28.3 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವಿದ್ಯಾರ್ಥಿಗಳಲ್ಲಿ ಪ್ರಕೃತಿ ಪ್ರೇಮ ಬೆಳೆಸಿದ ಎಕ್ಸೆಲ್ ಟೆಕ್ನೊ ಸ್ಕೂಲ್‌ನ ‘ನೇಚರ್ ನರ್ಚರ್ ಡೇ’

ಗುರುವಾಯನಕೆರೆ: ಅಳಿವಿನಂಚಿನಲ್ಲಿರುವ ಪ್ರಕೃತಿಯನ್ನು ಸಂರಕ್ಷಿಸಿ ಬೆಳೆಸುವ ಕುರಿತು ಮಕ್ಕಳಲ್ಲಿ ಎಳೆ ವಯಸ್ಸಿನಲ್ಲೇ ಪರಿಸರ ಜಾಗೃತಿ ಮೂಡಿಸುವ ಉದ್ದೇಶದಿಂದ ಗುರುವಾಯನಕೆರೆಯ ಎಕ್ಸೆಲ್ ಟೆಕ್ನೊ ಸ್ಕೂಲ್‌ನ ಪೂರ್ವ ಪ್ರಾಥಮಿಕ ವಿಭಾಗದಲ್ಲಿ ‘Nature Nurture Day’ ಕಾರ್ಯಕ್ರಮವನ್ನು ಆಚರಿಸಲಾಯಿತು.

ಶಾಲೆಯ ಸಂಯೋಜಕಿ ಲೀನಾ ಫ್ಲೋರಿನ್ ಪಿಂಟೋ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುಟಾಣಿ ವಿದ್ಯಾರ್ಥಿಗಳು ಹಸಿರು ಬಣ್ಣದ ಉಡುಗೆ ತೊಟ್ಟು ಸಂಭ್ರಮದಿಂದ ಪಾಲ್ಗೊಂಡರು. ಮಕ್ಕಳು ಮನೆಯಿಂದ ತಂದಿದ್ದ ಹಸಿರು ಬಣ್ಣದ ವಸ್ತುಗಳು ಹಾಗೂ ಆಟಿಕೆಗಳನ್ನು ಪ್ರದರ್ಶಿಸಿ ಎಲ್ಲರ ಗಮನ ಸೆಳೆದರು.

ವಿಶೇಷ ಆಕರ್ಷಣೆಯಾಗಿ ಕಾಡುಮನುಷ್ಯರ ವೇಷಭೂಷಣ ತೊಟ್ಟ ಪುಟಾಣಿಗಳು ಗುಹಾಕೃತಿಯಿಂದ ಹೊರಬಂದು ಪ್ರಕೃತಿಯೊಂದಿಗಿನ ಮಾನವನ ಬಾಂಧವ್ಯವನ್ನು ಮನಮಿಡಿಯುವ ರೀತಿಯಲ್ಲಿ ಬಿಂಬಿಸಿದರು. ವಿವಿಧ ವಿಭಾಗಗಳ ವಿದ್ಯಾರ್ಥಿಗಳು ಪ್ರಕೃತಿ ಸಂರಕ್ಷಣೆಯ ಕುರಿತು ಪಾತ್ರಾಭಿನಯ ಹಾಗೂ ಭಾಷಣಗಳನ್ನು ನಡೆಸಿ ಮೆಚ್ಚುಗೆ ಪಡೆದರು.

ಈ ಸಂದರ್ಭದಲ್ಲಿ ಸಂಯೋಜಕಿ ಲೀನಾ ಫ್ಲೋರಿನ್ ಪಿಂಟೋ ಅವರು ಪ್ರಕೃತಿಯ ಮಹತ್ವವನ್ನು ಮಕ್ಕಳಿಗೆ ಮನವರಿಕೆ ಮಾಡಿಕೊಟ್ಟು, ಮುಂದಿನ ದಿನಗಳಲ್ಲಿ ಪ್ರತಿದಿನದ ಪ್ರಾರ್ಥನಾ ಸಭೆಯಲ್ಲಿ ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಯ ಕುರಿತು ಮಾತನಾಡುವ ಮೂಲಕ ಜಾಗೃತಿ ಮೂಡಿಸುವಂತೆ ತಿಳಿಸಿದರು.

ಕಾರ್ಯಕ್ರಮದ ಯಶಸ್ಸಿಗೆ ಶಿಕ್ಷಕಿಯರಾದ ಗೀತಾ, ಜೋಸ್ಲಿಟಾ ಲೋಬೊ, ಪೂರ್ಣಿಮಾ ಆಚಾರ್ಯ, ಲವೀನಾ, ಪ್ರೇಮ, ವಿಲ್ಮಾ, ಚೇತನಾ ಹಾಗೂ ಬೋಧಕೇತರ ಸಿಬ್ಬಂದಿ ಸಹಕರಿಸಿದರು. ಹಸಿರುಮಯ ಕಾರ್ಯಕ್ರಮದ ಯಶಸ್ಸಿನಲ್ಲಿ ಪೋಷಕರ ಉತ್ಸಾಹಭರಿತ ಸಹಭಾಗಿತ್ವ ಮತ್ತು ಪರಿಶ್ರಮವೂ ಪ್ರಮುಖ ಪಾತ್ರ ವಹಿಸಿತು.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕರ ಹಾಗೂ ಚಿಂತನಾ ದಿನಾಚರಣೆ

Suddi Udaya

ಉಜಿರೆಯ ಶ್ರೀ ಪಂಚಮಿ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆ

Suddi Udaya

ಬೆಳ್ತಂಗಡಿಯಲ್ಲಿ ಸಮಾನ ಮನಸ್ಕರೊಂದಿಗೆ ಸಂವಾದ

Suddi Udaya

ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಬೀದಿ ನಾಯಿ ಕಡಿತದ ಮತ್ತು ರೇಬಿಸ್ ರೋಗದ ಬಗ್ಗೆ ಮಾಹಿತಿ

Suddi Udaya

ಆದಿ ದ್ರಾವಿಡ ಸಮಾಜ ಸೇವಾ ಸಂಘದ ಮೂಲಕ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದ ಕುರಿತು ಮಾಹಿತಿ ಶಿಬಿರ

Suddi Udaya

ಜ.31-ಫೆ.1: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya
error: Content is protected !!