಿ ಭಂಡಾರಿಗುಡ್ಡೆ, ಮಹಿಳಾ ವಿಭಾಗದ ಅಧ್ಯಕ್ಷೆ ವಂದನ ರೈ, ವಿಠಲ ಶೆಟ್ಟಿ ಶ್ರದ್ಧಾ ಲಾಯಿಲ,   ಸುರೇಶ್ ಶೆಟ್ಟಿ, ವಸಂತ ಶೆಟ್ಟಿ, ಸಂಸ್ಕ್ರತಿ ಶೆಟ್ಟಿ ಸೇರಿದಂತೆ ವಲಯ ಸಮಿತಿಗಳ ಅಧ್ಯಕ್ಷರು ಉಪಸ್ಥಿತರಿದ್ದರು. ವಲಯ ಸಮಿತಿ ಕಾರ್ಯದರ್ಶಿ ಆಶೋಕ್ ಶೆಟ್ಟಿ ಲಾಯಿಲ ಪ್ರಸ್ತಾವಿಸಿ ಸ್ವಾಗತಿಸಿದರು.ರಘಚಂದ್ರ ಶೆಟ್ಟಿ ದನ್ಯವಾದವಿತ್ತರು.ಸೋನಾಕ್ಷಿ ವಿಭ ರೈ ಕಾರ್ಯಕ್ರಮ ನಿರ್ವಹಿಸಿದರು.

ಬೆಳಗ್ಗಿನಿಂದ ಸಂಜೆಯವರೆಗೆ ಪುಟಾಣಿ ಮಕ್ಕಳು ಸಹಿತ ಎಲ್ಲರಿಗೂ ಕ್ರೀಡಾಕೂಟವ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು.

ವಲಯದ ವಿವಿಧ ಮನೆಗಳಿಂದ ತಯಾರಿಸಿ ತಂದಿದ್ದ ಸುಮಾರು 70 ಕ್ಕಿಂತಲೂ ಅಧಿಕ ಬಗೆಯ ವಿವಿಧ ಆಹಾರ ಖಾಧ್ಯಗಳು ಎಲ್ಲರ ಗಮನಸೆಳೆದವು. ಸಂಜೆ ಪುರುಷರ ,ಮಹಿಳೆಯರ ಹಗ್ಗಜಗ್ಗಾಟ ಕ್ರೀಡೆಯೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು.ಲಾಯಿಲ, ನಡ, ಕನ್ಯಾಡಿ,ಗುರಿಪಳ್ಳ, ನಾವೂರು,ಸವಣಾಲು,ಮೇಲಂತಬೆಟ್ಟು,ಬೆಳ್ತಂಗಡಿ ಗ್ರಾಮಸಮಿತಿಗಳ ಸುಮಾರು 700 ಮಂದಿ ಬಂಟ ಭಾಂಧವರು ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಪಾಲ್ಗೊಂಡರು.ತಾಲೂಕಿನ‌ ವಿವಿಧ ವಲಯ ಸಮಿತಿಗಳ ಪದಾಧಿಕಾರಿಗಳು ಆಗಮಿಸಿ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

Related posts

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾನವೀಯತೆ ಮೆರೆದ ಉಜಿರೆಯ ದಿಕ್ಷೀತಾ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಮತ್ತು ಡಿ.ಎಡ್. ಕಾಲೇಜಿನಲ್ಲಿ ಸಾಂಕ್ರಮಿಕ ರೋಗಗಳ ಜಾಗೃತಿ ಕಾರ್ಯಕ್ರಮ

Suddi Udaya

ಕಳಿಯ: ಬಾಕಿಮಾರು ನಿವಾಸಿ ಶ್ರೀಮತಿ ರುಕ್ಮಿಣಿ ನಿಧನ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಚಾರ ಮಂಟಪ ಕಾರ್ಯಕ್ರಮ

Suddi Udaya

ಬೆಂದ್ರಾಳ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ನಾವೂರು: ಮುರ ಮದರಸದಲ್ಲಿ ಮಾದಕ ದ್ರವ್ಯ ವಿರುದ್ಧದ ಅಭಿಯಾನ ಹಾಗೂ ಸ್ನೇಹ ಸಹವಾಸ ಶಿಬಿರ

Suddi Udaya
error: Content is protected !!