27.8 C
ಪುತ್ತೂರು, ಬೆಳ್ತಂಗಡಿ
September 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಾಣಿ ಆಂ.ಮಾ. ಶಾಲೆಯ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿ ರಾಜೇಶ್ ಶೆಟ್ಟಿ, ಉಪಾಧ್ಯಕ್ಷರಾಗಿ ರಾಧಿಕ ಕೆ. ಕಾಮತ್ ಆಯ್ಕೆ


ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಸಭೆಯಲ್ಲಿ 2026-27ನೇ ಶೈಕ್ಷಣಿಕ ವರ್ಷದ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ರೇಷ್ಮೆರೋಡ್ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ರಾಧಿಕ ಕೆ ಕಾಮತ್ ಗುರುವಾಯನಕೆರೆ ಇವರನ್ನು ಆಯ್ಕೆ ಮಾಡಲಾಯಿತು.

ವಾಣಿ ವಿದ್ಯಾಸಂಸ್ಥೆಯ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ರವರು ಅಧ್ಯಕ್ಷತೆ ವಹಿಸಿದ್ದರು. ವಾಣಿ ವಿದ್ಯಾಸಂಸ್ಥೆಯ ಕಾರ್ಯದರ್ಶಿಗಳಾದ ಗಣೇಶ್ ಗೌಡ ನೋಟರಿ ವಕೀಲರು ಬೆಳ್ತಂಗಡಿ, ವಾಣಿ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಪ್ರಸಾದ್ ಕುಮಾರ್, 2025-26 ನೇ ಸಾಲಿನ ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷ ಶೇಖರ್ ಶೆಟ್ಟಿ, ಪ್ರೌಢ ಶಾಲಾ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ ಕೆ ಹಾಗೂ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಹಾಸಿನಿ.ಎ ಇವರು ಉಪಸ್ಥಿತರಿದ್ದರು.

ಆಯ್ಕೆ ಪ್ರಕ್ರಿಯೆಯನ್ನು ವಾಣಿ ಪ್ರೌಢ ಶಾಲಾ ಶಿಕ್ಷಕಿ ಶ್ರೀಮತಿ ಮೊಹನಾಂಗಿ ಹೆಚ್. ನಿರ್ವಹಿಸಿದರು. ಶಿಕ್ಷಕಿ ಶ್ರೀಮತಿ ಗೀತಾ , ಸುದೀಪ್.ಡಿ ಕಾರ್ಯಕ್ರಮ ನಿರೂಪಿಸಿದರು.

Related posts

ಭಾರೀ ಗಾಳಿ ಮಳೆ: ಪಡಂಗಡಿ ವ್ಯಾಪ್ತಿಯಲ್ಲಿ ಮನೆ ಮೇಲೆ ಹಾಗೂ ರಸ್ತೆಗೆ ಬಿದ್ದ ಮರ : ಅಪಾರ ಹಾನಿ

Suddi Udaya

ಶಿಶಿಲ ಅಂಗನವಾಡಿ ಕೇಂದ್ರಕ್ಕೆ ಬ್ಯಾಂಕ್ ಆಫ್ ಬರೋಡದಿಂದ ಕುರ್ಚಿ ಹಾಗೂ ಮೇಜು ಕೊಡುಗೆ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಮಂಗಳೂರಿನ ಯಕ್ಷ ಧ್ರುವ ಪಟ್ಲ ಫೌಂಡೇಶನ್ ಸಹಯೋಗದೊಂದಿಗೆ’ಯಕ್ಷ ಶಿಕ್ಷಣ’ ಕಾರ್ಯಕ್ರಮದ ಉದ್ಘಾಟನೆ

Suddi Udaya

ಕಾಂಗ್ರೆಸ್ ಪಕ್ಷಕ್ಕಾಗಿ ಮಾಡಿದ ತ್ಯಾಗ ಹೋರಾಟಕ್ಕೆ ಹೈಕಮಾಂಡ್ ಸೂಕ್ತ ಸ್ಥಾನಮಾನ ನೀಡಿದೆ: ಮೋಹನ್ ಗೌಡ ಕಲ್ಮಂಜ

Suddi Udaya

ಕೊಕ್ಕಡ: ಎಂಡೋ ಪೀಡಿತ ವಿಶೇಷ ಚೇತನರಿಗೆ ಉಚಿತ ಬಸ್ ಪಾಸ್ ವಿತರಣೆ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ದ.ಕ. ಪ್ರಥಮ , ಉಡುಪಿ ದ್ವಿತೀಯ ಸ್ಥಾನ

Suddi Udaya
error: Content is protected !!