July 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ: ಕಪಿಲಾ ನದಿ ಮಧ್ಯೆ ಸಿಲುಕಿದ ವ್ಯಕ್ತಿಯ ರಕ್ಷಣೆ


ಶಿಶಿಲ: ಇಂದು ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ಬದಿಗುಡ್ಡೆ ಎಂಬಲ್ಲಿ ಕಪಿಲಾ ನದಿ ಬಳಿಗೆ ತೆರಳಿದ ಯುವಕರಿಗೆ ನದಿಯ ಮಧ್ಯೆ ವ್ಯಕ್ತಿಯೋರ್ವರು ನಿಂತಿರುವುದು ಕಂಡು ಬಂದಿದ್ದು ಧಾರಾಕಾರ ಮಳೆ ಸುರಿಯುತ್ತಿದ್ದ ಹಿನ್ನೆಲೆಯಲ್ಲಿ ಸಂಭಾವ್ಯ ಅಪಾಯವನ್ನರಿತು ಸ್ಥಳೀಯ ಧರ್ಮಸ್ಥಳ ಶ್ರೀ ಶೌರ್ಯ ವಿಪತ್ತು ನಿರ್ವಹಣಾ ತಂಡಕ್ಕೆ ಮಾಹಿತಿ ನೀಡಿದರು.

ತಕ್ಷಣ ಸ್ಥಳಕ್ಕೆ ತೆರಳಿದ ಸ್ವಯಂ ಸೇವಕರಾದ ರಾಧಾಕೃಷ್ಣ ಗುತ್ತು ಹಾಗೂ ರಮೇಶ ಬೈರಕಟ್ಟ ಸ್ಥಳೀಯ ಪರಿಣತ ಈಜುಗಾರರಾದ ಮೋಹನ ಗೌಡ ಬದ್ರಿಜಾಲು ಇವರ ಜೊತೆ ತೆರಳಿದಾಗ ಶಿಶಿಲೇಶ್ವರ ದೇಗುಲದ ಕಿಂಡಿ ಅಣೆಕಟ್ಟಿನಿಂದ ಸುಮಾರು ಒಂಬೈನೂರು ಮೀಟರ್ ಕೆಳಗೆ ರಭಸವಾಗಿ ಹರಿಯುತ್ತಿದ್ದ ಕಪಿಲೆಯ ಎರಡು ಕವಲುಗಳ ಮಧ್ಯೆ ಅಂದಾಜು ಎಪ್ಪತ್ತು ವರ್ಷದ ವೃದ್ದರೋರ್ವರು ಕಂಗಾಲಾಗಿ ನಿಂತಿರುವುದನ್ನು ಗಮನಿಸಿದರು.

ಅವರಿಗೆ ಧೈರ್ಯ ತುಂಬಿ ಜೀವರಕ್ಷಕ ಜಾಕೆಟ್ ತೊಡಿಸಿ ಜೀವರಕ್ಷಕ ಹಗ್ಗದ ಸಹಾಯದಿಂದ ತಮ್ಮ ಜೊತೆಯಲ್ಲಿಯೇ ವೃಧ್ದರನ್ನು ಸುರಕ್ಷಿತವಾಗಿ ದಡ ತಲುಪಿಸಿದರು.

ಈ ಸಂದರ್ಭದಲ್ಲಿ ವಿಪತ್ತು ನಿರ್ವಹಣಾ ಸದಸ್ಯರಿಗೆ ಕ್ಷೇತ್ರದ ವತಿಯಿಂದ ಅಡ್ಯನಡ್ಕದ ವಾರಾಣಾಶಿ ಫಾರ್ಮ್ ಕೊಳದಲ್ಲಿ ಅಂತರ್ರಾಷ್ಟ್ರೀಯ ಮುಳುಗು ತಜ್ಞ ನೆದರ್ಲೆಂಡ್ಸ್‌ ನ ಜೆರೋಮ್ ಇವರಿಂದ ಈಜು ಹಾಗೂ ಆಳ ಮುಳುಗುವಿಕೆ ತರಬೇತಿ ನಡೆದಿರುವುದನ್ನು ಸ್ಮರಿಸಬಹುದಾಗಿದೆ.

ರಕ್ಷಣಾ ಕಾರ್ಯಾಚರಣೆಯಲ್ಲಿ ಉಮೇಶ್ ಕುಕ್ಕೆ ರೂಪೇಶ್ ಬೈಪಾಡಿ,ದಿನೇಶ್ ಬದಿಗುಡ್ಡೆ ಹಾಗೂ ಇನ್ನಿತರರು ಸಹಕರಿಸಿದರು.

Related posts

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಶವಾಗಾರ ಕೇಂದ್ರ ನಿರ್ಮಾಣಕ್ಕೆ ರೂ. 50 ಲಕ್ಷ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜರ ಮನವಿಗೆ ಸ್ಪಂದಿಸಿದ ಸರ್ಕಾರ

Suddi Udaya

ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿರ್ದೇಶಕರಾಗಿ ಮಡಂತ್ಯಾರಿನ ಜಿ. ಬಾಲಕೃಷ್ಣ ಭಂಡಾರಿ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್ ಕಾಲೇಜಿನಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಗ್ರಾಮ ಸಂಗ್ರಾಮ್

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಲಾಯಿಲ ಸೈಂಟ್ ಮೆರೀಸ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಕನ್ನಡಿಕಟ್ಟೆ ಮೊಹಿಯುದ್ದೀನ್ ಜುಮಾ ಮಸೀದಿ ವತಿಯಿಂದ ಪ್ರತಿಭಟನೆ

Suddi Udaya
error: Content is protected !!